Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Amrit Paul ವಿರುದ್ಧ 1300 ಪುಟಗಳ charge sheet
    Bengaluru

    Amrit Paul ವಿರುದ್ಧ 1300 ಪುಟಗಳ charge sheet

    vartha chakraBy vartha chakraFebruary 3, 2023Updated:March 20, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3-

    ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಅಕ್ರಮ ನೇಮಕ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೊಂಡಿದ್ದ CID  ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ(ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. PSI ಆಕ್ಷಾಂಕಿ ಕುಶಾಲ್ ಕುಮಾರ್, IPS ಅಧಿಕಾರಿ ಅಮೃತ್ ಪೌಲ್ ಸೇರಿದಂತೆ ಒಟ್ಟು 8 ಮಂದಿ ಆರೋಪಿಗಳ ವಿರುದ್ಧ 1300ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪಿಎಸ್ಐ ಅಕ್ರಮ ಹಿನ್ನೆಲೆಯಲ್ಲಿ ನಗರದ 5 ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ CID, ಸದ್ಯ ಹಲಸೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿರುವ ಪಿಎಸ್ಐ ಅಭ್ಯರ್ಥಿ ಕುಶಾಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

    1300 ಪುಟಗಳ ಚಾರ್ಜ್ ಶೀಟ್ನಲ್ಲಿ 8 ಮಂದಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿ 37 ಮಂದಿ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ಕುಶಾಲ್ ಕುಮಾರ್, ಮಧ್ಯವರ್ತಿ ದರ್ಶನ್ ಗೌಡ, ಮೈಸೂರಿನ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (RPI) ಮಧು, ನೇಮಕಾತಿ ವಿಭಾಗದ ಸಿಬ್ಬಂದಿ ಹರ್ಷ, ಶ್ರೀಧರ್, ಶ್ರೀನಿವಾಸ್, DYSP ಶಾಂತಕುಮಾರ್ ಹಾಗೂ 8ನೇ ಆರೋಪಿಯಾಗಿ ADGP ಯಾಗಿದ್ದ ಅಮೃತ್ ಪೌಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ಸುಮಾರು 3065 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು. ನಂತರ ಹೆಚ್ಚುವರಿಯಾಗಿ 1406 ಪುಟಗಳ ಚಾರ್ಜ್ ಶೀಟ್ನಲ್ಲಿ‌ ಎಡಿಜಿಪಿ ಅವರ ಪಾತ್ರದ ಬಗ್ಗೆ ಉಲ್ಲೇಖಿಸಿ 1ನೇ ACMM ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಾಗಿತ್ತು. ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಅನ್ನು ಸಿಐಡಿ ಇನ್ನಷ್ಟೇ ಸಲ್ಲಿಸಬೇಕಿದೆ.

    ಕಲಾಸಿಪಾಳ್ಯ ಠಾಣೆ ಹೆಡ್ ಕಾನ್ಸ್ಟೇಬಲ್ ಹರೀಶ್ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿಯೂ ಕಳೆದ ವರ್ಷವೇ ಚಾರ್ಜ್ ಶೀಟ್ ಸಲ್ಲಿಸಿದ್ದ ಸಿಐಡಿ ಇದೀಗ ಹಲಸೂರು ಠಾಣೆಯಲ್ಲಿ ಪಿಎಸ್ಐ ಅಭ್ಯರ್ಥಿ ಕುಶಾಲ್ ವಿರುದ್ಧ ದಾಖಲಾಗಿದ್ದ ಪ್ರಕರಣ ಸಂಬಂಧ ದೋಷಾರೋಪಪಟ್ಟಿ ಸಲ್ಲಿಸಿದಂತಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಯಲಹಂಕ ನ್ಯೂಟೌನ್ ಹಾಗೂ ಕೋರಮಂಗಲದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪಿಎಸ್ಐ ಅಭ್ಯರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತನಿಖಾಧಿಕಾರಿಗಳು ಅಂತಿಮ ಹಂತದ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಸುಳ್ಳು ಹೇಳಿ 20 ಲಕ್ಷ:

    ಪ್ರಕರಣದ ಪ್ರಮುಖ ಆರೋಪಿ ಕುಶಾಲ್ ಕುಮಾರ್ ಮಾಗಡಿ ಮೂಲದವನಾಗಿದ್ದು BE ವ್ಯಾಸಂಗ ಮಾಡಿದ್ದ. ಈತನ ತಂದೆ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದು, ಉತ್ತಮ ಹಿನ್ನೆಲೆ ಹೊಂದಿದವರಾಗಿದ್ದಾರೆ. ಮಧ್ಯವರ್ತಿ ದರ್ಶನ್ ಗೌಡ ಹಾಗೂ RPI ಮಧು ಸಂಪರ್ಕಕ್ಕೆ ಬಂದಿದ್ದ. ಪಿಎಸ್ಐ ಆಗಬೇಕಾದರೆ 40 ಲಕ್ಷ ಕೊಡಬೇಕೆಂದು ಕುಶಾಲ್ಗೆ ಡಿಮ್ಯಾಂಡ್ ಮಾಡಿದ್ದರು. ಮಾತುಕತೆ ನಡೆಸಿ ಒಪ್ಪಂದದಂತೆ ಪರೀಕ್ಷೆ ಮುನ್ನವೇ 20 ಲಕ್ಷ ನಗದು ಹಣವನ್ನ ಮಧ್ಯವರ್ತಿಗಳಿಗೆ ಕೆಂಗೇರಿ BDA ಕಾಂಪ್ಲೆಕ್ಸ್ ಬಳಿ ಕುಶಾಲ್ ನೀಡಿದ್ದ.

    ಚಾರ್ಜ್ ಶೀಟ್ನಲ್ಲಿ ಏನಿದೆ:

    ಕಳೆದ 2020 ಅಕ್ಟೋಬರ್ 3ರಂದು ನಡೆದಿದ್ದ 545 ಮಂದಿ ಪಿಎಸ್ಐ ಪರೀಕ್ಷೆಯನ್ನು ಹಲಸೂರಿನ ಸೆಂಟ್ ಜಾನ್ಸ್ ಗರ್ಲ್ಸ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ. 11 ಪ್ರಶ್ನೆಗಳಿಗೆ ಉತ್ತರಿಸಿ 99 ಅಂಕಗಳನ್ನು ಗಿಟ್ಟಿಸಿಕೊಂಡಿದ್ದ. ವ್ಯವಸ್ಥಿತ ಸಂಚಿನಂತೆ ಉತ್ತರ ಪತ್ರಿಕೆಯಲ್ಲಿ ಕೇವಲ 11 ಪ್ರಶ್ನೆಗಳಿಗೆ ಮಾತ್ರ ಕುಶಾಲ್ ಕುಮಾರ್ ಉತ್ತರ ಬರೆದು ಹೊರಬಂದಿದ್ದ. ಮಧ್ಯವರ್ತಿಗಳ ನೆರವಿನಿಂದ ಪೊಲೀಸ್ ನೇಮಕಾತಿ ವಿಭಾಗದ ನೇಮಕಾತಿ ವಿಭಾಗದ ಸಿಬ್ಬಂದಿ ಶ್ರೀನಿವಾಸ್, ಶ್ರೀಧರ್ ನನ್ನ ಸಂಪರ್ಕಿಸಿದ್ದರು. ಅನುಮಾನ ಬರದಿರಲು ಪರೀಕ್ಷೆಯಲ್ಲಿ ಬರೆದಿದ್ದ ಡಾಟ್ ಪೆನ್, ಒಎಂಆರ್ ಶೀಟ್ (OMR Sheet) ನಕಲು ಪ್ರತಿ ಹಾಗೂ ಕಾರ್ಬನ್‌ ಕಾಪಿಯನ್ನು ಜೋಪಾನವಾಗಿ ಎತ್ತಿಟ್ಟುಕೊಂಡಿದ್ದ ಆರೋಪಿ ಕುಶಾಲ್, ಶ್ರೀನಿವಾಸ್ ಗೆ ಕೊಟ್ಟಿದ್ದ.

    ಚಾರ್ಜ್ ಶೀಟ್ನಲ್ಲಿ ಉಲ್ಲೇಖ:

    ಇದರಂತೆ ಹಿರಿಯ ಅಧಿಕಾರಿಗಳ ನೆರವಿನಿಂದ ಶ್ರೀಧರ್ ಹಾಗೂ ಶ್ರೀನಿವಾಸ್ 2020ರ ಅಕ್ಟೋಬರ್ 7, 8 ಹಾಗೂ 16ರಂದು ಸಿಐಡಿ ಪ್ರಧಾನ ಕಚೇರಿಯಲ್ಲಿ ಬೆಳಗಿನ ಅವಧಿಯಲ್ಲಿ ಉತ್ತರ ಪತ್ರಿಕೆಯನ್ನ ಇಡಲಾಗಿದ್ದ ಸ್ಟ್ರಾಂಗ್ ರೂಂ ಪ್ರವೇಶಿಸಿದ್ದರು. ಕುಶಾಲ್ ಬಳಸಿದ್ದ ಡಾಟ್ ಪೆನ್ ಹಾಗೂ ಒಎಂಆರ್ ಶೀಟ್ ಹಾಗೂ ಕಾರ್ಬನ್ ಮೂಲಕವೇ ಉತ್ತರವನ್ನು ಬರೆದು 99 ಅಂಕಗಳು ಬರುವಂತೆ ಅಸಲಿ ಒಂಎಆರ್ ಶೀಟ್ ನಲ್ಲಿ ತಿದ್ದಿದ್ದರು ಎಂಬ ಅಂಶವನ್ನು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Verbattle
    Verbattle
    Verbattle
    amrit paul Bangalore crime Karnataka m News ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ
    Next Article Metro ಪಿಲ್ಲರ್ ದುರಂತಕ್ಕೆ ಯಾರು ಹೊಣೆ?
    vartha chakra
    • Website

    Related Posts

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Lmchhb on ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    • Tafnxz on ಏಕಾಏಕಿ Mobile Vibrate ಗಾಭರಿಗೊಂಡ ಜನ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.