ಬೆಂಗಳೂರು,ಜೂ.6- ಮುಂಬರುವ ಲೋಕಸಭೆ Electionಯತ್ತ ರಾಜಕೀಯ ಪಕ್ಷಗಳ ಗಮನ ನೆಟ್ಟಿದೆ. ಆಡಳಿತ ರೂಢ ಬಿಜೆಪಿಯನ್ನು ಮಣಿಸಲು ಪ್ರತಿಪಕ್ಷಗಳು ಒಂದುಗೂಡುವ ನಿಟ್ಟಿನಲ್ಲಿ ಮಾತುಕತೆಗಳು ನಡೆದಿವೆ .
ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಈ ಮಾತುಕತೆಯ ನೇತೃತ್ವವನ್ನು ವಹಿಸಿದ್ದು ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಈ ಪ್ರಕ್ರಿಯೆಯಲ್ಲಿ ಪ್ರಧಾನ ಭೂಮಿಕೆಯನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿ ವಿರುದ್ಧದ ಸಮರ ಸಾರುವನಿಟಿನಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕರ್ನಾಟಕದ ಜಾತ್ಯತೀತ ಜನತಾದಳ ಈ ಬಾರಿ ಆಶ್ಚರ್ಯಕರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳದ ಮತಗಳು ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ವರ್ಗಾವಣೆಯಾಗಿದೆ ಇದರಿಂದಾಗಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗಳಿಸಿದೆ ಬಿಜೆಪಿ ಮತ್ತು ಜೆಡಿಎಸ್ ದೊಡ್ಡ ಪ್ರಮಾಣದ ನಷ್ಟ ಅನುಭವಿಸಿವೆ.
ಜೆಡಿಎಸ್ ಹೆಚ್ಚಿನ ಪ್ರಾಬಲ್ಯ ಹೊಂದಿರುವ ಹಳೆ ಮೈಸೂರು ಪ್ರದೇಶದಲ್ಲೂ ಬಿಜೆಪಿ ಗಣನೀಯ ಮತ ಪಡೆದಿದೆ ಆದರೆ ಈ ಮತಗಳು ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಾಕಾಗಿಲ್ಲ ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಾಳಯದಲ್ಲಿ ಬೇರೆಯ ರೀತಿಯ ಚಿಂತನ-ಮಂಥನ ಮತ್ತು ಲೆಕ್ಕಾಚಾರಗಳು ನಡೆದಿವೆ.
ಬದಲಾದ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆ ಗಾಗಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆ ಇದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಷ್ಟ್ರಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ನಡುವೆ ಪೂರ್ವಭಾವಿ ಮಾತುಕತೆಗಳು ನಡೆದಿವೆ.
ಲೋಕಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳದ ಪ್ರಾಬಲ್ಯವಿರುವ ಹಾಸನ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವುದು ಉಳಿದ ಕಡೆ, ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡುವ ಕುರಿತಂತೆ ಮಾತುಕತೆಗಳು ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸುವೆ
ಅಚ್ಚರಿಯ ಹೇಳಿಕೆ:
ಈ ಬೆಳವಣಿಗೆಗಳ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದೇ ಇರುವ ಯಾವುದಾದರೂ ಒಂದು ಪಕ್ಷವನ್ನು ತೋರಿಸಿ. ಆ ನಂತರ ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುವೆ’ ಎಂದು ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಸುತ್ತಿರುವ ಪ್ರಯತ್ನದಲ್ಲಿ ಜೆಡಿಎಸ್ ಕೈ ಜೋಡಿಸಲಿದೆಯೆ?’ ಎಂಬ ಪ್ರಶ್ನೆಗೆ ಅವರು ಈ ರೀತಿ ಮರು ಸವಾಲು ಹಾಕಿದರು.ಎಲ್ಲ ಪಕ್ಷಗಳೂ ಬಿಜೆಪಿ ಜತೆ ನೇರವಾಗಿ ಅಥವ ಪರೋಕ್ಷವಾಗಿ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ ಕೆಲವು ನಾಯಕರೂ ಅವರಲ್ಲಿ ಸೇರಿದ್ದಾರೆ’ ಎಂದರು.
ಜೆಡಿಎಸ್ ಈಗ ಲೋಕಸಭಾ ಚುನಾವಣೆ ಬಗ್ಗೆ ಚಿಂತಿಸುವುದಿಲ್ಲ. ಈಗ ಪಕ್ಷದ ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆಗಳಿವೆ. ಈ ಚುನಾವಣೆಗಳಲ್ಲಿ ಪಕ್ಷ ಪಡೆಯುವ ಜನಬೆಂಬಲ ಆಧರಿಸಿ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ? ಯಾವ ಕ್ಷೇತ್ರಗಳಲ್ಲಿ? ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು.
‘ನನಗೆ ಈಗ 91 ವರ್ಷ ವಯಸ್ಸು. ಈಗ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಿಧಾನಸಭಾ ಚುನಾವಣೆಯ ಸೋಲಿನಿಂದ ಕಾರ್ಯಕರ್ತರು ಹತಾಶರಾಗಬೇಕಿಲ್ಲ. ಎಲ್ಲ ಹಂತಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು. ಪಕ್ಷವನ್ನು ಮತ್ತೆ ಬಲವಾಗಿ ಕಟ್ಟುವುದು ತಮ್ಮ ಮುಂದಿನ ಗುರಿ ಎಂದರು.
Previous Articleಈಕೆಯ ಮನೆಗೆ ಬಾಡಿಗೆಯೇ ಬೇಡವಂತೆ!
Next Article ಕೆನಡಾದ ಕಾಳ್ಗಿಚ್ಚಿನಿಂದ ಅಮೆರಿಕಾದಲ್ಲೆಲ್ಲ ಹೊಗೆಯೋ ಹೊಗೆ