Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Blackmail ಪೂಜಾರಿ ಪೊಲೀಸ್ ಬಲೆಗೆ.
    Viral

    Blackmail ಪೂಜಾರಿ ಪೊಲೀಸ್ ಬಲೆಗೆ.

    vartha chakraBy vartha chakraJune 16, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಮಾಟ, ಮಂತ್ರ ನಿವಾರಣೆಗೆ ಪೂಜೆಯ ನೆಪದಲ್ಲಿ ಮಹಿಳೆಯನ್ನು ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್.ಟಿ.ಎ ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
    ಸಂತ್ರಸ್ತ 38 ವರ್ಷದ ಮಹಿಳೆ ನೀಡಿದ್ದ ದೂರಿನನ್ವಯ ಅರ್ಚಕ ಅರುಣ್‍ನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಉನ್ನಿ ದಾಮೋದರನ್‌ ಬಂಧನಕ್ಕೆ ಶೋಧ ನಡೆಸಲಾಗಿದೆ.
    ವಿವಾಹಿತರಾಗಿದ್ದ ಸಂತ್ರಸ್ತೆಯು ಪತಿಯ ನಿಧನದ ಬಳಿಕ ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದರು. ಕೇರಳದ ಪೆರಂಗೋಟ್ಟುಕ್ಕಾರ ದೇಗುಲದಲ್ಲಿ ಪೂಜೆ ಮಾಡಿಸಿದರೆ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಕೇಳಿ‌ ತಿಳಿದುಕೊಂಡು ತೆರಳಿದ್ದರು. ಆ ಸಂದರ್ಭದಲ್ಲಿ ಪರಿಚಯವಾಗಿದ್ದ ಅರ್ಚಕ ಅರುಣ್, “ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆ. ಪೂಜೆ ಮಾಡಬೇಕಿದೆ” ಎಂದು 24 ಸಾವಿರ ರೂ, ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ.
    ಸಂತ್ರಸ್ತೆ ನಗರಕ್ಕೆ ಬಂದ ನಂತರ ಹಲವು ಬಾರಿ ವಾಟ್ಸ್​​ಆ್ಯಪ್​ನಲ್ಲಿ ವಿಡಿಯೋ ಕರೆ ಮಾಡಿದ್ದ ಆರೋಪಿ, ಬೆತ್ತಲಾಗುವಂತೆ ಒತ್ತಾಯಿಸಿದ್ದ. “ಇದೊಂದು ಪೂಜೆ, ನೀವು ಹೇಳಿದಂತೆ ಮಾಡದಿದ್ದರೆ ನಿಮ್ಮ ಮಕ್ಕಳಿಗೆ ಕೆಡುಕಾಗಲಿದೆ” ಎಂದು ಬೆದರಿಸಿದ್ದ. ಆತನ ಮಾತಿನಂತೆ ನಡೆದುಕೊಂಡಾಗ ಸಂತ್ರಸ್ತೆಯ ಬೆತ್ತಲೆ ದೃಶ್ಯಗಳನ್ನು ಆರೋಪಿ ರೆಕಾರ್ಡ್ ಮಾಡಿಕೊಂಡಿದ್ದಾನೆ.
    ಇಷ್ಟರ ಬಳಿಕ ವಿಶೇಷ ಪೊಜೆಗೆಂದು ಕೇರಳದ ದೇವಸ್ಥಾನಕ್ಕೆ ಬರುವಂತೆ ತಿಳಿಸಿದ್ದ. ಬರಲು ಸಾಧ್ಯವಿಲ್ಲ ಎಂದು ಸಂತ್ರಸ್ತೆ ಹೇಳಿದಾಗ, ಬೆತ್ತಲೆ ದೃಶ್ಯಗಳನ್ನು ರೆಕಾರ್ಡ್ ಮಾಡಿಟ್ಟುಕೊಂಡಿರುವುದಾಗಿ ಬ್ಲ್ಯಾಕ್​ಮೇಲ್​​ ಮಾಡಲಾರಂಭಿಸಿದ್ದಾನೆ.
    ಹೆದರಿದ್ದ ಮಹಿಳೆ ಕಳೆದ ತಿಂಗಳು ಆತ ಹೇಳಿದ ದೇಗುಲಕ್ಕೆ ತೆರಳಿದ್ದರು. ಆಕೆಯ ಬಳಿ ಪೂಜೆ ಮಾಡಿಸಿದ್ದ ಅರುಣ್ ಹಾಗೂ ಮುಖ್ಯ ಅರ್ಚಕ, ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಸ್ವಾಭಾವಿಕವಾಗಿ ಆಕೆಯೊಂದಿಗೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದ. ಬಳಿಕ ಆಕೆಗೆ ಲೈಂಗಿಕ ಕಿರುಕುಳ ನೀಡಿ, ಬಿಟ್ಟು ಕಳಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
    ನಗರಕ್ಕೆ ವಾಪಸಾಗಿದ್ದ ಸಂತ್ರಸ್ತೆ, ಘಟನೆಯಿಂದ ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದು ನಂತರ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅರುಣ್‍ನನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಉನ್ನಿ ದಾಮೋದರನ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    AI m ಧಾರ್ಮಿಕ Bengaluru ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.
    Next Article ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • where can i get trazodone pills on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • DavidNic on ಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill
    • where can i buy vantin no prescription on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe