Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಬ್ಸಿಡಿ ಕತ್ತರಿಸಿದ ಮೋದಿ
    ಸುದ್ದಿ

    ಸಬ್ಸಿಡಿ ಕತ್ತರಿಸಿದ ಮೋದಿ

    vartha chakraBy vartha chakraJune 11, 2022Updated:June 11, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಆರ್ಥಿಕವಾಗಿ ದುರ್ಬಲರಿಗೆ ನೀಡಲಾಗುತ್ತಿದ್ದ ಸಬ್ಸಿಡಿಗಳಿಗೆ ಕತ್ತರಿ ಕಾರ್ಪೊರೇಟ್ ಬಂಡವಾಳಿಗರ ಜೊತೆ ದೋಸ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಎಂಟು ವರ್ಷಗಳ ಸಾಧನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ಸಬ್ಸಿಡಿಗಳನ್ನು ನೀಡುವುದರಿಂದ ಆರ್ಥಿಕತೆಯು ವೇಗ ಪಡೆಯುತ್ತದೆ ಎಂಬುದು ಅರ್ಥಶಾಸ್ತ್ರ ಗೊತ್ತಿರುವ ಪ್ರತಿಯೊಬ್ಬರಿಗೂ ಅರ್ಥವಾಗುತ್ತದೆ. ಆದರೆ ಮೋದಿ ಸರ್ಕಾರ ಮತ್ತು ಆ ಸರ್ಕಾರದ ಹಿಂದೆ ಇರುವ ಆರ್‌ಎಸ್‌ಎಸ್ ಪ್ರಣೀತ ಜನರಿಗೆ ಇದು ಅರ್ಥವಾಗುತ್ತಿಲ್ಲ ಅಥವ ಅವರು ಉದ್ದೇಶ ಪೂರ್ವಕವಾಗಿ ಜನರ ಕೈಯಲ್ಲಿ ಹಣ ಇರಬಾರದು ಎಂದು ತೀರ್ಮಾನಿಸಿಯೆ ಯೋಜನೆಗಳನ್ನು ರೂಪಿಸುತ್ತಾರೆ ಎಂದು ಟೀಕಿಸಿದ್ದಾರೆ.
    ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ತಂದು ಕೃಷಿಯನ್ನೂ ಕೂಡ ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಕೊಟ್ಟು ರೈತರನ್ನು ಸರ್ವನಾಶ ಮಾಡಲು ಹೊರಟಿತ್ತು. ಆದರೆ ರೈತರು ನಡೆಸಿದ ವೀರೋಚಿತ ಹೋರಾಟಗಳಿಂದ ಕಾಯ್ದೆಗಳನ್ನು ಕೈ ಬಿಡಬೇಕಾಯಿತು.
    ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊರೋನ ಇದ್ದ ಎರಡು ವರ್ಷ ಬಿಟ್ಟರೆ ಉಳಿದಂತೆ ನಿರಂತರವಾಗಿ ಸಬ್ಸಿಡಿಗಳಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ‌ಆರೋಪಿಸಿದ್ದಾರೆ. ಆರ್‌ಬಿಐ ನ ಮಾಹಿತಿಯಂತೆ 2012 ರಿಂದ 2013-14ರ ವರೆಗೆ ಜಿಡಿಪಿಯ ಶೇ. 2.2 ರಿಂದ 2.4 ರವರೆಗೆ ಸಬ್ಸಿಡಿ ನೀಡಲಾಗುತಿತ್ತು. ಈಗ ಅದರ ಪ್ರಮಾಣ ಶೇ.1 ಕ್ಕಿಂತ ಕೆಳಗೆ ಇಳಿದಿದೆ.
    2012 ರಲ್ಲಿ ಕೇಂದ್ರದ ಬಜೆಟ್ ಗಾತ್ರ 14.91 ಲಕ್ಷ ಕೋಟಿ. ಆಗ ಆಹಾರ, ರಸಗೊಬ್ಬರ, ಪೆಟ್ರೋಲಿಯಂನ ಮೇಲೆ ನೀಡಿದ ಸಬ್ಸಿಡಿಯ ಪ್ರಮಾಣ 2.48ಲಕ್ಷ ಕೋಟಿ. ಅಂದರೆ ಒಟ್ಟಾರೆ ಬಜೆಟ್ ನ ಶೇ. 16.61 ರಷ್ಟು ಸಂಪನ್ಮೂಲಗಳನ್ನು ಸಬ್ಸಿಡಿಗಾಗಿ ವಿಯೋಗಿಸಲಾಗಿತ್ತು. 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ಸರ್ಕಾರ ನಿರಂತರವಾಗಿ ಜನಸಾಮಾನ್ಯರ ಬದುಕನ್ನು ಹಿಂಡುವ ಕೆಲಸ ಪ್ರಾರಂಭಿಸಿದೆ. ನಿರಂತರವಾಗಿ ಸಬ್ಸಿಡಿಯನ್ನು ಕಡಿಮೆ ಮಾಡುತ್ತಾ ಬಂದಿದೆ.2017-2018 ರಲ್ಲಿ ಬಜೆಟ್ ಗಾತ್ರ 21.47 ಲಕ್ಷ ಕೋಟಿ ರೂಗಳಿದ್ದರೆ, ನೀಡಿದ ಸಬ್ಸಿಡಿ ಕೇವಲ 1.91ಲಕ್ಷ ಕೋಟಿ [ಶೇ. 8.89], 2019-20 ರಲ್ಲಿ 27.86 ಲಕ್ಷ ಕೋಟಿ ಬಜೆಟ್ ಗಾತ್ರವಾದರೆ, ಸಬ್ಸಿಡಿ ಪ್ರಮಾಣ 2.19 ಲಕ್ಷ ಕೋಟಿಯಾಯಿತು [ಶೇ.7.9]. ಇದರ ನಂತರ ಕೊರೋನ ತೀವ್ರವಾಗಿ ಬಾಧಿಸಿ, ಆರ್ಥಿಕತೆ ಕುಸಿಯತೊಡಗಿತು. ಈ ಸಂದರ್ಭದಲ್ಲಿ ಆಹಾರ ಮುಂತಾದ ವಲಯಗಳ ಸಬ್ಸಿಡಿಯನ್ನು ತುಸು ಹೆಚ್ಚಿಸಿದರು. ಆದರೆ2022-23 ರ ಬಜೆಟ್‌ನಲ್ಲಿ ಮತ್ತೆ ಕಡಿತ ಮಾಡಿದ್ದಾರೆ. ಈ ವರ್ಷ ಕೇಂದ್ರದ ಬಜೆಟ್ ಗಾತ್ರ 39.44 ಲಕ್ಷ ಕೋಟಿಗಳಷ್ಟಿದೆ. ಆದರೆ ನೀಡುತ್ತಿರುವ ಸಬ್ಸಿಡಿ ಪ್ರಮಾಣ 3.05 ಲಕ್ಷ ಕೋಟಿಗಳಷ್ಟಿದೆ, ಅಂದರೆ ಶೇ.7.7 ಮಾತ್ರ.
    ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಮೇಲೆ ಮನಮೋಹನಸಿಂಗ್ ಅವರ ಸರ್ಕಾರ ವರ್ಷಕ್ಕೆ 97 ಸಾವಿರ ಕೋಟಿ ರೂಗಳವರೆಗೂ ಸಬ್ಸಿಡಿ ನೀಡುತ್ತಿತ್ತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 125ಡಾಲರ್ ಗಳನ್ನು ಮೀರಿ ಬೆಳೆದಿದ್ದರೂ ಸಹ ದೇಶದಲ್ಲಿ ಡೀಸೆಲ್ ಬೆಲೆ 46 ರೂಪಾಯಿ ಮತ್ತು ಪೆಟ್ರೋಲ್ ಬೆಲೆ 76 ರೂಪಾಯಿ ಹಾಗು ಅಡುಗೆ ಅನಿಲದ ಬೆಲೆ 414 ರೂ ಒಳಗೆ ಇರುವಂತೆ ಮನಮೋಹನಸಿಂಗ್ ಅವರು ನೋಡಿಕೊಂಡಿದ್ದರು. ಇದರಿಂದ ಹಣದುಬ್ಬರವನ್ನು ನಿಯಂತ್ರಿಸಿ ಜನ ಸಾಮಾನ್ಯರ ಬದುಕಿನ ಮೇಲೆ ದುಷ್ಪರಿಣಾಮವಾಗದಂತೆ ನೋಡಿಕೊಂಡಿದ್ದರು ಎಂದು ವಿವರಿಸಿದ್ದಾರೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಒಂದೇ ಬೆರಳಿನಿಂದ 129.50 ಕೆಜಿ ತೂಕ ಎತ್ತಿ ವಿಶ್ವದಾಖಲೆ ಮೆರೆದ ಸ್ಟೀವ್!
    Next Article ಗುಂಡಿಟ್ಟು ಸೆರೆ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • canadian pharmacies that ship to us on ವಿಜಯೇಂದ್ರ ನಾಯಕತ್ವಕ್ಕೆ ಸೆಡ್ಡು.
    • Jgrzwd on ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.