Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಬಾಂಬ್- ಬೆದರಿಕೆ ಪತ್ರ ಸೃಷ್ಟಿಸಿದ ಆತಂಕ..
    ಸುದ್ದಿ

    ವಿಮಾನದಲ್ಲಿ ಬಾಂಬ್- ಬೆದರಿಕೆ ಪತ್ರ ಸೃಷ್ಟಿಸಿದ ಆತಂಕ..

    vartha chakraBy vartha chakraAugust 9, 2022Updated:August 9, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.9- ‘ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’ ಎಂಬ ಬೆದರಿಕೆಯ ಸಂದೇಶವನ್ನು ಬರೆದ ಟಿಶ್ಯೂ ಪೇಪರ್ ಜೈಪುರ-ಬೆಂಗಳೂರು ಇಂಡಿಗೋ ವಿಮಾನದ ಶೌಚಾಯಲಯದಲ್ಲಿ ಪತ್ತೆಯಾಗಿದೆ.
    ಮಾಹಿತಿ ಪಡೆದ ಬಾಂಬ್ ನಿಷ್ಕ್ರಿಯ ದಳ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಇಂಡಿಗೋ ವಿಮಾನದಲ್ಲಿ ಶೋಧ ನಡೆಸಿದ್ದಲ್ಲದೆ ಸುಮಾರು 174 ಪ್ರಯಾಣಿಕರು ಹಾಗು ಅವರುಗಳ ಬ್ಯಾಗ್​ಗಳನ್ನು ತಪಾಸಣೆ ನಡೆಸಿದರು.
    ಮಾತ್ರವಲ್ಲದೆ ಅಷ್ಟೂ ಪ್ರಯಾಣಿಕರ ಮತ್ತು 12 ಸಿಬ್ಬಂದಿಗಳ ಕೈಬರಹ ಪರೀಕ್ಷೆ ನಡೆಸಲಾಗಿಯಿತು. ಅದರಂತೆ ಇಬ್ಬರು ಪ್ರಯಾಣಿಕರನ್ನು ಶಂಕಿತರು ಎಂದು ಗುರುತಿಸಲಾಯಿತು. ಘಟನೆಯಿಂದಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
    ವಿಮಾನದ ಸಿಬ್ಬಂದಿಯೊಬ್ಬರು ಹಿಂಭಾಗದ ಶೌಚಾಲಯದ ನೆಲದ ಮೇಲೆ ಹರಿದ ಟಿಶ್ಯೂ ಪೇಪರ್ ಅನ್ನು ನೋಡಿದರು. ಅದರಲ್ಲಿ ಬೆದರಿಕೆ ಸಂದೇಶವಿರುವುದನ್ನು ನೋಡಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ನೀಡಿದರು. ಕೂಡಲೇ ಎಚ್ಚೆತ್ತ ಕ್ಯಾಪ್ಟನ್, ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಎಚ್ಚರಿಕೆ ನೀಡಿದರು. ಅದರಂತೆ ಸಿಐಎಸ್ಎಫ್ ತಂಡ ಕೆಲವೇ ನಿಮಿಷಗಳಲ್ಲಿ ಪರಿಶೀಲನೆಗೆ ಸಜ್ಜಾಯಿತು.
    ಪ್ರಯಾಣಿಕರು ಭೀತಿಗೆ ಒಳಗಾಗಬಾರದು ಎಂದು ಯಾವುದೇ ಮಾಹಿತಿಯನ್ನು ನೀಡದೆ ವಿಮಾನವನ್ನು ಕಾರ್ಗೋ ಟರ್ಮಿನಲ್ ಬಳಿಯ ಪ್ರತ್ಯೇಕ ಕೊಲ್ಲಿಗೆ ಕೊಂಡೊಯ್ಯಲಾಯಿತು.
    ನಂತರ ಪ್ರಯಾಣಿಕರನ್ನು ಟರ್ಮಿನಲ್​ಗೆ ಕರೆದೊಯ್ದು ಪ್ರಯಾಣಿಕರ ಬ್ಯಾಗ್‌ಗಳನ್ನು ವಿಮಾನದಿಂದ ಹೊರತೆಗೆದು ಲೋಹದ ಶೋಧಕಗಳೊಂದಿಗೆ ಪರಿಶೀಲಿಸಲಾಯಿತು. ಸುಮಾರು 1 ಗಂಟೆಗಳ ಕಾಲ ನಡೆದ ಶೋಧಕಾರ್ಯ ನಂತರ ಇದು ಸುಳ್ಳು ಬೆದರಿಕೆ ಎಂದು ಘೋಷಿಸಲಾಯಿತು.
    ಶಂಕಿತರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಸಿಐಎಸ್ಎಫ್ ತಂಡವು ಪ್ರಯಾಣಿಕರ ಕೈಬರಹವನ್ನು ಪರೀಕ್ಷೆ ನಡೆಸಿದ್ದು, ಹಿಂದಿಯಲ್ಲಿ ಬರೆಯಲು ಬರದವರನ್ನು ಪರೀಕ್ಷೆಯಿಂದ ಹೊರಗಿಡಲಾಯಿತು. ನಂತರ ಇಪ್ಪತ್ತು ಜನರನ್ನು ಶಾರ್ಟ್‌ಲಿಸ್ಟ್ ಮಾಡಿ ಪರೀಕ್ಷೆ ನಡೆಸಲಾಗಿದ್ದು, ಅಂತಿಮವಾಗಿ ಇಬ್ಬರು ಶಂಕಿತರನ್ನು ಪತ್ತೆಹಚ್ಚಿ ಬರವಣಿಗೆ ಬಗ್ಗೆ ಪ್ರಶ್ನಿಸಲಾಯಿತು. ಎರಡು ಗಂಟೆಗಳ ವಿಳಂಬದ ನಂತರ ಎಲ್ಲಾ ಪ್ರಯಾಣಿಕರನ್ನು ಮನೆಗೆ ಹೋಗಲು ಅನುಮತಿಸಲಾಯಿತು. ಇಬ್ಬರು ಶಂಕಿತರ ತನಿಖೆ ಮುಂದುವರಿದಿದೆ.
    ಜೈಪುರದಿಂದ ಇಂಡಿಗೋ ವಿಮಾನ 6ಇ-556 ಭಾನುವಾರ ರಾತ್ರಿ 9.26 ಕ್ಕೆ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ವಿಮಾನದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. “ನೀಲಿ ಶಾಯಿಯಲ್ಲಿ ‘ವಿಮಾನವನ್ನು ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’ ಎಂದು ಬರೆದಿರುವ ಟಿಶ್ಯೂ ಪೇಪರ್ ಪತ್ತೆಯಾಗಿರುವುದಾಗಿ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಅನೂಪ್ ಎ ಶೆಟ್ಟಿ ಹೇಳಿದ್ದಾರೆ. ಬೆದರಿಕೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

    indigo flight
    Share. Facebook Twitter Pinterest LinkedIn Tumblr Email WhatsApp
    Previous Articleಚಾಲೆಂಜಿಂಗ್​​ ಸ್ಟಾರ್​ ದರ್ಶನ್ ಧಮ್ಕಿ ಪೊಲೀಸರಿಗೆ ನಿರ್ಮಾಪಕನ ದೂರು
    Next Article ಬಿಜೆಪಿಯಲ್ಲಿ ಬದಲಾವಣೆಯ ಪರ್ವ..?
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 76smz on ಕಲಬೆರಕೆ ಮಾಡಿದರೆ ಜೋಕೆ.
    • voxkt on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • m7k2g on ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ನಂಟು ಬಯಲು | Rameshwaram Cafe Blast
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe