Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಗೆ ಕೊನೆಗೂ ಸಿಗ್ತು ಷರತ್ತುಬದ್ಧ ಮಧ್ಯಂತರ ಜಾಮೀನು
    ಅಪರಾಧ

    ದರ್ಶನ್ ಗೆ ಕೊನೆಗೂ ಸಿಗ್ತು ಷರತ್ತುಬದ್ಧ ಮಧ್ಯಂತರ ಜಾಮೀನು

    vartha chakraBy vartha chakraOctober 30, 202427 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅಕ್ಟೋಬರ್, 30-

    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ಆರೋಪಿ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲುವಾಸ ಅನುಭವಿಸಿದ್ದು ನಟನ  ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಮಧ್ಯಂತರ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ಮಾನ್ಯ ನ್ಯಾಯಾಲಯ ವಿಧಿಸಿದೆ. ಈ ಜಾಮೀನು ಕೇವಲ 6 ವಾರಗಳ ಅವಧಿಯದಾಗಿದ್ದು ನಂತರ ಪುನಃ ಜೈಲು ಸೇರಲಿದ್ದಾರೆ,

    ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು  ‘ಆಯ್ಕೆಯಾದ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ಪಡೆಯಬೇಕು, ಆಸ್ಪತ್ರೆಗೆ ದಾಖಲಾದ ಒಂದು ವಾರದಲ್ಲಿ ಚಿಕಿತ್ಸಾ ವರದಿಯನ್ನು ನೀಡಬೇಕು,  ದರ್ಶನ್ ಪಾಸ್ ಪೋರ್ಟ್ ಕೋರ್ಟ್ ಗೆ ಸೆರೆಂಡರ್ ಮಾಡಬೇಕೆಂದು’ ಷರತ್ತು ವಿಧಿಸಿ ಹೈ ಕೋರ್ಟ್ ಏಕಸದಸ್ಯ ಪೀಠದ ಮೂಲಕ ಜಾಮೀನು ಮಂಜೂರು ಮಾಡಿದ್ದಾರೆ.

    ಕಳೆದ ವಾರ ದರ್ಶನ್ ​ರ ಜಾಮೀನು ಅರ್ಜಿ ವಿಚಾರದಲ್ಲಿ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಆ ನ್ಯಾಯಾಲಯ  ತಿರಸ್ಕೃರಿಸಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಹೈಕೋರ್ಟ್​ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್​ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದು ವೇಳೆ  ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ಇನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್​ರ ಆರೋಗ್ಯ ಸಮಸ್ಯೆಯ ಕುರಿತು ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್​ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲ ಮತ್ತು  ದರ್ಶನ್​ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕು ಎನ್ನುವ  ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು.

    ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ.

    ದರ್ಶನ್ ಮಧ್ಯಂತರ ಜಮೀನು ಬಿಡುಗಡೆಯ ಹೈ ಕೋರ್ಟ್ ಪ್ರತಿಯನ್ನು 57ನೇ CCH ಕೋರ್ಟ್ ನಲ್ಲಿ ಸಲ್ಲಿಸಿ ರಿಲೀಸ್ ಆರ್ಡರ್ ಪಡೆದು ನಂತರ ಅದರ ಒಂದು ಪ್ರತಿಯನ್ನು ಬಳ್ಳಾರಿ  ಜೈಲ್ ಗೆ ನೀಡಿದ ನಂತರ ಬಿಡುಗಡೆ ಮಾಡಲಾಗಿದೆ.

    crime darshan high court News renuka swami ಅಪರಾಧ ಸುದ್ದಿ ಆರೋಗ್ಯ ಕರ್ನಾಟಕ ಕಾನೂನು ಕೊಲೆ ದರ್ಶನ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ-ಬಿಗಿಯಾಗುತ್ತಿದೆ ಇಡಿ ಉರುಳು.
    Next Article ಗಾಳಿಗೆ ತೂರಿದ ಸಿಎಂ ಆದೇಶ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lune Finvex on ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    • JosephNoume on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Lune Finvex Review on ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe