Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ತನಿಖೆ | Ramesh Jarkiholi
    ಸುದ್ದಿ

    ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ತನಿಖೆ | Ramesh Jarkiholi

    vartha chakraBy vartha chakraJanuary 20, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.19- ಮಾಜಿ ಮಂತ್ರಿ ಹಾಗೂ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ,ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ತಾವು ಪಡೆದಿರುವ ಸಾಲ, ಬಡ್ಡಿ ಸೇರಿ 439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪದ
    ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
    ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ತಾವು ನಿರ್ದೇಶಕರಾಗಿದ್ದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ ನಿಂದ 439 ರೂ. ಕೋಟಿ ಸಾಲ ಪಡೆದಿದ್ದಾರೆ
    ತಮ್ಮ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಕಾರ್ಖಾನೆಯ ಅಭಿವೃದ್ಧಿ ಹಾಗೂ ವಿಸ್ತರಣೆಗಾಗಿ ಎಂಬ ಕಾರಣ ನೀಡಿ ಈ ಸಾಲ ಪಡೆದಿದ್ದಾರೆ. ಸಾಲ ಪಡೆಯುವ ವೇಳೆ ಹಲವಾರು ನಿಯಮ ಉಲ್ಲಂಘನೆಯಾಗಿದೆ.ಈಗ ಸಾಲ ಮತ್ತು ಬಡ್ಡಿಯನ್ನು ಪಾವತಿಸಿಲ್ಲ ಎಂದು ಆರೋಪಿಸಿ ಬ್ಯಾಂಕ್ ನ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದಾರೆ.
    ಬೆಂಗಳೂರಿನ ವಿ.ವಿ.ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ.

    ಸೌಭಾಗ್ಯ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ, ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್ ಪಾಟೀಲ್ ಮತ್ತು ಶಂಕರ್ ಪವಾಡೆ ಅವರನ್ನು ಆರೋಪಿಗಳು ಎಂದು ಹೆಸರಿಸಲಾಗಿದೆ.
    ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಅರ್ಜಿದಾರ/ಆರೋಪಿಗಳು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಸಮೂಹದ ಬ್ಯಾಂಕ್‌ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 2013ರ ಜುಲೈ 12 ರಿಂದ 2017ರ ಮಾರ್ಚ್ 31ರ ಅವಧಿಯಲ್ಲಿ ರೂ.239.88ಕೋಟಿ ಸಾಲ ಪಡೆದಿದ್ದರು. ಇದು ರೂ.439.7 ಕೋಟಿಗೆ ಏರಿಕೆಯಾಗಿದ್ದರೂ ಅದನ್ನು ಪಾವತಿಸಿಲ್ಲ.

    ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್ ಕಂಪೆನಿಯಲ್ಲಿ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್ ಮತ್ತು ಶಂಕರ್ ಅವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು/ಅರ್ಜಿದಾರರು ಕಂಪೆನಿಯಲ್ಲಿನ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದು, ಸಂಬಂಧಪಡದ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ. ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಜನವರಿ ಐದರಂದು ದೂರು ನೀಡಿದ್ದಾರೆ.

    Verbattle
    Verbattle
    Verbattle
    Jarkiholi m Ramesh Jarkiholi ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಿವಿ ಮಾತು | PM Modi
    Next Article Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    1 Comment

    1. Rbpwxn on February 11, 2026 11:42 pm

      betmgmontario online casino betmgm play mgm betting site

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • vibs.me on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 1win_hfet on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.