Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಮಶೇಖರ್, ಹೆಬ್ಬಾರ್ ಗೆ ಬಿಜೆಪಿಯಿಂದ ಗೇಟ್ ಪಾಸ್ | ST Somashekar
    Trending

    ಸೋಮಶೇಖರ್, ಹೆಬ್ಬಾರ್ ಗೆ ಬಿಜೆಪಿಯಿಂದ ಗೇಟ್ ಪಾಸ್ | ST Somashekar

    vartha chakraBy vartha chakraMarch 2, 202438 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.2- ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು..? ಇದು ಮಾಜಿ ಸಚಿವರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ (ST Somashekar) ಅವರಿಗೆ ಬಿಜೆಪಿ ನೀಡಿರುವ ಷೋಕಾಸ್ ನೋಟೀಸ್.
    ರಾಜ್ಯಸಭೆ ಚುನಾವಣೆ ವೇಳೆ ಪಕ್ಷದ ವಿಪ್ ಉಲ್ಲಂಘಿಸಿಬಅಡ್ಡ ಮತದಾನ ಮಾಡಿದ ಆರೋಪದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವ ಕುರಿತು ಶಾಸಕರಾದ ಎಸ್.ಟಿ.ಸೋಮ ಶೇಖರ್ ಗೆ ನೋಟೀಸ್ ನೀಡಿದೆ.
    ಅದೇ ರೀತಿ ಪಕ್ಷದ ವಿಪ್ ಇದ್ದರೂ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದ ಶಿವರಾಮ್ ಹೆಬ್ಬಾರ್‍ ಅವರಿಗೂ ನೋಟಿಸ್ ಜಾರಿ ಮಾಡಿದೆ.

    ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡರ್ ಪಾಟೀಲ್ ಅವರು ಈ ಇಬ್ಬರು ಶಾಸಕರಿಗೆ ಕಾರಣ ಕೇಳಿ ನೋಟಿಸ್ ಕಳುಹಿಸಿದ್ದು,ಮಾ.5ರೊಳಗೆ ಉತ್ತರ ನೀಡಬೇಕೆಂದು ಸೂಚಿಸಿದ್ದಾರೆ.
    ಸಂವಿಧಾನದ 10ನೇ ಶೆಡ್ಯೂಲ್‍ನಡಿ ಬರುವ ಪಕ್ಷಾಂತರ ಮತ್ತು ಅನರ್ಹತೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.
    ಕಳೆದ ಫೆ.26ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್,ಅವರಿಗೆ‌ ಬಿಜೆಪಿ ಅಧಿಕೃತ ಅಭ್ಯರ್ಥಿ ನಾರಾಯಣ ಸಾ ಭಾಂಡಗೆ ಮತ ಹಾಕುವಂತೆ ವಿಪ್ ನೀಡಲಾಗಿತ್ತು. ಅದನ್ನು ಉಲ್ಲಂಘಿಸಿದ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆಂದು ಬಿಜೆಪಿ ಚುನಾವಣೆ ಏಜೆಂಟ್ ಅರವಿಂದ ಬೆಲ್ಲದ್ ವರದಿ ನೀಡಿದ್ದಾರೆ.

    ಇನ್ನೂ ಪಕ್ಷದ ವಿಪ್ ಸ್ವೀಕರಿಸದೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ನಾಪತ್ತೆಯಾಗಿದ್ದರು.ಈ ಹಿನ್ನೆಲೆಯಲ್ಲಿ ಶಾಸಕರ ಭವನದ ಅವರ ಕೊಠಡಿಯ ಬಾಗಿಲಿಗೆ ವಿಪ್ ಪ್ರತಿ ಅಂಟಿಸಲಾಗಿತ್ತು. ಯಲ್ಲಾಪುರದ ಅವರ ನಿವಾಸಕ್ಕೆ ವಿಪ್ ರವಾನಿಸಲಾಗಿದೆ.ಆದರೆ, ಅವರು ಅನಾರೋಗ್ಯದ ಕಾರಣ ಮತದಾನಕ್ಕೆ ಬಾರದೆ ಗೈರು ಹಾಜರಾಗಿದ್ದರು. ನನಗೆ ಆರೋಗ್ಯ ಸರಿ ಇಲ್ಲದ ಕಾರಣ ನಾನು ಮತದಾನ ಮಾಡಲು ಹೋಗಿರಲಿಲ್ಲ. ಇದರಲ್ಲಿ ಯಾವುದೇ ದುರದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.
    ಆದರೆ, ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಅವರ ಕಾರಿನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದ ಹೆಬ್ಬಾಳ ಸಮೀಪದ ಮ್ಯಾನತಾಟೆಕ್ ಪಾರ್ಕ್ ಹತ್ತಿರ ಹಿಲ್ಟನ್ ರೆಸಾರ್ಟ್‍ಗೆ ಭೇಟಿ ನೀಡಿದ್ದರೆಂಬ ಮಾತು ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಇವರಿಗೂ ಷೋಕಾಸ್ ಜಾರಿ ಮಾಡಲಾಗಿದೆ.

    m ಆರೋಗ್ಯ ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಸ್ಪೋಟಕ ಹೊತ್ತು BMTC Volvo ಬಸ್ ನಲ್ಲಿ ಪ್ರಯಾಣ
    Next Article ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyPah on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • jaya9 app on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • izzapoyatulavucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe