Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬ್ಲಾಕ್ ಮೇಲ್ ಯತ್ನ…ಐವರು ಅಂದರ್…!!
    ಸುದ್ದಿ

    ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬ್ಲಾಕ್ ಮೇಲ್ ಯತ್ನ…ಐವರು ಅಂದರ್…!!

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಯೂಟ್ಯೂಬ್ ಚಾನೆಲ್ ಹೆಸರೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲಾಕ್‌ ಮೇಲ್ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    ಕರ್ನಾಟಕ ಪಬ್ಲಿಕ್ ವಾಯ್ಸ್ ನ್ಯೂಸ್ ಚಾನಲ್ (ಕೆಪಿವಿ ನ್ಯೂಸ್ )ನ ಅಭಿಲಾಷ್, ಮಣಿ, ಪ್ರದೀಪ್, ಬಸವರಾಜು, ನವೀನ್‌ ಕುಮಾರ್ ಬಂಧಿತರು. ಇಂಡಿಕಾ ಕಾರಿನಲ್ಲಿ ಎರಡು ದಿನಗಳ ಹಿಂದೆ ಬಂದ ಆರೋಪಿಗಳು ಮಧ್ಯಾಹ್ನ ಅಶೋಕ ರಸ್ತೆಯಲ್ಲಿರುವ ಉಮರ್ ಷರೀಫ್ ಎಂಬವರ ಮನೆಗೆ ಬಂದಿದ್ದಾರೆ. ಕ್ಯಾಮರಾ ತೆಗೆದು ಚಿತ್ರೀಕರಣಕ್ಕೆ ಪ್ರಯತ್ನಿಸಿದಾಗ ಪರೀಫ್‌ ವಿರೋಧಿಸಿದ್ದಾರೆ.
    ಆ ವೇಳೆ ನಿಮ್ಮ ಮನೆಯಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದೀರಾ ನಾವು ಅದನ್ನು ಟಿವಿಯಲ್ಲಿ ಹಾಕುತ್ತೇವೆ ಎಂದು ಆರೋಪಿಗಳು ಬೆದರಿಸಿದ್ದಾರೆ. ಅದೇ ವೇಳೆ ಗುಂಪಿನಲ್ಲಿದ್ದ ಒಬ್ಬ ತಾನು ಬೆಂಗಳೂರಿನಿಂದ ಬಂದಿರುವ ಕ್ರೈಂ ಪೊಲೀಸ್ ಎಂದು ಹೇಳಿ ಕೂಗಾಡಿದ್ದಾನೆ.
    ಈ ವೇಳೆ ಸ್ಥಳೀಯರು ಗುಂಪುಗೂಡಿದ್ದಾರೆ. ಮಾಜಿ ಕಾರ್ಪೊರೇಟರ್ ಸುಹೇಲ್ ಬೇಗ್ ಕೂಡ ಸ್ಥಳಕ್ಕೆ ಆಗಮಿಸಿ ಕ್ರೈಂ ಪೊಲೀಸ್ ಎಂದು ಹೇಳಿದ ವ್ಯಕ್ತಿಯೊಂದಿಗೆ ಈ ಮನೆಯಲ್ಲಿ ಯಾವುದೇ ಗ್ಯಾಸ್ ರೀ-ಫಿಲ್ಲಿಂಗ್ ನಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ನೀವು ರೈಡ್ ಮಾಡಲೇಬೇಕಾದರೆ ಮಂಡಿ ಠಾಣೆ ಪೊಲೀಸರನ್ನು ಕರೆಸಿಕೊಳ್ಳಿ. ಇದು ಸೆನ್ಸಿಟಿವ್ ಏರಿಯಾ. ಸ್ಥಳೀಯ ಪೊಲೀಸರು ಇಲ್ಲದಿದ್ದರೆ ತೊಂದರೆಯಾಗಬಹುದು ಎಂದು ಹೇಳಿದ್ದಾರೆ.
    ಈ ವೇಳೆ ಆತ ಲೋಕಲ್ ಪೊಲೀಸ್ ಎಲ್ಲಾ ಯಾಕೆ ನಮಗೆ ಏನಾದರೂ ಕೊಡಿಸಿಬಿಡಿ ಎಂದು ಹೇಳುತ್ತಿದ್ದಂತೆಯೇ ಸುಹೇಲ್ ಬೇಗ್ ಅವರಿಗೆ ಈತ ನಕಲಿ ಪೊಲೀಸ್ ಎಂಬುದು ಮನವರಿಕೆಯಾಗಿದೆ.
    ತಕ್ಷಣವೇ ಮಂಡಿ ಠಾಣೆಗೆ ಕರೆ ಮಾಡಿದ್ದಾರೆ. ಐದು ಮಂದಿ ಹಾಗು ಕಾರನ್ನು ವಶಪಡಿಸಿಕೊಂಡ ಮಂಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
    ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ…

    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಉದ್ಯಮಿ ಸುಲಿಗೆ ಐಪಿಎಸ್, ಡಿವೈಎಸ್ಪಿ ವಿರುದ್ಧ ತನಿಖೆಗೆ ಆಗ್ರಹ
    Next Article ಅನೈತಿಕ ಸಂಬಂಧ ಶಂಕೆ…ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ…ಮೈಸೂರಿನಲ್ಲಿ ಭೀಕರ ಕೊಲೆ… !!
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • trnr7 on ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban
    • RonaldClore on ಯತೀಂದ್ರ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿದರು | Yathindra Siddaramaiah
    • can you buy cheap cephalexin without dr prescription on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe