Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಟಾಕಿ‌ ಸಿಡಿಸುವಾಗ ಅವಘಡ | Fire Crackers
    ಸುದ್ದಿ

    ಪಟಾಕಿ‌ ಸಿಡಿಸುವಾಗ ಅವಘಡ | Fire Crackers

    vartha chakraBy vartha chakraNovember 14, 2023Updated:November 14, 202312 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.13 -ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ಮೊದಲ ದಿನವಾದ ನಿನ್ನೆ ಒಂದೇ ದಿನ ನಗರದಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯವಾದ 29 ಪ್ರಕರಣಗಳು ದಾಖಲಾಗಿದ್ದರೆ 20 ಕ್ಕೂ ಮಂದಿಯ ಮೈಕೈಗೆ ಸುಟ್ಟಗಾಯಗಳಾಗಿವೆ
    ನಗರದಲ್ಲಿ ನಿನ್ನೆ ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ 29ಕ್ಕೂ ಹೆಚ್ಚು ಪಟಾಕಿ ಸಿಡಿತದಿಂದ ಗಾಯ ಪ್ರಕರಣಗಳು ದಾಖಲಾಗಿದ್ದು, ನಾರಾಯಣ ನೇತ್ರಾಲಯದಲ್ಲಿ 22 ಮಂದಿ ಹಾಗೂ ಮಿಂಟೋ ಆಸ್ಪತ್ರೆಯಲ್ಲಿ 7 ಮಂದಿ ಚಿಕಿತ್ಸೆಗಾಗಿ ಧಾವಿಸಿದ್ದಾರೆ.

    ಮೈಕೈಗೆ ಸುಟ್ಟಗಾಯಗೊಂಡವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಗಂಭೀರವಾದ ಗಾಯಗೊಂಡವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
    ನಾರಾಯಣ ನೇತ್ರಾಲಯದ 22 ಪ್ರಕರಣಗಳಲ್ಲಿ 10 ಮಂದಿಯ ಕಣ್ಣಿಗೆ ಗಂಭೀರ ಗಾಯಗಳಾಗಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ. 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. 4 ಮಕ್ಕಳು ಹಾಗೂ ಉಳಿದ ವಯಸ್ಕರು ಪಟಾಕಿ ಸಿಡಿತದಿಂದ ಗಾಯಗೊಂಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
    ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 7 ಪ್ರಕರಣ ದಾಖಲಾಗಿದ್ದು, ಇಬ್ಬರಿಗೆ ಗಂಭೀರವಾಗಿ ಉಳಿದ ಐವರು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನ ಕಣ್ಣಿಗೆ ಗಂಭೀರ ಗಾಯವಾಗಿದೆ. ಇಬ್ಬರಿಗೂ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
    ಪಟಾಕಿ ಹಚ್ಚುವಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಪರಿಣಾಮ ಇಂಥ ಅವಘಡಗಳಾಗುತ್ತಿವೆ. ಪಟಾಕಿಯ ಮೇಲೆ ಬಾಗಿ ಹಚ್ಚುವುದು ಅಥವಾ ಮೈಗೆ ಸಮೀಪದಲ್ಲಿ ಹಿಡಿದು ಹಚ್ಚುವುದು, ನೈಲಾನ್‌ ಬಟ್ಟೆಗಳನ್ನ ಧರಿಸಿಕೊಂಡಿರುವುದು ಇತ್ಯಾದಿಗಳಿಂದ ಕಣ್ಣಿಗೆ ಗಾಯ ಮೈಕೈಗೆ ಸುಟ್ಟ ಗಾಯಗಳಾಗಿವೆ.

    ದೀಪಾವಳಿ ಹಬ್ಬದ ವೇಳೆ ಕೇವಲ ಹಸಿರು ಪಟಾಕಿ ಸಿಡಿಸಬೇಕು ಎಂಬ ಸೂಚನೆಯ ನಡುವೆ ನಿನ್ನೆ ನಗರದೆಲ್ಲೆಡೆ ನಿಯಮಗಳನ್ನು ಮೀರಿ ಎಲ್ಲ ಮಾದರಿಯ ಪಟಾಕಿಯನ್ನು ಜನತೆ ಸಿಡಿಸಿದ್ದಾರೆ.
    ಇಂದು ಮತ್ತು ನಾಳೆ ದೀಪಾವಳಿ ಅಮಾವಾಸ್ಯೆ ಮತ್ತು ಬಲಿಪಾಡ್ಯಮಿಯಂದು ಪಟಾಕಿ ಸಿಡಿಲಾಗುತ್ತಿದ್ದು, ಬಿಬಿಎಂಪಿ ಅನುಮತಿ ನೀಡಿರುವ ಮೈದಾನಗಳಲ್ಲಿ ತೆರೆದಿರುವ ಮಳಿಗೆಗಳಲ್ಲಿ ಜನ ಪಟಾಕಿ ಖರೀದಿಸಿದರು.
    ಪ್ರತಿದಿನ ರಾತ್ರಿ 8ರಿಂದ 10ರವರೆಗಿನ 2 ತಾಸು ಅವಧಿಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರು. ಆದರೆ, ನಿನ್ನೆ ನಸುಕಿನಲ್ಲೇ ಆರಂಭವಾದ ಪಟಾಕಿ ಅಬ್ಬರ, ತಡರಾತ್ರಿವರೆಗೂ ಮುಂದುವರೆದಿತ್ತು.
    ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಜನರು ಪಟಾಕಿ ಮಳಿಗೆಗಳಲ್ಲಿ ಹಸಿರು ಪಟಾಕಿ ಕುರಿತು ವಿಚಾರಿಸಿದ್ದಾರೆ. ಆದರೆ, ಸರ್ಕಾರದ ಸೂಚನೆಯಂತೆ ಎನ್‌ಇಇಆರ್‌ಐ ಲೋಗೋ ಮತ್ತು ಕ್ಯೂ ಆರ್ ಕೋಡ್ ಇರುವ ನೈಜ ಹಸಿರು ಪಟಾಕಿ ಮಾರುಕಟ್ಟೆಯಲ್ಲಿ ಕಾಣಿಸಿಲ್ಲ. ಹೀಗಾಗಿ ದೊರೆತ ಪಟಾಕಿಗಳೆಲ್ಲವನ್ನು ಸಿಡಿಸಿದ್ದಾರೆ.

    Verbattle
    Verbattle
    Verbattle
    fire crackers
    Share. Facebook Twitter Pinterest LinkedIn Tumblr Email WhatsApp
    Previous Articleಹಂತಕರ ಬೆನ್ನು ಹತ್ತಿದ ಉಡುಪಿ ಪೊಲೀಸ್ | Murder
    Next Article ಕರೆಂಟ್ ಕಳ್ಳತನ ‌ಮಾಡಿದ ಕುಮಾರಸ್ವಾಮಿ | Kumaraswamy
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Tracymix on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LinwoodGah on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.