Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಯವರು ಮೂರ್ಖರು‌, CAG ವರದಿ ಅರ್ಥವಾಗೋಲ್ಲಾ..
    ರಾಜಕೀಯ

    BJP ಯವರು ಮೂರ್ಖರು‌, CAG ವರದಿ ಅರ್ಥವಾಗೋಲ್ಲಾ..

    vartha chakraBy vartha chakraJanuary 25, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.25-
    ಕೇಂದ್ರ ಲೆಕ್ಕಪರಿಶೋಧಕರ ವರದಿ ಇಟ್ಟುಕೊಂಡು ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಬಿಜೆಪಿ ನಾಯಕರಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ತಮ್ಮ ವಿರುದ್ಧ ಆರೋಪ ಮಾಡಿರುವವರು ಮೂರ್ಖರು. ಅವರಿಗೆ CAG ವರದಿ ಸರಿಯಾಗಿ ಅರ್ಥವಾಗಿಲ್ಲ ಎಂದು ಕಿಡಿಕಾರಿದರು.

    ‘ಬಿಜೆಪಿ ಕಚೇರಿಯಲ್ಲಿ ಸಚಿವರಾದ ಡಾ.ಸುಧಾಕರ್ ಮತ್ತು ಅಶ್ವಥ್‍ ನಾರಾಯಣ್ ಸುದ್ದಿಗೋಷ್ಠಿ ಮಾಡಿ ಬರೀ ಸುಳ್ಳುಗಳನ್ನ ಹೇಳಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 35 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಚಿವರ ಮೂಲಕ ಸುಳ್ಳು ಹೇಳಿಸಿದ್ದಾರೆ. ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯ’ ಎಂದು ವ್ಯಂಗ್ಯವಾಡಿದರು.

    ‘ಸುಧಾಕರ್ MBBS ಡಾಕ್ಟರ್ ಎಂದುಕೊಂಡಿದ್ದೇನೆ. CAG ರಿಪೋರ್ಟ್ ಅರ್ಥ ಮಾಡಿಕೊಂಡಿಲ್ಲ ಅನ್ಸುತ್ತೆ. ಅದೇ ರೀತಿ ರೀ ಕನ್ಸಿಲೇಶನ್ ರಿಪೋರ್ಟ್ ಅನ್ನು ಅರ್ಥ ಮಾಡಿಕೊಂಡಿಲ್ಲ. ಅನುದಾನ, ಖರ್ಚು ತಾಳೆ ಆಗ್ತಿದ್ಯಾ, ಇಲ್ವಾ ಅಂತಾ ನೋಡೋದು ಸಾಮಾನ್ಯ. ಎಲ್ಲಾ ಕಾಲದಲ್ಲೂ ಕೆಲವು ಪರ್ಸೆಂಟೇಜ್ ತಾಳೆ ಆಗುವುದಿಲ್ಲ.ನಾನೂ ವರದಿ ತರಿಸಿಕೊಂಡು ನೋಡಿದ್ದೇನೆ. ನಮ್ಮ ಅವಧಿಯ ಬಜೆಟ್ ನಲ್ಲಿ ಶೇ.19ರಷ್ಟು ರೀಕನ್ಸಿಡರೇಶನ್ ಆಗಿಲ್ಲ ಎಂದು ಆಡಿಟ್ ವರದಿ ಹೇಳಿದೆ. ಅದಕ್ಕೂ ಮೊದಲು 2008-09 ರಲ್ಲಿ ಶೇ.49.87 ತಾಳೆ ಆಗಿಲ್ಲ ಅಂತಾ CAG ರಿಪೋರ್ಟ್ ಹೇಳಿತ್ತು. 2015-16 ರಲ್ಲಿ ಶೇ.16 ರೀ ಕನ್ಸಿಲೇಶನ್ ಕಡಿಮೆ ಆಗಿದೆ. ಆ ಮೂರ್ಖರಿಗೆ ಇದು ಅರ್ಥ ಆಗುತ್ತಾ?’ ಎಂದು ವಾಗ್ದಾಳಿ ನಡೆಸಿದರು.

    ‘ಹಣಕಾಸಿನ ವ್ಯವಸ್ಥೆಯಲ್ಲಿ ಶಿಸ್ತು ತಂದಿದ್ದೇ ನಮ್ಮ ಸರ್ಕಾರ. BJP ಆಡಳಿತದಲ್ಲಿ ಅಶಿಸ್ತು ಇತ್ತು. CAG ವರದಿಯನ್ನು ಸುಧಾಕರ್ ಓದಿದ್ದಾನೋ ಇಲ್ಲವೋ ಗೊತ್ತಿಲ್ಲ. ಯಾಕೆಂದರೆ ಲಂಚ ಹೊಡೆಯುವವರಿಗೆ ಓದಲು ಟೈಮ್ ಎಲ್ಲಿರುತ್ತದೆ. ಭ್ರಷ್ಟಾಚಾರಕ್ಕೂ, ಆರ್ಥಿಕ ಅಶಿಸ್ತಿಗೂ ವ್ಯತ್ಯಾಸವಿದೆ’ ಎಂದು ಗುಡುಗಿದರು.
    ‘ಅಲಿಬಾಬ 40 ಮಂದಿ ಕಳ್ಳರಲ್ಲಿ ಸುಧಾಕರ್ ಒಬ್ಬ ಸದಸ್ಯ. ಇವರೆಲ್ಲಾ ಏನೇನ್ ಮಾಡಿದ್ದಾರೆ ಎಂದು ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿದ್ದ ಹೆಚ್.ಕೆ.ಪಾಟೀಲ್ ವರದಿ ಕೊಟ್ಟಿದ್ದಾರೆ. ಕೊರೋನಾ ಕಾಲದಲ್ಲಿ ಸುಧಾಕರ್ ಸುಮಾರು ಮೂರು ಸಾವಿರ ಕೋಟಿ ಲಂಚ ಪಡೆದಿದ್ದಾನೆ ಎಂಬ ವರದಿ ಇದೆ. ವಿಧಾನಸಭಾಧ್ಯಕ್ಷರು ಆ ವರದಿಯನ್ನು ವಿಧಾನಮಂಡಲದಲ್ಲಿ ಮಂಡನೆ ಮಾಡಿಲ್ಲ’ ಎಂದು ಆರೋಪಿಸಿದರು.

    ‘ಕೊರೊನಾ ಕಾಲದ ಭ್ರಷ್ಟಚಾರವನ್ನು ವಿಶೇಷ ಆಡಿಟ್ ಮಾಡೋಕೆ ಸರ್ಕಾರ ಒಪ್ಪಲಿಲ್ಲ. ತಪ್ಪು ಮಾಡಿಲ್ಲ ಎಂದರೆ ವಿಶೇಷ ಆಡಿಟ್‍ಗೆ ಒಪ್ಪಬಹುದಿತ್ತಲ್ಲ. ಬಿಜೆಪಿ ಸುಳ್ಳಿನ ಕಾರ್ಖಾನೆ. ರವಿಕುಮಾರ್ ಅವರನ್ನು ಸುಳ್ಳು ಹೇಳಲಿಕ್ಕಾಗಿಯೇ ಇಟ್ಟುಕೊಂಡಿದ್ದಾರೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಾವೇದ್ ಅಖ್ತರ್ ಸ್ಪಷ್ಟ ಉತ್ತರ ಬರೆದಿದ್ದಾರೆ’ ಎಂದರು.

    BJP Congress CORRUPTION Government m Politics ಆರೋಗ್ಯ ಬೊಮ್ಮಾಯಿ ಲಂಚ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರವನ್ನು ಕಲಿಸಿಕೊಟ್ಟವರೇ Congress ನವರು.
    Next Article ADGP ಶರತ್ ಚಂದ್ರ ಅವರಿಗೆ ವಿಶಿಷ್ಟ ಸೇವಾ ಪದಕ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Сиделка с проживанием Москва on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Jessiebep on ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    • 2jo09 on ಅಕ್ರಮ ಕಟ್ಟಡ ಸಕ್ರಮಕ್ಕೆ ಸಿದ್ಧತೆ | Akrama Sakrama
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe