Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Trending

    ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್

    vartha chakraBy vartha chakraDecember 18, 2025Updated:December 18, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
    ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಬುಧವಾರ ನಡೆದ ಧರಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ಮುಂದುವರಿಯಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜೊತೆ ನಿಂತು ಅವರ ಕೈ ಬಲಪಡಿಸೋಣ ಎಂದು ಕರೆ ನೀಡಿದರು.
    ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಮಹಾತ್ಮಾ ಗಾಂಧಿ ಅಥವಾ ನೆಹರು ಅವರ ಆಸ್ತಿಯಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದಲ್ಲಿ ಯಾರೇ ಅಧ್ಯಕ್ಷರಾದರೂ ಈ ಸಂಸ್ಥೆಯ ಷೇರುದಾರರಾಗುತ್ತಾರೆ. ಇದರ ಜವಾಬ್ದಾರಿ ಹೊರುತ್ತಾರೆ. ಆದರೆ ಬಿಜೆಪಿಯವರು ಯಂಗ್ ಇಂಡಿಯಾ ಸಂಸ್ಥೆ ಹಾಗೂ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಯನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತಮ್ಮ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿ ನೀಡದ ದೂರಿನ ಮೇಲೆ ನಮ್ಮ ನಾಯಕ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ ಇ.ಡಿ ತನಿಖಾ ಸಂಸ್ಥೆ ಮೂಲಕ ತನಿಖೆ ಮಾಡಿಸುತ್ತಿದ್ದಾರೆ ಎಂದು ಹೇಳಿದರು.
    ನ್ಯಾಷನಲ್ ಹೆರಾಲ್ಡ್ ಸಂಸ್ಥೆ 2 ಸಾವಿರ ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ಅದನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ನನಗೆ ಹಾಗೂ ನನ್ನ ತಮ್ಮನಿಗೆ ದೆಹಲಿ ಪೊಲೀಸರಿಂದ ನೋಟೀಸ್ ಬಂದಿತ್ತು. ನಾವು ಅವರ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಮಗೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ತಕ್ಷಣಕ್ಕೆ ವಿಚಾರಣೆಗೆ ಹಾಜರಾಗಲು ಆಗುವುದಿಲ್ಲ, ನಮಗೆ ಸಮಯಾವಕಾಶ ಬೇಕು. ನೀವು ಎಫ್ಐಆರ್ ದಾಖಲಿಸಿದ್ದು, ಅದರ ಪ್ರತಿಯನ್ನು ನೀಡಿ ಎಂದು ಅವರಿಗೆ ಕೇಳಿದ್ದೆ. ನಾನು ಯಾವ ದಾಖಲೆ ಆಧಾರದ ಮೇಲೆ ಅವರಿಗೆ ಉತ್ತರ ನೀಡಲಿ? ಎಂದು ಪ್ರಶ್ನಿಸಿದರು.
    ರಾಜಕೀಯ ಪ್ರೇರಿತ ಪ್ರಕರಣಗಳನ್ನು ನ್ಯಾಯಾಲಯ ಪರಿಗಣಿಸದೇ ಇರುವುದು ಬಿಜೆಪಿ ಮತ್ತು ಇ.ಡಿಗೆ ನೀಡಿರುವ ದೊಡ್ಡ ಸಂದೇಶ. ನ್ಯಾಯಾಲಯದ ತೀರ್ಪಿನಿಂದ ನನಗೆ ಸಂತೋಷವಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿಯ ಚಾರ್ಜ್ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲು ನ್ಯಾಯಾಲಯ ನಿರಾಕರಿಸಿದೆ. ಇದು ನನಗೆ ಸಂತೋಷ ಉಂಟುಮಾಡಿದೆ. ಇ.ಡಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ. ಇ.ಡಿ ವಿವಿಧ ಪಕ್ಷಗಳ ನಾಯಕರ ಮೇಲೆ ಅನೇಕ ಪ್ರಕರಣಗಳನ್ನು ದಾಖಲಿಸಿದೆ. ಅವರು ಆಡಳಿತರೂಡ ಬಿಜೆಪಿ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ? ಅಂತಿಮವಾಗಿ ನ್ಯಾಯ ಗೆದ್ದಿದೆ. ಸತ್ಯವನ್ನು ಎತ್ತಿ ಹಿಡಿದಿದ್ದಕ್ಕೆ ನ್ಯಾಯಸ್ಥಾನದಲ್ಲಿ ಕುಳಿತಿರುವವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.

    ಕಾಂಗ್ರೆಸ್ ಡಿ.ಕೆ ಶಿವಕುಮಾರ್ ನ್ಯಾಯ ಬಿಜೆಪಿ ರಾಜಕೀಯ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಗೆ ಕೇಳುತ್ತಾ ವಿಜಯೇಂದ್ರ ಮೊರೆ!
    Next Article ವಿಧಾನಸಭೆಯಲ್ಲಿ ಕೃಷ್ಣಭೈರೇಗೌಡ ಸವಾಲು
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_keSn on ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    • Daviddep on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektrokarniz kypit_ftsl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe