Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ
    Bengaluru

    Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ

    vartha chakraBy vartha chakraFebruary 11, 2023Updated:March 20, 2023118 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.11-

    ನಗರದಲ್ಲಿ ಇದೇ ಫೆ.13 ರಿಂದ ಫೆ.17ರವರೆಗೆ ನಡೆಯುತ್ತಿರುವ ಏರೋ ಇಂಡಿಯಾ ಶೋ-2023 (Aero India 2023 ) ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ ವಾಹನಗಳ‌ ಸಂಚಾರ ನಿಲುಗಡೆಯಲ್ಲಿ  ಬದಲಾವಣೆ ಮಾಡಲಾಗಿದೆ. ವೈಮಾನಿಕ ಪ್ರದರ್ಶನದ (Air show) ವೇಳೆ ವಾಹನ ಸಂಚಾರಕ್ಕೆ ಸಮಸ್ಯೆ ಆಗಲಿರುವ ಹಿನ್ನೆಲೆಯಲ್ಲಿ ಭಾರಿ ವಾಹನಗಳು ಹಾಗೂ ಬಸ್‌ಗಳು ಸೇರಿದಂತೆ ಕೆಲವೊಂದು ವಾಹನಗಳ ಸಂಚಾರವನ್ನು ಕೆಲವೆಡೆ ನಿಷೇಧಿಸಿ ಮಾರ್ಗ ಬದಲಾವಣೆ ಮಾಡಲಾಗಿದೆ.

    Air show ಹಿನ್ನೆಲೆಯಲ್ಲಿ ನಗರದ ಹಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿಷೇಧ ಮಾಡಲಾಗಿದೆ. ಲಾರಿ ಟ್ರಕ್, ಬಸ್, ಭಾರಿ ಮತ್ತು ಮಧ್ಯಮ ಸರಕು ಸಾಗಣೆ ವಾಹನ ಹಾಗು ಟ್ರ್ಯಾಕ್ಟರ್ ಸಂಚಾರ ನಿಷೇಧ ಮಾಡಲಾಗಿದೆ. ನಗರ ಸಂಚಾರ ಪೊಲೀಸರು ವೈಮಾನಿಕ ಪ್ರದರ್ಶನದ ದಿನಗಳಲ್ಲಿ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೆ ವಾಹನ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕವಾಗಿ ಕೆಲ ಬದಲಾವಣೆ ತಂದಿದ್ದಾರೆ.

    ಪ್ರಮುಖವಾಗಿ ಬೆಂಗಳೂರು ಸಂಪರ್ಕಿಸುವ ನಾಲ್ಕು ಪ್ರಮುಖ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆಯ ವಿವರ ಇಲ್ಲಿದೆ.

    ಸಂಚಾರ ನಿಷೇಧ:

    * ಬಳ್ಳಾರಿ ರಸ್ತೆಯಲ್ಲಿ – ಮೇಕ್ರಿ ಸರ್ಕಲ್ ನಿಂದ MVIT ಗೇಟ್ ವರೆಗೂ ಎರಡೂ ದಿಕ್ಕಿನಲ್ಲಿ ನಿಷೇಧ (BMTC, KSRTC ಹೊರತುಪಡಿಸಿ)

    *ಗೊರಗುಂಟೆಪಾಳ್ಯದಲ್ಲಿ ಹೆಬ್ಬಾಳ – ಹೆಣ್ಣೂರು ಕ್ರಾಸ್ ವರೆಗೆ ಎರಡೂ ದಿಕ್ಕಿನಲ್ಲಿ ಸಂಚಾರ ಮಾಡುವಂತಿಲ್ಲ

    *ನಾಗವಾರ ಜಂಕ್ಷನ್ ನಿಂದ – ಥಣಿಸಂದ್ರ ಮುಖ್ಯರಸ್ತೆ – ಬಾಗಲೂರು ಮುಖ್ಯರಸ್ತೆ – ರೇವಾ ಕಾಲೇಜ್ ಜಂಕ್ಷನ್ ವರೆಗೆ ಸಂಚಾರ ನಿಷೇಧ

    * ಬೆಂಗಳೂರು ತುಮಕೂರು ರಸ್ತೆಯಲ್ಲಿ ಚಿಕ್ಕಬಾಣಾವರ ಕಡೆಯಿಂದ ಹೆಸರಘಟ್ಟ – ಯಲಹಂಕ ರಸ್ತೆಯಲ್ಲಿ ನಿಷೇಧ   ಪರ್ಯಾಯ ಮಾರ್ಗಗಳು

    * ಚಿಕ್ಕಬಳ್ಳಾಪುರ ಕಡೆಯಿಂದ ಬರುವ ವಾಹನಗಳು ದೇವನಹಳ್ಳಿಯಿಂದ ದೊಡ್ಡಬಳ್ಳಾಪುರ – ದಾಬಸ್ ಪೇಟೆ ಮೂಲಕ ಸಂಚರಿಸವುದು.

    * ಕೆ ಆರ್ ಪುರಂ – ಹೊಸೂರು – ಚೆನ್ನೈ – ಬೆಂಗಳೂರು ಮಾರ್ಗದ ಮುಖಾಂತರ ಹೊಸಕೋಟೆ ರಸ್ತೆಯಲ್ಲಿ ಸಂಚರಿಸುವುದು

    * ತುಮಕೂರು ರಸ್ತೆಯಿಂದ ಬರುವ ವಾಹನಗಳು – CMTI ಜಂಕ್ಷನ್ ನಲ್ಲಿ ಬಲ ತಿರುವು ಪಡೆದು – ಸುಮನಹಳ್ಳಿ – ನಾಯಂಡಹಳ್ಳಿ ಸರ್ಕಲ್ – ಕನಕಪುರ ರಸ್ತೆ ಮೂಲಕ ಸಂಚಾರ ಮಾಡಬೇಕು

    ನಿಲುಗಡೆ ನಿಷೇಧ:

    * ನಾಗೇನಹಳ್ಳಿ ಗೇಟ್ ನಿಂದ ಗಂಟಿಗಾಟನಹಳ್ಳಿ ಮಾರ್ಗವಾಗಿ – ಬಳ್ಳಾರಿ ರಸ್ತೆಯ ಎರಡೂ ಬದಿ ಪಾರ್ಕಿಂಗ್ ನಿಷೇಧ

    * ಮೇಕ್ರಿ ಸರ್ಕಲ್ ನಿಂದ ದೇವನಹಳ್ಳಿವರೆಗೆ ಎರಡು ಬದಿ ಪಾರ್ಕಿಂಗ್ ನಿಷೇಧ

    * ಗೊರಗುಂಟೆಪಾಳ್ಯದಿಂದ – ಹೆಣ್ಣೂರು ಕ್ರಾಸ್ ಜಂಕ್ಷನ್ ವರೆಗೆ ಎರಡೂ ಬದಿ ನಿಷೇಧ

    * ಬಾಗಲೂರು ಮುಖ್ಯ ರಸ್ತೆಯಿಂದ – ರೇವಾವರೆಗೆ ಎರಡೂ ಬದಿ

    * ನಾಗವಾರ ಜಂಕ್ಷನ್ ನಿಂದ ಬಾಗಲೂರು ಜಂಕ್ಷನ್ ವರೆಗೆ ಪಾರ್ಕಿಂಗ್ ನಿಷೇಧ

    * ಫೆಬ್ರವರಿ 13 ರಿಂದ ಏರ್ ಶೋ ಇರುವ ಎಲ್ಲಾ ದಿನವೂ ಈ ನಿಯಮ ಅನ್ವಯ

    * ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆವರೆಗೆ ನಿಯಮ ಅನ್ವಯ.

    aero india show 2023 air show Bangalore BMT bmtc heavy vehicles india KSRTC m MVIT ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಶಿಕ್ಷಕರ ನೇಮಕಾತಿ ಅಕ್ರಮ – ಎಂಟು ಜನರ ಬಂಧನ
    Next Article ದಾಖಲೆಯ GST ಸಂಗ್ರಹ!
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DanielCix on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • DonaldBrose on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe