Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಗ್ ಬಾಸ್ ಫೇಕ್ ಲಾಯರ್, ಚಾನಲ್ ವಿರುದ್ಧ ವಕೀಲರ ಸಂಘ ನೋಟಿಸ್
    ಅಪರಾಧ

    ಬಿಗ್ ಬಾಸ್ ಫೇಕ್ ಲಾಯರ್, ಚಾನಲ್ ವಿರುದ್ಧ ವಕೀಲರ ಸಂಘ ನೋಟಿಸ್

    vartha chakraBy vartha chakraOctober 5, 2024Updated:October 5, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಅ,5 – ಬಿಗ್ ಬಾಸ್ 11 ಸೀಸನ್ ನಲ್ಲಿ ಲಾಯರ್ ಜಗದೀಶ್ ಎಂದು ಪ್ರಚಾರ ಪಡೆಯುತ್ತ ಮನೆಯಲ್ಲಿ ಅಲ್ಲೋಲ ಕಲ್ಲೋಲ ನಡೆಸಿದ್ದ ಜಗದೀಶ್ ವಿರುದ್ಧ ಸೀಸನ್ 9 ರ ಸ್ಪರ್ಧಿ ಪ್ರಶಾಂತ್ ಸಂಬರಗಿರವರು ಇವರು ವಕೀಲರೇ ಅಲ್ಲ ಸುಳ್ಳು ಮಾಹಿತಿಯನ್ನು ನೀಡಿ ಲಾಯರ್ ಪದವಿಯನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ದೆಹಲಿಯ ಅಡ್ವೋಕೇಟ್ ಬಾರ್ ಕೌನ್ಸಿಲ್ ನೀಡಿದ್ದ ಲೈಸೆನ್ಸ್ ಜಗದೀಶ್ ಬಗ್ಗೆ ನೀಡಿರುವ ನೋಟಿಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಇವರು ಫೇಕ್ PUC ಮಾರ್ಕ್ಸ್ ಕಾರ್ಡ್‌ ಕೊಟ್ಟು ಪದವಿ ಹಾಗೂ ಎಲ್‌ಎಲ್‌ಬಿ ಮಾಡಿ, ದೆಹಲಿಯ ಬಾರ್ ಕೌನ್ಸಿಲ್ ನಲ್ಲಿ ವಕೀಲ ವೃತ್ತಿಗೆ ಅನುಮತಿ ಪಡೆದಿದ್ದರು. ನಂತರದಲ್ಲಿ ಇವರು ನೀಡಿರುವ ಮಾರ್ಕ್ಸ್‌ ಕಾರ್ಡ್ ನಕಲಿ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲಿಕೆ ಸನ್ನದು (ಅಡ್ವೋಕೇಟ್ ಬಾರ್ ಕೌನ್ಸಿಲ್ ನೀಡಿದ್ದ ಲೈಸೆನ್ಸ್) ಅನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿತ್ತು.

    ಪಿಯುಸಿಯನ್ನೇ ಓದದೇ ನಕಲಿ ಮಾರ್ಕ್ಸ್ ಕಾರ್ಡ್ ಸೃಷ್ಟಿಸಿ, ಅದನ್ನು ಪದವಿ ಕಾಲೇಜಿಗೆ ಕೊಟ್ಟು ಡಿಗ್ರಿ ಮಾಡಿದ್ದಾರೆ. ನಂತರ, ಪದವಿ ಮೇಲೆ ಎಲ್‌ಎಲ್‌ಬಿ ಮಾಡಿದ್ದಾರೆ. ಬೆಂಗಳೂರಿನ ಬದಲು ದೆಹಲಿಗೆ ಹೋಗಿ ದೆಹಲಿ ಬಾರ್ ಕೌನ್ಸಿಲ್‌ನಲ್ಲಿ ಎಲ್‌ಎಲ್‌ಬಿ ಮೇಲೆ ಬಾರ್ ಕೌನ್ಸಿಲ್‌ನಿಂದ ವಕೀಲಿಕೆ ಸನ್ನದು ಪಡೆದಿದ್ದಾರೆ. ಇವರದ್ದು ನಕಲಿ ಸರ್ಟಿಫಿಕೇಟ್ ಎಂದು ಬಾರ್ ಕೌನ್ಸಿಲ್ ಲೈಸೆನ್ಸ್ ರದ್ದತಿಗೆ ಕೋರಿ ಹಿಮಾಂಶು ಭಾಟಿ ಎನ್ನುವವರು ಕೌನ್ಸಿಲ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ನಂತರದಲ್ಲಿ ಅಂದ್ರ ಪ್ರದೇಶದ ಕಾರ್ನುಲ್ ಅಲ್ಲಿಯೂ ಇವರ ವಕೀಲಿಕೆ ಸನ್ನದು ಅರ್ಜಿಯನ್ನು ತಿರಸ್ಕರಿಸಲಾಗಿದೆ.

    ಇದೆ ವಿಷಯವಾಗಿ ಬೆಂಗಳೂರು ವಕೀಲರ ಸಂಘ ಬಿಗ್ ಬಾಸ್ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸುತ್ತಿರುವ ಕಲರ್ಸ್ ಕನ್ನಡ ಚಾನಲ್ ಗೆ ನೋಟಿಸ್ ನೀಡಿದ್ದು ಬೆಂಗಳೂರು ವಕೀಲರ ಸಂಘ ಏಷ್ಯಾದಲ್ಲಿಯೇ ಉತ್ತಮ ಸಂಘವಾಗಿದ್ದು ಅದಕ್ಕೆ ಮಸಿ ಬಳಿಯುವುದನ್ನು ಸಹಿಸಲಾಗುವುದಿಲ್ಲ. ನಕಲಿ ಮಾಹಿತಿ ನೀಡಿ ಪದವಿ ಪಡೆದ ಜಗದೀಶ್ ರವರನ್ನು ವಕೀಲರು ಎಂದು ತೋರಿಸುತ್ತಿರುವುದು ಸಂಘಕ್ಕೆ ಮತ್ತು ಸದಸ್ಯರಿಗೆ ನೋವುಂಟು ಮಾಡಿದ್ದೂ ಇದರ ವಿರುದ್ಧ ಸಂಘದ ಸದಸ್ಯರು ಪ್ರತಿರೋಧ ವ್ಯಕ್ತ ಪಡಿಸಿದ್ದಾರೆ.

    ಕೆ.ನ್ ಜಗದೀಶ್ ರವರಿಗೆ  5 ತಿಂಗಳ ಹಿಂದೆಯೇ ‘ಕರ್ನಾಟಕ ರಾಜ್ಯ ವಕೀಲರ ಪರಿಷತ್ತು’ ಕರ್ನಾಟಕದಲ್ಲಿ ಕಾನೂನು ವೃತ್ತಿ ನಡೆಸದಂತೆ ಆದೇಶ ಹೊರಡಿಸಿರುತ್ತದೆ. ‘ದೆಹಲಿ ಬಾರ್ ಕೌನ್ಸಿಲ್’ ರವರು ಸಹ ನೋಂದಣಿ ಸಮಯದಲ್ಲಿ  ಇವರು ನೀಡಿರುವ ದಾಖಲಾತಿಯನ್ನು ಪರಿಶೀಲಿಸಿ ನಕಲಿ ಎಂದು ದೃಢ ಪಟ್ಟಾಗ ನೋಂದಣಿಯನ್ನು ರದ್ದುಗೊಳಿಸಿ ಪ್ರಮಾಣ ಪತ್ರಗಳನ್ನು ಹಿಂತಿರುಗಿಸುವಂತೆ ಆದೇಶ ನೀಡಿದೆ. ಇದನ್ನು ತಮ್ಮ ವಾಹಿನಿಯ ಮುಖ್ಯಸ್ಥರು ಪರಿಗಣಿಸಿ ಸುಳ್ಳು ಮಾಹಿತಿ ನೀಡುವುದನ್ನು ತಡೆಯಬೇಕು ಪುನಃ ಇದೆ ತಪ್ಪು ನಡೆದಲ್ಲಿ ವಾಹಿನಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಲರ್ಸ್ ಕನ್ನಡ ಚಾನಲ್ ಗೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ ಮತ್ತು ಪ್ರದಾನ ಕಾರ್ಯದರ್ಶಿ ಟಿ.ಜಿ ರವಿ ನೋಟಿಸ್ ನೀಡಿದ್ದಾರೆ

    ಈ ಫೇಕ್ ವಕೀಲ್ ಜಗದೀಶ್ ವಿರುದ್ಧ ಸುಮಾರು 20 ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ ಗಳು ಬಾಕಿ ಉಳಿದಿರುವುದನ್ನು ಉಲ್ಲೇಖಿಸಬಹುದು.

    Bangalore Entertainment Karnataka News ಅಪರಾಧ ಸುದ್ದಿ ಕಲರ್ಸ್ ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬಗರ್ ಹುಕುಂ ಅರ್ಜಿದಾರರಿಗೆ ಸಿಹಿ ಸುದ್ದಿ.
    Next Article ಗರ್ಭಿಣಿ ಮತ್ತು ಬಾಣಂತಿಯರೇ ಇವರ ಟಾರ್ಗೆಟ್.
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_akot on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • rylonnie shtori na plastikovie okna s elektroprivodom_jzSn on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • 1win_gvma on ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe