Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್‌, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ!!
    ಸುದ್ದಿ

    ಕೋವಿಡ್‌, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ!!

    vartha chakraBy vartha chakraJune 13, 2022Updated:June 13, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಕೋವಿಡ್‌ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.
    ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
    ರಾಜಧಾನಿ ಬೆಂಗಳೂರಿನಲ್ಲಿಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
    ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್‌ ಡೋಸ್‌ ಪಡೆದುಕೊಳ್ಳಬೇಕು. ಹಾಗೆಯೇ ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ ಎಂದರು.
    ಇಲಾಖೆಯು ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದು ಸಹ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಿರಬಹುದು. ಆದರೆ ರೋಗ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲು ಆಗುವ ಪ್ರಕರಣಗಳು ತೀರಾ ಕಡಿಮೆ. ಇದನ್ನು ನಾಲ್ಕನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿಸಿಲ್ಲ ಎಂದರು.
    ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
    ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಜಿನೋಮಿಕ್‌ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು.
    ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳವಾರ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್‌ ಅವರ ಜತೆ ಪರಿಶೀಲನೆ ನಡೆಸುವುದಾಗಿಯೂ ಸಚಿವ ಸುಧಾಕರ್‌ ತಿಳಿಸಿದರು.

    Verbattle
    Verbattle
    Verbattle
    #corona #covid19 medical ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಸಾದ ಸೇವಿಸಿದ 120 ಮಂದಿ ಅಸ್ವಸ್ಥ
    Next Article ಭಾರೀ‌ ಕುಸಿತ ಕಂಡ ಷೇರು ಮಾರುಕಟ್ಟೆ: 6 ಲಕ್ಷ ಕೋಟಿ ರೂ. ನಷ್ಟ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Olcbeh on ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    • LinwoodGah on ಯಾರೇ.. ಕೂಗಾಡಲಿ…
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.