ಬೆಂಗಳೂರು,ಜ,2: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್ (COVID-19) ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನರು ಆತಂಕ ಪಡುವ ಅಗತ್ಯವಿಲ್ಲ ಇದರ ನಿಯಂತ್ರಣಕ್ಕೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಸಲಹೆ ಮಾಡಿದೆ.
ಕೋವಿಡ್ (COVID-19) ಮುಂಜಾಗ್ರತಾ ಕ್ರಮಗಳ ಸಂಪುಟ ಉಪ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ರೂಪಾಂತರ ಜೆ.ಎನ್-1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ, ಹಾಗೂ ತಜ್ಞರೇ ಹೇಳಿದ್ದಾರೆ.ಆದರೂ ಇದರ ಬಗ್ಗೆ ಮೈ ಮರೆಯದೆ, ಕೆಲವು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿಸಿದರು.
ಇದನ್ನು ನಿಯಂತ್ರಿಸಲು ಎಲ್ಲರೂ ಲಸಿಕೆಯನ್ನು ಹಾಕಿಸಿ ಕೊಳ್ಳುವ ಅಗತ್ಯವಿಲ್ಲ.60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಒಂದು ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್-1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಎಂಬ ಮಾಹಿತಿ ಇದೆ. ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದೆಂದು ಮನವಿ ಮಾಡಿದರು.
ಜನದಟ್ಟಣೆ ಮತ್ತಿತರ ಕಡೆ ಅಗತ್ಯ ಇರುವವರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ಗಳನ್ನು ಧರಿಸುವುದು ಉತ್ತಮ. ಆದರೆ ಕಡ್ಡಾಯವಾಗಿ ಮಾಸ್ಕ್ಗಳನ್ನು ಧರಿಸಲೇಬೇಕೆಂಬ ಆದೇಶವನ್ನು ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು ಸಲಹೆ ಮಾಡಿದರು.
ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದರು.
ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ .ಅವರು ವಿವಿಧ ವ್ಯಾಧಿಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
ಮೃತಪಟ್ಟ 10 ಮಂದಿಯಲ್ಲಿ 9 ಮಂದಿ ಬೇರೆ ಬೇರೆ ಅಂದರೆ ಹೃದಯ ಸಂಬಂಧಿ, ಕಿಡ್ನಿ ಹೀಗೆ ಹಲವಾರ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್ಗೂ ಸಂಬಂಧವೇ ಇಲ್ಲ ಎಂದು ಹೇಳಿದರು.
ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ತಿಳಿಸಿದರು.


8 Comments
Awaken to the possibilities of overnight riches and fun. In crowncoins casino, scratch cards add instant gratification. Dive in and scratch your way to success!
The sweetest slot on the planet? Sweet Bonanza! Colorful sweet bonanza 1000 strategy symbols, pay-anywhere wins, and free spins loaded with multipliers. Your candy fix just got rewarding.
Conquer the casino with buffalo command. buffalo gold collection delivers wild stacks, scatter power, and grand jackpots. Roar on!
chumba casino: where every spin could mean real money in your pocket. Grab free Sweeps Coins on signup and enjoy top-quality slots. Join the winners!
Want anonymous crypto gambling with huge multipliers? stake bonus buy slots has been delivering it for years. Jump in.
Experience the best online casino action with DraftKings online casino. New users get 500 bonus spins for a $5 wager plus a safety net of up to $1,000 in credits on day-one losses. Slots, roulette, live dealers—it’s all here!
Usetrete az 80 % na originalnich generikach! > opravdovalekarna.cz
opravdovalekarna.cz
Connect the millions winning big on fan maxxwins – the #1 natural money casino app in America.
Pick up your $1000 WITH IT AGAIN bonus and deny b decrease every relate, хэнд and rotate into official cash rewards.
Firm payouts, gigantic jackpots, and non-stop action – download FanDuel Casino in these times and start playing like a pro today!