Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ BMRCL ಚಿಂತನೆ, ಪ್ರಯಾಣಿಕರಿಗೆ ಶಾಕ್.
    ಪ್ರಚಲಿತ

    ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ BMRCL ಚಿಂತನೆ, ಪ್ರಯಾಣಿಕರಿಗೆ ಶಾಕ್.

    vartha chakraBy vartha chakraOctober 5, 202436 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಅ,5 – ಭಾರತದ ರಾಜಧಾನಿ ನವದೆಹಲಿಯ ನಂತರ ದೇಶದ ಎರಡನೇ ಅತಿ ಹೆಚ್ಚು ಪ್ರಯಾಣಿಕರನ್ನು ಹೊಂದಿರುವ ಮೆಟ್ರೋ ಎಂಬ ಖ್ಯಾತಿ ಪಡೆದಿರುವ ಬೆಂಗಳೂರು ಮೆಟ್ರೋ ಇದೀಗ ತನ್ನ ಪ್ರಯಾಣಿಕರಿಗೆ ಶಾಕ್ ನೀಡಿದ್ದು BMRCL ಮೆಟ್ರೋ ದರ ಹೆಚ್ಚಳ ಪರಿಷ್ಕರಣೆಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿ. (ಬಿಎಂಆರ್ಸಿಎಲ್) ರೈಲ್ವೇ ದರ ನಿಗದಿ ಸಮಿತಿ ಮುಂದಾಗಿದೆ.
    ಇದರ ಸಲುವಾಗಿ ಸಾರ್ವಜನಿಕರಿಂದ ಸಲಹೆಗಳನ್ನು ನೀಡಲು ಬಿಎಂಆರ್ಸಿಎಲ್ ಆಹ್ವಾನಿಸಿದ್ದು ಈ ಸಂಬಂಧ ಅಧಿಸೂಚನೆ ಹೊರಡಿಸಿ, ಸಲಹೆಗಳನ್ನು ಇಮೇಲ್ ಮೂಲಕ ffc@bmrc.co.in ಗೆ, ಅಥವಾ ಬಿಎಂಆರ್ಸಿಎಲ್ ಕೇಂದ್ರ ಕಚೇರಿಗೆ ಅಂಚೆ ಮೂಲಕ ಅಕ್ಟೋಬರ್ 21ರ ಒಳಗೆ ಕಳುಹಿಸಬಹುದು ಎಂದು ಹೇಳಿದೆ.
    ಈ ಕುರಿತಂತೆ ಮಾತನಾಡಿದ BMRCLನ ಅಧಿಕಾರಿಯೊಬ್ಬರು, ನಾವು ಮೆಟ್ರೋ ಟಿಕೆಟ್ ದರಗಳನ್ನು ಪರಿಷ್ಕರಿಸಲು ಚಿಂತನ ನಡೆಸಿದ್ದೇವೆ. ಎಲ್ಲಾ ಪಾಲುದಾರರ ಅಭಿಪ್ರಾಯಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ನಂತರ FFC ಹೊಸ ಬೆಲೆಗಳನ್ನು ನಿರ್ಧರಿಸುತ್ತದೆ. ನಾವು ಕನಿಷ್ಠ 15-25% ದರ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದೇವೆ, ಇದು ಹೆಚ್ಚಿನ ಆದಾಯವನ್ನು ಗಳಿಸಲು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
    ‘ದಿ ಫೇರ್ ಪಿಕ್ಸೇಷನ್ ಕಮಿಟಿ’ (ಎಫ್ಎಫ್ಸಿ) ಒಂದು ಸ್ವತಂತ್ರ ಸಂಸ್ಥೆಯಾಗಿದ್ದು ಅರೆ ನ್ಯಾಯಾಂಗ ಅಧಿಕಾರಗಳನ್ನು ಹೊಂದಿದೆ. ಇದನ್ನು ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ-2002ರ ಅಡಿಯಲ್ಲಿ ರಚಿಸಲಾಗಿದೆ. ಇದು ಮೆಟ್ರೋ ಕಾರ್ಯಾಚರಣೆಯ ಖರ್ಚಿನ ವಿವರಗಳನ್ನು, ಪ್ರಯಾಣಿಕರು ಹಾಗೂ ತಜ್ಞರಿಂದ ಮಾಹಿತಿಯನ್ನೂ ಪಡೆದುಕೊಳ್ಳಲಿದ್ದು ನಂತರದಲ್ಲಿ ಬೆಲೆ ಹೆಚ್ಚಳದ ಬಗ್ಗೆ ಮಾಹಿತಿ ನೀಡಲಿದೆ.
    ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಮಾಹಿತಿ ನೀಡಿದ್ದು, ದರ ಏರಿಕೆ ಬಗ್ಗೆ ಕಮಿಟಿ ಆಗಿದೆ. ಈ ಕುರಿತು ಒಂದು ಸಭೆ ಕೂಡಾ ಆಗಿದೆ, ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದೆ. ವರದಿ ಆಧಾರದ ಮೇಲೆ ಮೆಟ್ರೋ ಟಿಕೆಟ್ ದರ ಏರಿಕೆ ಆಗಲಿದೆ. ಸಮಿತಿಯಲ್ಲಿ ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರು ಇರಲಿದ್ದಾರೆ. ಕಮಿಟಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಲಿದೆ. ಬಿಎಂಆರ್ ಸಿ ಎಲ್ ಖರ್ಚು ವೆಚ್ಚ ನೋಡಿಕೊಂಡು ದರ ಏರಿಕೆ ನಿರ್ಧಾರ ಆಗಲಿದೆ. ನಿಯಮದ ಪ್ರಕಾರ ಕಮಿಟಿ ಮೂರು ತಿಂಗಳ ಒಳಗಾಗಿ ದರ ಏರಿಕೆ ನಿರ್ಧಾರ ಮಾಡಲಿದೆ ಎಂದು ತಿಳಿಸಿದ್ದಾರೆ.
    ಇನ್ನು ಕಳೆದ ಬಾರಿ 2017 ರಲ್ಲಿ ಬಿಎಂಆರ್ಸಿಲ್ ಮೆಟ್ರೋ ಟಿಕೆಟ್ ದರವನ್ನು ಪರಿಷ್ಕರಿಸಿತ್ತು. ನಂತರದಲ್ಲಿ ಬೆಲೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿದರು ಬೆಲೆ ಹೆಚ್ಚಳ ಮಾಡಿರಲಿಲ್ಲ.ಇದೀಗ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಪರ್ಕ ವ್ಯವಸ್ಥೆ ಹೆಚ್ಚಾಗುತ್ತಿದೆ.
    ಪ್ರಸ್ತುತ ಇರುವ ಮೆಟ್ರೋ ದರ
    ಮೆಟ್ರೋ ನಿಮಯಗಳ ಪ್ರಕಾರ ಪ್ರತಿ 2 ವರ್ಷಗಳಿಗೊಮ್ಮೆ ದರ ಪರಿಷ್ಕರಣೆ ಮಾಡಬೇಕು. ಸದ್ಯ ನಮ್ಮ ಮೆಟ್ರೋದಲ್ಲಿ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಇದೆ. ಸ್ಮಾರ್ಟ್ ಕಾರ್ಡ್ ಹಾಗೂ ಕ್ಯೂ ಆರ್ ಕೋಡ್ ಟಿಕೆಟ್ ಬುಕ್ ಮಾಡುವವರಿಗೆ ಶೇ. 5ರಷ್ಟು ರಿಯಾಯಿತಿ ಇದೆ. ಆರಂಭದಲ್ಲಿ ಅಂದರೆ 2020ರವರೆಗೆ ಈ ರಿಯಾಯಿತಿ ಶೇ. 15ರಷ್ಟು ಇತ್ತು.
    ಕೊನೆಯ ಬಾರಿಗೆ ನಮ್ಮ ಮೆಟ್ರೋ 2017ರಲ್ಲಿ ದರ ಪರಿಷ್ಕರಣೆ ಮಾಡಿತ್ತು. ಫೇಸ್1 ಮೆಟ್ರೋ ಪೂರ್ಣಗೊಂಡಾಗ ಶೇ. 10-15ರಷ್ಟು ದರ ಹೆಚ್ಚಳ ಮಾಡಲಾಗಿತ್ತು.
    ಪ್ರಸ್ತುತ 8-9 ಲಕ್ಷ ಜನ ದಿನನಿತ್ಯ ಮೆಟ್ರೋ ಬಳಸುತ್ತಿದ್ದಾರೆ. ಅಕ್ಟೋಬರ್ ಅಂತ್ಯಕ್ಕೆ ನಾಗಸಂದ್ರ – ಮಾದಾವರ ಮಾರ್ಗವೂ ಶುರುವಾದಾಗ ಇದು 10 ಲಕ್ಷಕ್ಕೆ ಹೆಚ್ಚಾಗುವ ನಿರೀಕ್ಷೆ ಇದೆ ಅದರಂತೆ ದರ ಏರಿಕೆ ಮಾಡಿದಲ್ಲಿ ಜನರ ಮೆಟ್ರೋ ಬಳಕೆ ಕಡಿಮೆಯಾಗಬಹುದು. ಅದರಲ್ಲೂ ಹೆಚ್ಚಿನ ಪಾರ್ಕಿಂಗ್ ಶುಲ್ಕ ಹಾಗೂ ಮೆಟ್ರೋ ನಿಲ್ದಾಣಗಳಿಂದ ಮನೆ, ಕಚೇರಿಗಳಿಗೆ ಇರುವ ಅಂತರ ಹಾಗೂ ಸಾರಿಗೆ ಸಮಸ್ಯೆಗಳ ಕಾರಣದಿಂದ ಜನ ಮೆಟ್ರೋ ಪ್ರಯಾಣವನ್ನು ಕಡಿಮೆ ಮಾಡಲುಬಹುದು.

    Bangalore bmrcl Government Karnataka m ಕಾಂಗ್ರೆಸ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿಗ್ಗಾಂವಿಯಲ್ಲಿ ಸಿ ಎಂ ಫೈಜ್ ಎಂಬ ಮಿಂಚು
    Next Article ಬಿಎಂಟಿಸಿ ಸಿಬ್ಬಂದಿಯಿಂದ ಗನ್ ಲೈಸೆನ್ಸ್ ಗಾಗಿ ಸರ್ಕಾರಕ್ಕೆ ಮನವಿ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vivodzapojkrasnodarvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • сайт Мани Икс on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • fishekkpa on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe