Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮಾಷೆಗಾಗಿ ಬಾಂಬ್ ಬೆದರಿಕೆ ಕರೆ ಮಾಡಿದ ಬಾಲಕ
    ಅಪರಾಧ

    ತಮಾಷೆಗಾಗಿ ಬಾಂಬ್ ಬೆದರಿಕೆ ಕರೆ ಮಾಡಿದ ಬಾಲಕ

    vartha chakraBy vartha chakraJanuary 7, 2023Updated:January 7, 202310 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.7-ರಾಜಾಜಿನಗರದಲ್ಲಿರುವ ಎನ್​ಪಿಎಸ್ ಶಾಲೆಗೆ ಬಾಂಬ್ (bomb) ಇಟ್ಟಿರುವುದಾಗಿ ಇಮೇಲ್ ಸಂದೇಶ ರವಾನಿಸಿರುವುದು ಶಾಲೆಯ ಅಪ್ರಾಪ್ತ ವಿದ್ಯಾರ್ಥಿ ಎನ್ನುವುದು ಪಶ್ಚಿಮ ವಿಭಾಗದ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಗೂಗಲ್​ನಲ್ಲಿ ಎನ್.ಪಿ.ಎಸ್ ಶಾಲೆಯ ಅಧಿಕೃತ ಇಮೇಲ್ ವಿಳಾಸ ಪಡೆದಿದ್ದ ವಿದ್ಯಾರ್ಥಿಯು ತಮಾಷೆ (prank) ಗಾಗಿ ಈ ರೀತಿಯ ಕೃತ್ಯ ಎಸಗಿರುವುದು ಕಂಡುಬಂದಿದೆ.
    ನೂರಾರು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿರುವ ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ಜ. 5 ರಂದು ರಾತ್ರಿ 8:30 ರ ಸುಮಾರಿಗೆ ಬಂದಿದ್ದ ಇಮೇಲ್​ನಲ್ಲಿ‌ ‘ನನ್ನ ಬಳಿ ನಾಲ್ಕು ಜಿಲೇಟಿನ್ ಕಡ್ಡಿಗಳಿವೆ. ನಾಳೆ ಊಟದ ಸಮಯದಲ್ಲಿ ಬ್ಲಾಸ್ಟ್ ಮಾಡ್ತೀನಿ’ ಎಂದು ಬರೆಯಲಾಗಿತ್ತು. ನಿನ್ನೆ ಬೆಳಗ್ಗೆ ಮೇಲ್ ಪರಿಶೀಲಿಸಿದ ಶಾಲಾ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮವಾಗಿ ಕೂಡಲೇ ಶಾಲಾ ಮಕ್ಕಳನ್ನ ತರಗತಿಯಿಂದ ಹೊರಗೆ ಕಳುಹಿಸಿ ತುರ್ತು ರಜೆ ನೀಡಿ ಬಸವೇಶ್ವರ ನಗರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿತ್ತು. ಮಾಹಿತಿ ಬರುತ್ತಿದ್ದಂತೆ ಕಾರ್ಯಪ್ರವೃತರಾದ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸ್ಥಳಕ್ಕೆ ಬಂದು ಶಾಲೆ ತಪಾಸಣೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಗೊತ್ತಾಗಿದೆ.
    ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಐಪಿ ಅಡ್ರೆಸ್ ಆಧಾರದಲ್ಲಿ ತನಿಖೆ ಕೈಗೊಂಡಾಗ ಇದೊಂದು ಅಪ್ರಾಪ್ತ ಬಾಲಕನ ಕೆಲಸ ಎಂಬುದು ಪತ್ತೆಯಾಗಿದೆ. ವಿಚಾರಣೆ ವೇಳೆ ಬಾಲಕ ‘ತಮಾಷೆಗಾಗಿ ಈ ರೀತಿ ಕೃತ್ಯ ಎಸಗಿರುವುದಾಗಿ’ ಪೊಲೀಸರ ಮುಂದೆ ತಿಳಿಸಿದ್ದಾನೆ. ಬಾಲಕನನ್ನು ರಾಜ್ಯ ಬಾಲ ನ್ಯಾಯಮಂಡಳಿ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.
    ಬಾಂಬ್ ಬೆದರಿಕೆ ಕರೆ:
    ನಿನ್ನೆ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ನಿವಾಸಿ ಸುನೀಲ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕೆಲವು ತಿಂಗಳ ಹಿಂದೆ ಅಪರಾಧ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಯು ಜನವರಿ 3ರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಮ್ 112 ಸಂಖ್ಯೆಗೆ ಕರೆ ಮಾಡಿ, ಬೆದರಿಕೆ ಹಾಕಿದ್ದಾನೆ. ಕೂಡಲೇ ಪೊಲೀಸರು ಬಾಂಬ್ ಪತ್ತೆ ದಳವನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ಕೈಗೊಂಡಿದ್ದರು. ಎಲ್ಲೆಡೆ ಹುಡುಕಾಡಿದಾಗ ಬಾಂಬ್​ ಪತ್ತೆಯಾಗಿರಲಿಲ್ಲ. ಕೊನೆಗೆ ಇದೊಂದು ಹುಸಿ ಕರೆ ಎಂಬುದನ್ನು ಪೊಲೀಸರು ಖಚಿತಪಡಿಸಿದ್ದರು.

    m ನ್ಯಾಯ ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleತನ್ನ ಶಿಕ್ಷಕಿಗೇ ಶೂಟ್ ಮಾಡಿದ 6 ವರ್ಷದ ಹುಡುಗ
    Next Article BJPಗೆ ಯೋಗೇಶ್ವರ್ Divorce
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • mdalp.ru on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Ralphhow on ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe