Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru
    Bengaluru

    ಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru

    vartha chakraBy vartha chakraJuly 30, 202376 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.29- ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಉಗ್ರರು ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಶಂಕಿತ ಉಗ್ರ ಕೇರಳ ಮೂಲದ ಟಿ. ನಾಸೀರ್‌ನನ್ನು ಮುಖಾಮುಖಿಯಾಗಿಸಿ ಸಿಸಿಬಿ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.
    2008ರ ಬೆಂಗಳೂರಿನ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಾಸಿರ್‌ನನ್ನು ಎಂಟು ದಿನಗಳ ಕಸ್ಟಡಿಗೆ ಪಡೆದಿರುವ ಸಿಸಿಬಿ ಅಧಿಕಾರಿಗಳು ನಿನ್ನೆ ಜೈಲಿನಿಂದ ಆತನನ್ನು ಕರೆತಂದು ಮಡಿವಾಳದ ವಿಚಾರಣಾ ಕೇಂದ್ರದಲ್ಲಿಟ್ಟು ತೀವ್ರ ವಿಚಾರಣೆ ನಡೆಸಿದ್ದಾರೆ.
    ವಿಧ್ವಂಸಕ ಕೃತ್ಯಕ್ಕೆ ಸಿದ್ಧತೆ ನಡೆಸಿದ್ದಾಗ ಬಂಧಿತರಾಗಿದ್ದ ಐವರು ಆರೋಪಿಗಳು ವಿಚಾರಣೆ ವೇಳೆ ತಮ್ಮ ಪಾತ್ರಗಳ ಕುರಿತು ಬಾಯ್ಬಿಟ್ಟಿದ್ದಾರೆ. ಈ ಎಲ್ಲ ಮಾಹಿತಿಯನ್ನು ಕ್ರೋಡೀಕರಿಸಿ ನಸೀರ್‌ನನ್ನು ಪ್ರಶ್ನಿಸಲಾಗುತ್ತಿದೆ. ಮೊದಲ ದಿನ ಆತ ವಿಚಾರಣೆಗೆ ತಡವರಿಸಿದ್ದು, ಮುಂದಿನ ಹಂತದಲ್ಲಿ ಆತ ನೀಡುವ ಹೇಳಿಕೆ ಆಧರಿಸಿ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಪ್ರಕರಣ ಸಂಬಂಧ ನಸೀರ್‌ನನ್ನು 8 ದಿನಗಳು ಕಸ್ಟಡಿಗೆ ಪಡೆಯಲಾಗಿದ್ದು, ಇನ್ನುಳಿದ ಐವರ ಕಸ್ಟಡಿ ಅವಧಿಯನ್ನು ಮತ್ತೆ 10 ದಿನಗಳಿಗೆ ನ್ಯಾಯಾಲಯವು ಮುಂದುವರೆಸಿರುವುದರಿಂದ ಹೆಚ್ಚಿನ ಹೀಗಾಗಿ ಸಮಯಾವಕಾಶ ದೊರೆತಿದ್ದು, ಹಂತ ಹಂತವಾಗಿ ಪ್ರಶ್ನಿಸಲಾಗುತ್ತದೆ. ವಿಚಾರಣೆ ವೇಳೆ ನಸೀರ್‌ ಹಾಗೂ ಆತನ ಐವರು ಸಹಚರರನ್ನು ಮುಖಾಮುಖಿಯಾಗಿಸಿ ಕೂಡಾ ಪ್ರಶ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
    ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ್ದ ಜು.19 ರಂದು ಹೆಬ್ಬಾಳ ಸಮೀಪದ ಸುಲ್ತಾನ್‌ ಪಾಳ್ಯದಲ್ಲಿ ಸೈಯದ್‌ ಸುಹೇಲ್‌ಖಾನ್‌, ಪುಲಿಕೇಶಿ ನಗರದ ಮೊಹಮದ್‌ ಫೈಜಲ್‌ ರಬ್ಬಾನಿ, ಕೊಡಿಗೇಹಳ್ಳಿಯ ಮಹಮದ್‌ ಉಮರ್‌, ಜಾಹೀದ್‌ ತಬ್ರೇಜ್‌ ಹಾಗೂ ಆರ್‌.ಟಿ.ನಗರದ ಸೈಯದ್‌ ಮುದಾಸೀರ್‌ ಪಾಷರನ್ನು ಸಿಸಿಬಿ ಬಂಧಿಸಿತ್ತು.
    ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ ಐವರನ್ನು ಎಲ್‌ಇಟಿ ಸಂಘಟನೆಗೆ ಕೇರಳ ಮೂಲದ ನಸೀರ್‌ ನೇಮಕಗೊಳಿಸಿದ್ದ ಸಂಗತಿ ಬೆಳಕಿಗೆ ಬಂದಿತ್ತು. ಅಲ್ಲದೆ ವಿಧ್ವಂಸಕ ಕೃತ್ಯದ ಸಂಚಿನ ರೂವಾರಿ ಸಹ ನಸೀರ್‌ ಆಗಿದ್ದಾನೆ ಎಂಬುದು ಗೊತ್ತಾಗಿತ್ತು. ಹೀಗಾಗಿ ತನಿಖೆಗೆ ಆತನನ್ನು ವಶಕ್ಕೆ ಪಡೆದು ಸಿಸಿಬಿ ವಿಚಾರಣೆ ನಡೆಸುತ್ತಿದೆ.

    ಬ್ಯಾಂಕ್‌ ಖಾತೆಗಳ ವಿವರ:
    ವಿಧ್ವಂಸಕ ಕೃತ್ಯ ನಡೆಸಲು ಬಂಧಿತ ಐವರು ಶಂಕಿತ ಉಗ್ರರಿಗೆ ವಿದೇಶದಲ್ಲಿರುವ ಮಹಮ್ಮದ್‌ ಜುನೈದ್‌ ಆರ್ಥಿಕ ನೆರವು ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಆರೋಪಿಗಳ ಬ್ಯಾಂಕ್‌ ಖಾತೆಗಳಲ್ಲಿ ಹಣಕಾಸು ವಹಿವಾಟಿನ ಬಗ್ಗೆ ಅಧಿಕೃತ ಸಂಬಂಧಿಸಿದ ಬ್ಯಾಂಕ್‌ಗಳಿಗೆ ಪತ್ರ ಬರೆದು ಮಾಹಿತಿ ಪಡೆಯಲಾಗಿದೆ.
    ಎಲ್ಲಾ ಆರೋಪಿಗಳು ಒಂದೊಂದೇ ಬ್ಯಾಂಕ್‌ ಖಾತೆಯನ್ನು ಹೊಂದಿದ್ದಾರೆ. ಇದುವರೆಗೆ ಆರೋಪಿಗಳಿಗೆ ವಿದೇಶದಿಂದ ಎಷ್ಟುಹಣ ಬಂದಿದೆ ಎಂಬುದು ಖಚಿತವಾಗಿಲ್ಲ.
    ಕೆಲವರು 25 ಲಕ್ಷ ರೂ,15 ಲಕ್ಷ ರೂ. ಹೀಗೆ ಒಂದೊಂದು ರೀತಿ ಮಾತುಗಳು ಕೇಳಿ ಬಂದಿವೆ. ಆದರೆ ನಿಖರವಾಗಿ ಬ್ಯಾಂಕ್‌ ಖಾತೆಗಳ ಪರಿಶೀಲನೆ ಬಳಿಕ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

    Bangalore Bengaluru terror plot ಉಗ್ರ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi
    Next Article ಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ | G Parameshwar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • double happiness cigarette australia on ಕೈಲಾಸವಾಸಿಯಾದ ‘ಕಲೈವಾಣಿ’
    • australia cheap tobacco on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • australia cigerettes on BJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe