Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    ಅಪರಾಧ

    ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.

    vartha chakraBy vartha chakraOctober 30, 2024Updated:October 30, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.30-
    ಒತ್ತುವರಿ ಆರೋಪದಲ್ಲಿ ವಕ್ಪ್ ಆಸ್ತಿ ತೆರವು ವಿಚಾರ ಇದೀಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿಗೆ ದೊಡ್ಡ ಅಸ್ತ್ರ ಲಭಿಸಿದಂತಾಗಿದೆ.
    ವಿವಾದ ಸೃಷ್ಟಿಸಿರುವ ಸಚಿವ ಜಮೀರ್ ಅಹಮದ್ ಅವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಬಿಜೆಪಿ ನವೆಂಬರ್ 4ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ.
    ತಾಲ್ಲೂಕು ಮಟ್ಟದಿಂದ ಜಿಲ್ಲಾ ಹಂತದವರೆಗೂ ಪಕ್ಷದ ಕಾರ್ಯಕರ್ತರು ಧರಣಿ ಮತ್ತು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಸಚಿವರ ರಾಜಿನಾಮೆಗೆ ಒತ್ತಾಯಿಸಬೇಕು ಎಂದು ಸೂಚಿಸಿದೆ.
    ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕೆಂದು ಪಕ್ಷದ ಅಧ್ಯಕ್ಷ ವಿಜಯೇಂದ್ರ ಸೂಚಿಸಿದ್ದಾರೆ.
    ಕಾಂಗ್ರೆಸ್ ಅಸ್ತಿತ್ವದ ಸರ್ಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ. ಅಲ್ಪಸಂಖ್ಯಾತ ಸಚಿವ ಜಮೀರ್ ಅಹದ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸೂಚನೆಯಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಆಪಾದಿಸಿದ್ದಾರೆ
    ಇದರ ಫಲವಾಗಿ ಕರ್ನಾಟಕ ರಾಜ್ಯದ ಬಹುತೇಕ ರೈತರು ತೀವ್ರ ಸಂಕಷ್ಟ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ. ಅಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ರಾಜ್ಯಾದ್ಯಂತ ಕಬಳಿಸುವ ಹುನ್ನಾರ ನಡೆದಿದೆ ಎಂದು ದೂರಿದ್ದಾರೆ.
    ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಾಗಿರುವುದರಿಂದ ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತಕ ಪ್ರತಿಪಕ್ಷವಾಗಿ ನಾವುಗಳು ರೈತರ ಪರವಾಗಿ ನಿಂತು ಸರ್ಕಾರವನ್ನು ಎಚ್ಚರಿಸುವ ಹೋರಾಟಕ್ಕೆ ತಕ್ಷಣಕ್ಕೆ ಧುಮುಕಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ
    ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ಎಲ್ಲ ತಹಶೀಲ್ದಾರರ ಕಛೇರಿಗಳ ಮುಂದೆ ನೊಂದ ರೈತರನ್ನೊಳಗೊಂಡಂತೆ ಬೃಹತ್ ಸಂಖ್ಯೆಯಲ್ಲಿ ನ.4ರಂದು ಹೋರಾಟ ನಡೆಸಬೇಕೆಂದು ಮನವಿ ಮಾಡಿದ್ದಾರೆ.
    ಮುಖ್ಯಮಂತ್ರಿಗಳು ಕೂಡಲೇ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಅಕ್ರಮವಾಗಿ ಈಗಾಗಲೇ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನು ತಕ್ಷಣಕ್ಕೆ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    Congress Government Karnataka News Politics ಕರ್ನಾಟಕ ಕಾಂಗ್ರೆಸ್ ಬಿಜೆಪಿ Bengaluru ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗಾಳಿಗೆ ತೂರಿದ ಸಿಎಂ ಆದೇಶ.
    Next Article ಹೇಗಿರಲಿದೆ ‘ಬಘೀರ’ ನ ಅಬ್ಬರ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. kamera_fcpi on February 12, 2026 5:08 pm

      Если вы хотите повысить безопасность и удобство маневрирования, рекомендуем купить камеру заднего вида для грузового автомобиля.
      Также нужно обеспечить надежное крепление и защиту камеры от пыли и влаги.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Tracymix on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Bywmta on ಬೆಂಗಳೂರಲ್ಲಿ ಮೂರು ದಿನ ವಾಹನ ಸಂಚಾರ ವ್ಯವಸ್ಥೆ ಬದಲಾವಣೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.