Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರೇ ನೋಡಿ ನಿರ್ದೇಶಕ S. K. Bhagavan
    ಮನರಂಜನೆ

    ಇವರೇ ನೋಡಿ ನಿರ್ದೇಶಕ S. K. Bhagavan

    vartha chakraBy vartha chakraFebruary 20, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕನ್ನಡ ಸಿನಿಮಾ ರಂಗದಲ್ಲಿ ಭಗವಾನ್ ಅವರ ಹೆಸರು ಚಿರಪರಿಚಿತ. ಇವರ ಹೆಸರಲ್ಲಿವೆ ಹಲವು ದಾಖಲೆಗಳು, ಸ್ಯಾಂಡಲ್ ವುಡ್ ನ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯಲ್ಪಡುತ್ತಿದ್ದ ಇವರಿನ್ನು ಕೇವಲ ನೆನಪು ಮಾತ್ರ.

    ಸದಭಿರುಚಿಯ ಹತ್ತಾರು ಚಲನಚಿತ್ರಗಳನ್ನು ಕನ್ನಡಕ್ಕೆ ನೀಡಿದ ಎಸ್.ಕೆ.ಭಗವಾನ್ (S. K. Bhagavan) 1933ರ ಜುಲೈ 5ರಂದು ಮೈಸೂರಿ (Mysore) ನಲ್ಲಿ ಜನಿಸಿದರು.  ಎಸ್.ಕೃಷ್ಣಯ್ಯಂಗಾರ್ ಇವರ ತಂದೆ. ಬ್ಯಾಂಕ್ ಅಕೌಂಟೆಂಟ್ ವೃತ್ತಿಯಲ್ಲಿದ್ದರು.  ಬಾಲ್ಯದಲ್ಲಿಯೇ ಸಂಗೀತದ ಬಗ್ಗೆ ಆಸಕ್ತಿ.  ಪ್ರೌಢಶಾಲೆ ಹಾಗೂ ಕಾಲೇಜು ವ್ಯಾಸಂಗ ಬೆಂಗಳೂರಿನಲ್ಲಿ ನಡೆಯಿತು.  ಶಾಲಾ -ಕಾಲೇಜಿನಲ್ಲಿಯೇ ನಾಟಕದ ಬಗ್ಗೆ ಆಸಕ್ತರಾಗಿ ಸ್ತ್ರೀ ಪಾತ್ರಗಳನ್ನು ಮಾಡುತ್ತಿದ್ದರು.  ಬೇರೆ ಬೇರೆ ನಾಟಕ ತಂಡಗಳು ನೀಡುತ್ತಿದ್ದ ನಾಟಕಗಳಿಂದ ಭಗವಾನ್ ಆಕರ್ಷಿತರಾದರು.  ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ (Hirannaiah Mitra Mandali) `ದೇವದಾಸಿ` ನಾಟಕದ ವಿಮಲೆ ಪಾತ್ರ ಮಾಡಿದರು.  `ಕರ್ನಾಟಕ ನಾಟಕ ಸಭಾ` ಕಂಪನಿ ಪ್ರದರ್ಶಿಸುತ್ತಿದ್ದ ವಿಶ್ವಾಮಿತ್ರ, ಗುಲೇಬಕಾವಲಿ ನಾಟಕಗಳಲ್ಲಿ ಸ್ತ್ರೀ ಪಾತ್ರಗಳನ್ನು ನಿರ್ವಹಿಸಿದರು.

    ಚಲನಚಿತ್ರ ರಂಗದಿಂದ ಆಕರ್ಷಿತಗೊಂಡ ಭಗವಾನ್, ಜಿ.ವಿ.ಅಯ್ಯರ್ (G. V. Iyer) , ಬಾಲಕೃಷ್ಣ (Balakrishna), ನರಸಿಂಹರಾಜು (Narasimharaju) ಅವರ ಪರಿಚಯ ಮಾಡಿಕೊಂಡರು.  ಜಿ.ವಿ.ಅಯ್ಯರ್, ಬಾಲಕೃಷ್ಣ ನಾಟಕಗಳಿಗೆ ಬರವಣಿಗೆಯಲ್ಲಿ ಸಹಾಯಕರಾಗಿ ಕೆಲಸ ಮಾಡಿದರು.

    ಸೂಪರ್ ಹಿಟ್ ಚಿತ್ರ `ಭಾಗ್ಯೋದಯ’  ಸಿನಿಮಾಗೆ ಕಣಗಾಲ್ ಪ್ರಭಾಕರ್ ಶಾಸ್ತಿಗಳು ಚಿತ್ರ ಸಾಹಿತ್ಯ ರಚಿಸುವಾಗ ಭಗವಾನ್ ಅವರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ಈ ವೇಳೆ ಭಗವಾನ್ ಅವರಿಗೆ ದೊರೈರಾಜ್ ಪರಿಚಯವಾಯಿತು. ಇಲ್ಲಿಂದ ಶುರುವಾದ ಸ್ನೇಹ ತುಂಬಾ ದೂರ ಹೋಯಿತು. ದೊರೈರಾಜ್ ತಮ್ಮ ಛಾಯಾಗ್ರಹಣದ `ಜಗಜ್ಯೋತಿ ಬಸವೇಶ್ವರ` ಚಿತ್ರಕ್ಕೆ ಭಗವಾನ್ ಅವರನ್ನು ಸಹಾಯಕ ನಿರ್ದೇಶಕರನ್ನಾಗಿ ನೇಮಿಸಿಕೊಳ್ಳಲು ಶಿಫಾರಸ್ಸು ಮಾಡಿದರು.  ಹೀಗೆ ದೊರೈರಾಜ್-ಭಗವಾನ್ ಒಂದಾದರು. ನಂತರದಲ್ಲಿ ದೊರೈ-ಭಗವಾನ್ ಎಂಬ ಹೆಸರು ಕನ್ನಡ ಸಿನೆಮಾ ರಂಗದಲ್ಲಿ ಹೊಸದೊಂದು ಅಧ್ಯಾಯವನ್ನು ಆರಂಭಿಸಿತು.

    ಕನ್ನಡಕ್ಕೆ ಬಾಂಡ್ ಶೈಲಿಯ ಚಿತ್ರಗಳನ್ನು ಪರಿಚಯಿಸಿದವರಲ್ಲಿ ನಿರ್ದೇಶಕ ದೊರೈ-ಭಗವಾನ್ ಜೋಡಿ ಮೊದಲಿಗರು.  ಈ ಇಬ್ಬರೂ ಸೇರಿ ನಿರ್ದೇಶಿಸಿದ ಮೊದಲ ಚಿತ್ರ `ಜೇಡರ ಬಲೆ`  ಚಿತ್ರದಲ್ಲಿ ರಾಜಕುಮಾರ್-ಜಯಂತಿ ಪ್ರಮುಖ ಪಾತ್ರದಲ್ಲಿದ್ದರು. ಗೋವಾದಲ್ಲಿ ಸಿಐಡಿ 999, ಆಪರೇಷನ್ ಜಾಕ್‌ಪಾಟ್‌ನಲ್ಲಿ ಸಿಐಡಿ 999 ಚಿತ್ರಗಳನ್ನು ಈ ಜೋಡಿ ನಿರ್ದೇಶಿಸಿತು.

    ಕಸ್ತೂರಿ ನಿವಾಸ, ಎರಡು ಕನಸು, ಬಯಲುದಾರಿ, ಗಾಳಿಮಾತು, ಚಂದನದ ಗೊಂಬೆ, ಹೊಸಬೆಳಕು, ಬೆಂಕಿಯ ಬಲೆ, ಸಮಯದ ಗೊಂಬೆ, ಯಾರಿವನು?, ಗಗನ, ನೀನು ನಕ್ಕರೆ ಹಾಲು ಸಕ್ಕರೆ, ಜೀವನ ಚೈತ್ರ ಮುಂತಾದವು ಭಗವಾನ್ ಅವರು ದೊರೈ ಅವರೊಂದಿಗೆ ನಿರ್ದೇಶಿಸಿದ ಪ್ರಮುಖ ಚಿತ್ರಗಳು.

    `ಮಾಂಗಲ್ಯ ಬಂಧನ` ಭಗವಾನ್ ಒಬ್ಬರೇ ನಿರ್ದೇಶಿಸಿರುವ ಚಿತ್ರ. ಇವರು ನಿರ್ದೇಶಿಸಿದ ಮುನಿಯನ ಮಾದರಿ  ಹಾಗೂ ಜೀವನ ಚೈತ್ರ  ಚಿತ್ರಗಳು ರಾಜ್ಯ ಸರ್ಕಾರದಿಂದ ಪ್ರಶಸ್ತಿಗೆ ಪುರಸ್ಕೃತವಾಗಿವೆ.  ರಾಜಕುಮಾರ್ ಅಭಿನಯದ ಹಲವು ಸದಭಿರುಚಿಯ ಚಿತ್ರಗಳು ಹಾಗೂ ಕಾದಂಬರಿ ಆಧರಿಸಿದ ಚಿತ್ರಗಳನ್ನು ನಿರ್ದೇಶಿಸಿದ ಕೀರ್ತಿ ಇವರದು. ಇವರು ನಿರ್ದೇಶನ ಮಾಡಿರುವ ಸುಮಾರು 40 ಚಿತ್ರಗಳಲ್ಲಿ 30 ಚಿತ್ರಗಳು ಕಾದಂಬರಿ ಆಧರಿಸಿದ ಚಿತ್ರಗಳಾಗಿವೆ ಎನ್ನುವುದು ಗಮನಾರ್ಹ.

    ಆದರ್ಶ ಚಲನಚಿತ್ರ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಭಗವಾನ್ ಅವರಿಗೆ ಸಾಲಿನಲ್ಲಿ ಪ್ರತಿಷ್ಠಿತ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ರಾಜಕುಮಾರ್ ಸೌಹಾರ್ದ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ  ಭಾಜನರಾಗಿದ್ದಾರೆ.

    Verbattle
    Verbattle
    Verbattle
    #kannadacinema #rajkumar dorai - bhagavan kannada film industry Karnataka m mi mysor Mysore NDA S. K. Bhagavan sandalwood directors ಕಾಲೇಜು ಚಲನಚಿತ್ರ ಶಾಲೆ ಶಿಕ್ಷಣ ಸಾಹಿತ್ಯ ಸಿನಿಮ ಸಿನೆಮ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous ArticleSindhuri ವಿರುದ್ಧ ಆರೋಪ – ಉತ್ತರ ಸಿಗಲೇಬೇಕಾದ ಪ್ರಶ್ನೆಗಳು
    Next Article ಕಳ್ಳತನ ಮಾಡಿದ IPS Roopa
    vartha chakra
    • Website

    Related Posts

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    January 19, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    January 18, 2026

    2 Comments

    1. kazinoukrainy on December 16, 2025 6:35 pm

      Сейчас много казино онлайн, но важно выбирать проверенные онлайн казино с выводом денег. Казино с выводом денег — ключевой момент для тех, кто играет на реальные деньги. Мне было удобно использовать topovye-kazino-onlajn.biz.ua для сравнения сайтов. Играть в казино онлайн стало проще благодаря гривневым счетам.
      Казино официальный сайт — первый признак надежности.
      Онлайн казино для Украины обычно адаптированы под местные платежи. Надежное онлайн казино всегда имеет понятные лимиты. Онлайн казино на деньги с выводом требуют внимательного подхода. Топ сайтов казино удобно использовать как ориентир.

      Reply
    2. motoshop on December 18, 2025 3:58 pm

      Искал качественные мотозапчасти и приятно удивился выбором в этом магазине. Хороший сайт, добавил в закладки https zapchasti-dlya-motocikla biz ua. Хороший вариант, если нужен магазин мотозапчастей в Киеве.
      Магазин мотозапчастей Киев — достойный выбор. Интернет магазин запчастей для мотоциклов с нормальными сроками доставки. Сравнивал несколько вариантов, этот магазин оказался удобнее. Удобно заказывать запчасти на мото прямо с телефона. Магазин запчастей для мотоциклов с нормальным сервисом. Хороший выбор для тех, кто обслуживает мото сам. Мотозапчасти Украина — достойный уровень сервиса.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಎದೆ ನಡುಗಿಸಿದ ಭೀಕರ ಹತ್ಯೆ.
    • Evo888_wxMa on ಪ್ರಿಯಕರನ ಅಪಹರಿಸಿದ ಪ್ರಿಯತಮೆ
    • Daviddek on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.