Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    ರಾಜ್ಯ

    Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು

    vartha chakraBy vartha chakraFebruary 17, 202345 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Bengaluru

    ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಪಣ ತೊಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಪ್ರಸಕ್ತ ಸರ್ಕಾರದ ಕೊನೆಯ budget ಮಂಡಿಸಿದ್ದು, ಇದರಲ್ಲಿ ಎಲ್ಲಾ ವರ್ಗ, ಪ್ರದೇಶ ಹಾಗೂ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ.

    ದಾಖಲೆಯ ‌ಒಟ್ಟು 3 ಲಕ್ಷದ 9 ಸಾವಿರದ 182 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿದ್ದು, ಶಿಕ್ಷಣ ಇಲಾಖೆ (Education Department) ಗೆ ಅತಿಹೆಚ್ಚಿನ‌ ಅಂದರೆ 37,960 ಕೋಟಿ ರೂಪಾಯಿ ತೆಗೆದಿರಿಸಿದ್ದಾರೆ.

    ನಂತರದಲ್ಲಿ ಜಲಸಂಪನ್ಮೂಲ ಇಲಾಖೆ (Water Resources Department) ಗೆ 22,854 ಕೋಟಿ ರೂ.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (Rural Development and Panchayati Raj) ಗೆ 20,494 ಕೋಟಿ ರೂ.,

    ನಗರಾಭಿವೃದ್ಧಿ ಇಲಾಖೆಗೆ (Urban Development Department) ‌17,938 ಕೋಟಿ ರೂ.,

    ಕಂದಾಯ ಇಲಾಖೆ (Revenue Department ) ಗೆ 15,943 ಕೋಟಿ ರೂ.,

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ (Health & Family Welfare Department) ಕ್ಕೆ 15,151 ಕೋಟಿ,

    ಒಳಾಡಳಿತ ಮತ್ತು ಸಾರಿಗೆ ಇಲಾಖೆ (Transport Department) ಗೆ 14,509 ಕೋಟಿ,

    ಇಂಧನ ಇಲಾಖೆ (Energy Department) ಗೆ 13,803 ಕೋಟಿ,

    ವಸತಿ (Karnataka Housing Department) ಗೆ 3787.01 ಕೋಟಿ,

    ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ 4,608 ಕೋಟಿ,

    ಮಹಿಳಾ ಮತ್ತು ಮಕ್ಕಳ ಕಲ್ಯಾಣ (Department of Women and Child Development) ಕ್ಕೆ 5,676 ಕೋಟಿ

    ಕೃಷಿ ಮತ್ತು ತೋಟಗಾರಿಕೆ (Horticulture Department) ಗೆ 9,456 ಕೋಟಿ,

    ಲೋಕೋಪಯೋಗಿ ಇಲಾಖೆ (Public Works Department) ಗೆ 10,741 ಕೋಟಿ ಮತ್ತು

    ಸಮಾಜಕಲ್ಯಾಣ ಇಲಾಖೆ (Social Welfare Department ) ಗೆ 11,163 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಿದ್ದಾರೆ.

    ಹೋಗುತಿದೆ ಹಳೆ ಕಾಲ, ಹೊಸ ಕಾಲ ಬರುತಲಿದೆ. ಬರುತಲಿದೆ ಹೊಸ ದೃಷ್ಟಿ, ಹಳೆಯ ಬಾಳು ಹೋಗುತಲಿದೆ, ಹೊಸ ಬಾಳು ಬರುತಿದೆ ಎಂಬ ಕುವೆಂಪು ಅವರ ಕವನದ ಸಾಲುಗಳನ್ನು ಓದುತ್ತಾ  ಬಜೆಟ್ ಭಾಷಣ ಆರಂಭಿಸಿದ ಅವರು, ಹೊಸ ದೃಷ್ಟಿಕೋನದೊಂದಿಗೆ ಈ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿದರು. Covid ನಂತರದ ದಿನಗಳಲ್ಲಿ ಭಾರತ ಆರ್ಥಿಕವಾಗಿ ಪುಟಿದೆದ್ದಿದ್ದು, ಕರ್ನಾಟಕವೂ ಅದೇ ಹಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದೇವೆ ಎಂದರು.

    ಕೃಷಿ ಕ್ಷೇತ್ರಕ್ಕೆ ‌ಹೆಚ್ಚಿನ ಒತ್ತು ನೀಡಿರುವ ಅವರು, ನೂತನ ಕೃಷಿ ನೀತಿಯನ್ನು ಪ್ರಕಟಿಸಿದ್ದಾರೆ. ಇದರನ್ವಯ, ರೈತರಿಗೆ ನೀಡಲಾಗುತ್ತಿದ್ದ 3 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲದ ಪ್ರಮಾಣವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ.

    ಕಿಸಾನ್ ಕಾರ್ಡ್ (Kisan Card) ಹೊಂದಿರುವ ರೈತರಿಗೆ ‘ಭೂಸಿರಿ’ ಎಂಬ ಯೋಜನೆ ಪ್ರಕಟಿಸಿದ್ದು, ಇದರನ್ವಯ ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆಗೆ ಸಾಧ್ಯವಾಗುತ್ತದೆ. ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಿದ್ದಾರೆ.

    ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ‘ಜೀವನ್ ಜ್ಯೋತಿ ಕಿಸಾನ್’ ಎಂಬ ಯೋಜನೆ ಘೋಷಿಸಿದ್ದು, ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ, ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

    ಆರ್ಥಿಕವಾಗಿ ಹಿಂದುಳಿದವರಿಗೆ ‘ನೆಲೆ’ ಎಂಬ ವಸತಿ ಯೋಜನೆ ಘೋಷಿಸಲಾಗಿದ್ದು, ಈ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ 10 ಲಕ್ಷ ರೂ., ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ., ‘ನೇಕಾರ ಸಮ್ಮಾನ್ ಯೋಜನೆ’ಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

    ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ, ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತರಣೆ. ಇದಕ್ಕಾಗಿ ಸದ್ಯ ನೀಡಲಾಗುತ್ತಿರುವ ₹ 725 ಕೋಟಿ ಜೊತೆಗೆ ಹೆಚ್ಚುವರಿಯಾಗಿ ₹ 141 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ, ಮಕ್ಕಳ ಪೌಷ್ಟಿಕತೆ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    #budget #karnataka art Bangalore basavaraj bommai BJP culture ED education Finance finance minister Karnataka lic m mi Panchayat state budget Water Resources Department Work ಆರೋಗ್ಯ ಕಾಲೇಜು Election ನರೇಂದ್ರ ಮೋದಿ ಬೊಮ್ಮಾಯಿ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ
    Next Article HAL ಜಮೀನಿಗೆ ಕನ್ನ ಹಾಕಿದ ಖದೀಮರು
    vartha chakra
    • Website

    Related Posts

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    December 21, 2025

    ಪ್ರಿಯಾಂಕಾ ಗಾಂಧಿ ಹೇಗೆ ರಾಜಕಾರಣ ಮಾಡುತ್ತಿದ್ದಾರೆ ನೋಡಿ

    December 20, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_nsSn on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • elektrokarniz kypit_disl on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • elektrokarniz kypit_dfsl on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe