Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಬಲೆಗೆ ಬಿದ್ದ ನಕಲಿ ಅಂಕಪಟ್ಟಿ ಜಾಲ.
    ಸುದ್ದಿ

    ಪೊಲೀಸ್ ಬಲೆಗೆ ಬಿದ್ದ ನಕಲಿ ಅಂಕಪಟ್ಟಿ ಜಾಲ.

    vartha chakraBy vartha chakraJanuary 27, 2023Updated:January 27, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.27-
    ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಂಬಂಧಪಟ್ಟ ವಿವಿಧ ಕೋರ್ಸ್‍ಗಳ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಜಾಲದ ಐದು ಸಂಸ್ಥೆಗಳ ಮೇಲೆ CCB ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿ, 6800ಕ್ಕಿಂತಲೂ ಅಧಿಕ ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.

    ರಾಜಾಜಿನಗರದ ನ್ಯೂ ಕ್ವೆಸ್ಟ್ ಟೆಕ್ನಾಲಜಿಸ್ (New Quest Technologies), ಜೆಪಿನಗರದ ಎಸ್‍ಸಿಸ್ಟಮ್ ಕ್ವೆಸ್ಟ್ (Ssystems Quest) , ಭದ್ರಪ್ಪ ಲೇಔಟ್‍ನ ಆರೂಹಿ ಇನ್ಸ್‍ಟ್ಯೂಟ್ (Aaruhi Institute), ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜು ಮತ್ತು ವಿಜಯನಗರದ ಬೆನಕ ಕರೆಸ್ಪಾಂಡೆನ್ಸ್ ಕಾಲೇಜುಗಳ ಮೇಲೆ ಏಕಕಾಲದಲ್ಲಿ CCB ಪೊಲೀಸ್ ತಂಡ ದಾಳಿ ಮಾಡಿತು. ಈ ವೇಳೆ ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಸಂಬಂಧಿಸಿದ ಒಟ್ಟು 15 ವಿಶ್ವವಿದ್ಯಾಲಯಗಳ ವಿವಿಧ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಯುಸಿಯ ಒಟ್ಟು 6800ಕ್ಕಿಂತ ಅಧಿಕ ನಕಲಿ ಅಂಕಪಟ್ಟಿಗಳು, 22 ಲ್ಯಾಪ್‍ಟಾಪ್, ಕಂಪ್ಯೂಟರ್‌ಗಳು, ಮತ್ತು 13 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ನಗರದ ವಿವಿಧ ಸ್ಥಳಗಳಲ್ಲಿ ಎಜುಕೇಷನ್ ಕನ್‍ಸಲ್ಟೆಂಟ್ (Educational Consultant) ಹೆಸರಿನಲ್ಲಿ ವಿವಿಧ ವಿಶ್ವವಿದ್ಯಾಲಯದ ಮತ್ತು ವಿವಿಧ ಕೋರ್ಸ್‍ಗಳ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿರುವ ಜಾಲದ ಬಗ್ಗೆ ಇತ್ತೀಚೆಗೆ CCB ಘಟಕ ತನಿಖೆ ನಡೆಸುತ್ತಿತ್ತು. ಆ ಸಂದರ್ಭದಲ್ಲಿ ಯಾವುದೇ ವ್ಯಾಸಂಗ ಮಾಡದೆ ಮತ್ತು ಪರೀಕ್ಷೆ ಬರೆಯದೆ ಇದ್ದರೂ ಸಹ 25ರಿಂದ 30 ಸಾವಿರ ರೂ.ಗಳಿಗೆ ಅಕ್ರಮವಾಗಿ ನಕಲಿ ಅಂಕಪ್ಟಟ್ಟಿಗಳನ್ನು ಹಾಗೂ ಪದವಿ ಸರ್ಟಿಫಿಕೇಟ್ ತಯಾರಿಸಿ ನೀಡುತ್ತಿದ್ದಾರೆ ಎಂಬ ಮಾಹಿತಿಯನ್ನು CCB ಪೊಲೀಸರು ಕಲೆ ಹಾಕಿದ್ದರು. ರಾಜಾಜಿನಗರ, ಜೆಪಿನಗರ, ಭದ್ರಪ್ಪ ಲೇಔಟ್, ದಾಸರಹಳ್ಳಿ, ವಿಜಯನಗರದ ಸಂಸ್ಥೆಗಳವರು ವಿವಿಧ ಯೂನಿರ್ವಸಿಟಿಗಳೊಂದಿಗೆ ಶಾಮೀಲಾಗಿ ಅಥವಾ ಅವರೇ ಫೋರ್ಜರಿಯಾಗಿ ಅಂಕಪಟ್ಟಿ ತಯಾರಿಸಿ ನೀಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಿಸಿಬಿಯ ಐದು ತಂಡಗಳಿಂದ ಏಕಕಾಲದಲ್ಲಿ ಈ ಸಂಸ್ಥೆಗಳ ಮೇಲೆ ದಾಳಿ ಮಾಡಲಾಯಿತು.

    ಅಣ್ಣಾಮಲೈ ಯೂನಿವರ್ಸಿಟಿಗೆ ಸಂಬಂಧಿಸಿದ 238 ನಕಲಿ ಅಂಕಪಟ್ಟಿಗಳು, ಸಿಕ್ಕಿಂ ಯೂನಿರ್ವಸಿಟಿಯ 5,497, ಗೀತಂ ಯೂನಿವರ್ಸಿಟಿಯ 728, ಬಿಐಎಸ್‍ಸಿ ಯೂನಿವರ್ಸಿಟಿಯ (BISC University) 6, ಜನಾರ್ಧನ್ ರೈನಗರ್ ಯೂನಿವರ್ಸಿಟಿಯ 2, ಐಬಿವಿಈ ಯೂನಿವರ್ಸಿಟಿಯ (IBVE University) 12, ಕುವೆಂಪು ಯೂನಿವರ್ಸಿಟಿಯ 159, ಜೈನ್ ವಿಹಾರ್ ಯೂನಿವರ್ಸಿಟಿ ಜೈಪುರ್ ನ 27, ಸಿಂಗನಿಯಾ ಯೂನಿವರ್ಸಿಟಿ ರಾಜಸ್ಥಾನದ 152, ವೆಂಕಟೇಶ್ವರ ಯೂನಿವರ್ಸಿಟಿ ಅರುಣಾಚಲಪ್ರದೇಶದ 4, ಮಂಗಳೂರು ಯೂನಿವರ್ಸಿಟಿಯ 7, ಆರ್‍ಐಓಎಸ್ ಯೂನಿವರ್ಸಿಟಿ ಛತ್ತೀಸ್‍ಘಡದ (RIOS University) 5, ಬಿಎಸ್‍ಇಹೆಚ್ ಹುಬ್ಬಳ್ಳಿಯ (BSEH) 1, ಬೆಂಗಳೂರು ವಿವಿಯ 1, ಕೆಎಸ್‍ಎಸ್‍ಎಲ್ ಯೂನಿವರ್ಸಿಟಿಯ (KSSL University) 7 ಅಂಕಪಟ್ಟಿಗಳನ್ನು ಸೇರಿದಂತೆ ಒಟ್ಟು 6846 ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.
    ಈ ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಿರುವ CCB ಪೊಲೀಸರು ಉಳಿದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

    CCB crime education Fake marks card m News Tech ಕಲೆ ಕಾಲೇಜು ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಹಣ, ಒಡವೆಯೊಂದಿಗೆ ಪರಾರಿಯಾದ ಎರಡನೇ ಪತ್ನಿ.
    Next Article ಸತ್ಯ ಮುಚ್ಚಿಹಾಕಲು ಬಿಜೆಪಿ ಯತ್ನ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • Chriswot on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • KennethSOYNC on ಜನವರಿಯಿಂದ ಯುವನಿಧಿ ಆರಂಭ | Yuvanidhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe