Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Amit Shah ಬಂಧಿಸಲು ಕಾಂಗ್ರೆಸ್ ಆಗ್ರಹ
    ರಾಜಕೀಯ

    Amit Shah ಬಂಧಿಸಲು ಕಾಂಗ್ರೆಸ್ ಆಗ್ರಹ

    vartha chakraBy vartha chakraApril 27, 2023Updated:April 28, 202349 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.27- ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಗ್ರಗಣ್ಯ ನಾಯಕ ಅಮಿತ್ ಶಾ (Amit Shah) ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
    ಅಮಿತ್ ಶಾ ಹಾಗೂ ವಸತಿ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್‌ ನಾಯಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ
    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿದ್ದಾರೆ ಇದು ಸಂವಿಧಾನ ವಿರೋಧಿ ನಿಲುವಾಗಿದೆ ಕೋಮು ಗಲಭೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

    ಅಮಿತ್ ಶಾ (Amit Shah) ಅವರು ವಿಜಯಪುರ ಜಿಲ್ಲೆಯಲ್ಲಿ ಏಪ್ರಿಲ್ 25ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಭಾಷಣ ಸಮುದಾಯಗಳ ನಡುವೆ ದ್ವೇಷ ಬಿತ್ತಿ, ಗಲಭೆ ಸೃಷ್ಟಿಸುವ ಸಂಚು ಒಳಗೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಆಗ್ರಹಿಸಿದೆ.
    ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಅವರ ನಿಯೋಗ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದೆ.

    ಭಾರತೀಯ ದಂಡ ಸಂಹಿತೆ 1860ರ ಹಲವು ಸೆಕ್ಷನ್‍ಗಳನ್ನು ನಮೂದಿಸಲಾಗಿದೆ. ಜನರನ್ನು ಬೆದರಿಸಿ ದಾರಿ ತಪ್ಪಿಸುವ ಯತ್ನ ಮಾಡಿರುವುದಕ್ಕಾಗಿ ಸೆಕ್ಷನ್ 505ರ ಅಡಿ, ಎರಡು ವರ್ಗಗಳ ನಡುವೆ ದ್ವೇಷ ಬಿತ್ತಲು ಯತ್ನಿಸಿದ್ದಕ್ಕಾಗಿ ಸೆಕ್ಷನ್ 505 (2) ಅಡಿ, ದಂಗೆಗೆ ಪ್ರಚೋದನೆ ನೀಡಿರುವ ಆರೋಪದಡಿ ಸೆಕ್ಷನ್ 153ರಡಿ, ಎರಡು ಗುಂಪು ಅಥವಾ ಧರ್ಮಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ ಮಾಡಿದ್ದಕ್ಕಾಗಿ ಸೆಕ್ಷನ್ 153 (ಎ) ಅಡಿ, ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಸೆಕ್ಷನ್ 171 ಜಿ ಅಡಿ, ಕ್ರಿಮಿನಲ್ ಸಂಚು ರೂಪಿಸಿದ್ದಕ್ಕಾಗಿ ಸೆಕ್ಷನ್ 12 ಬಿ, ಹಾಗೂ ಜನಪ್ರಾತಿನಿಧ್ಯ ಕಾಯ್ದೆ 1951ರ ಸೆಕ್ಷನ್ 123 ಅಡಿ ಭ್ರಷ್ಟ ಆಚರಣೆಗಳಿಗಾಗಿ ಅಮಿತ್ ಶಾ (Amit Shah) ಹಾಗೂ ಬಿಜೆಪಿ ನಾಯಕರ ವಿರುದ್ಧ ವೈಯಕ್ತಿಕವಾಗಿ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದೆ.

    Amit Shah
    ಧರ್ಮಗಳು, ಜಾತಿ ನಡುವೆ ದ್ವೇಷ ಬಿತ್ತುವ ಮೂಲಕ ಕೋಮ ಸೌಹಾರ್ದತೆ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಸಂಪೂರ್ಣ ಸುಳ್ಳು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಪಿಎಫ್‍ಐ ವಿರುದ್ಧದ ನಿಷೇಧವನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದೆ ಎಂದು ಮಾತನಾಡಿದ್ದಾರೆ. ಇದು ಸಂಪೂರ್ಣ ಸುಳ್ಳಾಗಿದೆ ಎಂದು ಆರೋಪಿಸಿದ್ದಾರೆ.

    ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ನಮ್ಮ ರಾಜ್ಯ ಶಾಂತಿಯ ತೋಟವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಆಗಲಿವೆ ಎಂದು ಕೇಂದ್ರ ಗೃಹ ಸಚಿವ ಭಾಷಣ ಮಾಡಿದ್ದಾರೆ. ಜನರ ಹೆದರಿಸುವಂತ ಕೆಲಸವನ್ನು ಇವರು ಮಾಡಿದ್ದಾರೆ. ಪ್ರಜಾಪ್ರಭುತ್ವ ಎಲ್ಲಿದೆ, ಜನರ ಮೇಲೆ ಪ್ರಭಾವ ಬೀರುವ ಅಮಿತ್ ಶಾ (Amit Shah) ಮೇಲೆ ಕ್ರಮ ಆಗಬೇಕು.

    ಎರಡೂ ಮೂರು ಸಮಾವೇಶದಲ್ಲಿ ಇಂತಹ ಹೇಳಿಕೆಗಳನ್ನ ನೀಡಿದ್ದಾರೆ. ಇವರ ವಿರುದ್ಧ ಕಾನೂನು ಪ್ರಕಾರ ಕ್ರಮ ಆಗಬೇಕು. ಚುನಾವಣಾ ಆಯೋಗ ಅಮಿತ್ ಶಾ (Amit Shah) ಅವರು ಚುನಾವಣಾ ಪ್ರಚಾರ ಮಾಡದಂತೆ ನಿಷೇಧ ಮಾಡಬೇಕು.
    ಬೇರೆಯವರು ಮಾತನಾಡಿದರೆ ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಪೇ ಸಿಎಂ ಘೋಷಣೆಗೆ ನಮ್ಮ ಮೇಲೆ ಕೇಸ್ ಹಾಕಿದ್ದಾರೆ‌. ಈಗ ಈ ದೂರಿನ ಮೇಲೆ ಕ್ರಮ ಆಗಬೇಕು. ಜನರ ಮೇಲೆ ಪ್ರಭಾವ ಬೀರುವ ಹೇಳಿಕೆಗಳನ್ನ‌ ನೀಡಬಾರದು. ನಮ್ಮ ದೂರಿಗೆ ಕೂಡಲೇ ಕ್ರಮ ಆಗಬೇಕು ಎಂದು ಚುನಾವಣಾ ಆಯೋಗ ಹಾಗೂ ಪೊಲೀಸರಿಗೆ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

    ಪಿಎಫ್‌ಐ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಮಿತ್ ಶಾ ಪಿಎಫ್ಐ ನಿಷೇಧ ರದ್ದು ಮಾಡುತ್ತಾರೆ ಎಂದು ಸುಳ್ಳು ಹೇಳಿದ್ದಾರೆ.
    ಪಿಎಫ್ಐ ನಿಷೇಧ ಮಾಡಲು ಸಿದ್ದರಾಮಯ್ಯ, ಮತ್ತು ನಾನು ಒತ್ತಾಯಿಸಿದ್ದೆವು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ. ಕಾಂಗ್ರೆಸ್ ಪಿಎಫ್ಐ ನಿಷೇಧ ಮಾಡಲು ಒತ್ತಾಯ ಮಾಡಿದೆ. ಬಿಜೆಪಿ ಚುನಾವಣೆಯಲ್ಲಿ 40 ಸ್ಥಾನಗಳು ಬರಲಿದೆ. ಸೋಲುವುದರಿಂದ ತಪ್ಪಿಸಿಕೊಳ್ಳಲು ಅಮಿತ್ ಶಾ (Amit Shah) ಇಂತಹ ಸುಳ್ಳು ಆರೋಪಗಳನ್ನ ಮಾಡಿದ್ದಾರೆ. ಇವರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಾಗಬೇಕು. ಅಮಿಶ್ ಶಾರನ್ನ ತಕ್ಷಣವೇ ಬಂಧಿಸಬೇಕು ಅಂತ ಡಿಕೆಶಿ ಆಗ್ರಹಿಸಿದ್ದಾರೆ.

    Also read. 

    ಸ್ಟಾರ್ ನಟನಿಗೆ ಸಹಾಯ ಮಾಡಿ ಪೇಚಿಗೆ ಸಿಲುಕಿದ ಜನಸಾಮಾನ್ಯ | Sai Dharmateja

    Amit Shah art m mi Varthachakra ಕಾಂಗ್ರೆಸ್ ಕಾನೂನು Election ಧರ್ಮ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸ್ಟಾರ್ ನಟನಿಗೆ ಸಹಾಯ ಮಾಡಿ ಪೇಚಿಗೆ ಸಿಲುಕಿದ ಜನಸಾಮಾನ್ಯ | Sai Dharmateja
    Next Article ಕರ್ನಾಟಕ ಚುನಾವಣೆಯ ಬಗ್ಗೆ BBC ಸಮೀಕ್ಷೆ!
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgehes on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • tk88 casino on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 1win_syma on ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe