Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಶಕ್ತಿ ಪ್ರದರ್ಶನ – ಒಗ್ಗಟ್ಟಿನ ಮಂತ್ರ ಪಠನ
    ರಾಜಕೀಯ

    ಬಿಜೆಪಿ ಶಕ್ತಿ ಪ್ರದರ್ಶನ – ಒಗ್ಗಟ್ಟಿನ ಮಂತ್ರ ಪಠನ

    vartha chakraBy vartha chakraSeptember 10, 2022Updated:September 10, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.10-
    ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವುದಾಗಿ ಜನ ಸ್ಪಂದನಾ ಸಮಾವೇಶದಲ್ಲಿ ಬಿಜೆಪಿ ನಾಯಕರು ಘೋಷಿಸಿದ್ದಾರೆ.
    ದೊಡ್ಡಬಳ್ಳಾಪುರದಲ್ಲಿ ಏರ್ಪಡಿಸಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಎಲ್ಲಾ ನಾಯಕರು ಒಗ್ಗಟ್ಟಿನ ಮಂತ್ರ ಪಠಿಸಿದರು.
    ಕಾರ್ಯಕರ್ತರ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯ ಪ್ರಗತಿ ವರದಿಯನ್ನು ಮುಂದಿಟ್ಟರು.
    ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಎರಡು ವರ್ಷದಲ್ಲಿ ಜಾರಿ ಮಾಡಿದ್ದ ಜನಪರ ಯೋಜನೆಗಳು, ಕೈಗೊಂಡ ಪ್ರಮುಖ ನಿರ್ಧಾರಗಳು ಮತ್ತು ತಮ್ಮ ಒಂದು ವರ್ಷದ ಆಡಳಿತದಲ್ಲಿ ಜಾರಿಯಾದ ಹೊಸ ಕಾರ್ಯಕ್ರಮಗಳು, ಈ ಕಾರ್ಯಕ್ರಮಗಳ ಪ್ರಗತಿ ಎಲ್ಲವನ್ನೂ ಎಳೆ ಎಳೆಯಾಗಿ ಬಿಡಿಸಿಟ್ಟರು.
    ಸರ್ಕಾರದ ಮುಂದಿನ ಗೊತ್ತು ಗುರಿಗಳನ್ನು ಹೇಳುವ ಜತೆಗೆ ಮುಂದಿನ ದಿನಗಳಲ್ಲಿ ಸರ್ಕಾರ ಏನೇನು ಮಾಡಲಿದೆ ಎಂಬುದರ ಸ್ಥೂಲ ಚಿತ್ರಣವನ್ನು ಮುಖ್ಯಮಂತ್ರಿಗಳು ಸಮಾವೇಶದಲ್ಲಿ ಜನರಿಗೆ ಮನವರಿಕೆ ಮಾಡಿಕೊಟ್ಟರು.
    ಅನ್ನಭಾಗ್ಯಕ್ಕೆ ಕನ್ನ ;
    ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಅನ್ನಭಾಗ್ಯದ ಅವ್ಯವಹಾರ ತನಿಖೆ ನಡೆಸುತ್ತಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವೀಗಿಡಾದರು. ಈ ರೀತಿಯ ಆಡಳಿತದ ಪಾರದರ್ಶಕತೆ ಮತ್ತು ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದು ವಾಗ್ದಾಳಿ ನಡೆಸಿದರು.
    ಅಧಿಕಾರದ ಆಸೆಗಾಗಿ, ಬಹುಮತವಿಲ್ಲದಿದ್ದರೂ ಜೆಡಿಎಸ್ ಜೊತೆ ಕೈ ಜೋಡಿಸಿದ ಸಿದ್ದರಾಮಯ್ಯನವರಿಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ’ ಎಂದು ಪ್ರಶ್ನಿಸಿದರು.
    ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿದ್ದು, 2023ರ ಚುನಾವಣೆ ವೇಳೆಗೆ ನಾವು ನಮ್ಮ ರಿಪೋರ್ಟ್ ಕಾರ್ಡ್ ಅನ್ನು ನಿಮ್ಮ ಬಳಿ ನೀಡಿ, ಪುನಃ ನಿಮ್ಮ ಆಶೀರ್ವಾದವನ್ನು ಪಡೆಯುತ್ತೇವೆ’ ಎಂದರು.
    ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಸ್ಪಂದನೆ ದೊರಕಿದೆ.‌ ಇದು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರು ಒಪ್ಪಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದರು.
    ಕಾಂಗ್ರೆಸ್ನ ಅಧಿಕಾರದ ಕನಸು ಎಂದಿಗೂ ನನಸಾಗದು. ಕಾಂಗ್ರೆಸ್ದ್ದು 100% ಕಮಿಷನ್ ಸರ್ಕಾರ. ಅನ್ನಭಾಗ್ಯ ಚೀಲ ನಿಮ್ಮದು, ಅಕ್ಕಿ ಮೋದಿ ಅವರದ್ದು. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರ್ತೀವಿ. ಧಮ್ ಇದ್ರೆ ತಡೀರಿ ಎಂದು ಸವಾಲು ಹಾಕಿದರು.

    ಕಾಂಗ್ರೆಸ್ ಬೊಮ್ಮಾಯಿ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲ ತೀರಿಸಲು ದೇವರ ತಾಳಿ ಕದೀತಿದ್ದ ಖದೀಮ
    Next Article ಗಣೇಶ ವಿಸರ್ಜನೆ ಗಲಾಟೆ- ಕೊನೆಯಲ್ಲಿ ಅಂತ್ಯ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DanielCix on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • cái lồn mẹ tụi mầy on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe