Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar
    ರಾಜ್ಯ

    ಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar

    vartha chakraBy vartha chakraApril 17, 2023Updated:April 18, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕನಕಪುರ – ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ,ಕಾಂಗ್ರೆಸ್ ಹಳೆ ವೈಭವಕ್ಕೆ ಮರಳಬೇಕೆಂದು ರಣತಂತ್ರ ರೂಪಿಸುತ್ತಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಗಮನ ಸೆಳೆದರು.

    ಕನಕಪುರದಿಂದ ಮತ್ತೊಮ್ಮೆ ಆಯ್ಕೆ ಬಯಸಿರುವ ಶಿವಕುಮಾರ್ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ಈ ಬಾರಿ ತನ್ನ ಹಿರಿಯ ನಾಯಕ ಹಾಗೂ ಒಕ್ಕಲಿಗ ಸಮೂಹ ಸಮುದಾಯದ ಪ್ರಭಾವಿ ಮುಖಂಡ ಆರ್ ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಇದಕ್ಕೆ ಉತ್ತರ ನೀಡುವ ರೀತಿಯಲ್ಲಿ ಶಿವಕುಮಾರ್ ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶನ ನಡೆಸುವ ಮೂಲಕ ಸಂದೇಶ ರವಾನೆ ಮಾಡಿದ್ದಾರೆ.

    ತಮ್ಮ ಕುಟುಂಬ ಸದಸ್ಯರೊಂದಿಗೆ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೊರಬಂದ ಶಿವಕುಮಾರ್ ಅವರಿಗೆ ಬೃಹತ್ ಜನಸ್ತೋಮ ಅದ್ದೂರಿಯ ಸ್ವಾಗತ ಕೋರಿತು.ಅಭಿಮಾನಿಗಳು ,ಬೆಂಬಲಿಗರು, ಪಕ್ಷದ ಕಾರ್ಯಕರ್ತರ ಮುಗಿಲು ಮುಟ್ಟಿದ ಜಯ ಘೋಷಗಳ ನಡುವೆ ಬುಲೆಟ್ ಏರಿ ಸಾಗಿ ಬಂದ ಶಿವಕುಮಾರ್ ನಂತರ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು ಈ ವೇಳೆ ಅವರಿಗೆ ಅವರ ಪತ್ನಿ ಉಷಾ ಶಿವಕುಮಾರ್, ದುಂತೂರು ವಿಶ್ವನಾಥ್, ಚಿನ್ನರಾಜು ಜೊತೆಯಾದರು.

    Karnataka Polls: Congress releases first list; fields Siddaramaiah from  Varuna, Shivakumar from Kanakapura - The Economic Times
    ನಾಮಪತ್ರ ಸಲ್ಲಿಕೆಯ ನಂತರ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡಿದ ಅವರುಈ ಡಿ.ಕೆ ಶಿವಕುಮಾರ್ ನನ್ನು ಕಳೆದ 40 ವರ್ಷಗಳಿಂದ ಮನೆ ಮಗನಂತೆ ಬೆಳೆಸಿರುವುದು ಈ ಕ್ಷೇತ್ರದ ನನ್ನ ತಾಯಂದಿರು, ತಂಗಿಯರು, ಅಣ್ಣತಮ್ಮಂದಿರು. ನೀವು ತೋರಿರುವ ಪ್ರೀತಿ ಅಭಿಮಾನವನ್ನು ಹೇಗೆ ಋಣ ತೀರಿಸಬೇಕು ಗೊತ್ತಿಲ್ಲ. ನನ್ನನ್ನು 7 ಬಾರಿ ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದೀರಿ. ಮುಂದಿನ ತಿಂಗಳು 10ರಂದು ನಡೆಯಲಿರುವ Election ಕೇವಲ ಡಿ.ಕೆ. ಶಿವಕುಮಾರ್ ಅವರನ್ನು ಗೆಲ್ಲಿಸುವ ದಿನ ಮಾತ್ರವಲ್ಲ. ಇಡೀ ರಾಜ್ಯಕ್ಕೆ ಒಬ್ಬ ಶಕ್ತಿಶಾಲಿ ಸೇವಕನನ್ನು ಅರ್ಪಣೆ ಮಾಡುವ ದಿನ. ಈ ಜನ ಸಮೂಹವನ್ನು ನಾನು ತಯಾರು ಮಾಡಿಲ್ಲ. ಇಷ್ಟು ಅಭಿಮಾನ, ಕಾರ್ಯಕರ್ತರು, ನಾಯಕರುಗಳು ಇಲ್ಲಿ ಸೇರಿದ್ದೀರಿ. ನಾನು ಕಳೆದ ಐದು ವರ್ಷಗಳಿಂದ ನಿಮ್ಮನ್ನು ಹೆಚ್ಚಾಗಿ ಭೇಟಿ ಮಾಡಲು ಆಗಿಲ್ಲ ಎಂದರು.

    ಬಿಜೆಪಿಯವರು ನನ್ನ ವಿರುದ್ಧ ಇಡಿ, ಸಿಬಿಐ ಕೇಸು ಹಾಕಿ ತಿಹಾರ್ ಜೈಲಿಗೆ ಹಾಕಿದರು. ಆಗ ನೀವು ಮಾಡಿದ ಪ್ರಾರ್ಥನೆ, ಪೂಜೆ, ಹರಕೆ, ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಬದುಕಿರುವವರೆಗೂ ತೀರಿಸಲು ಸಾಧ್ಯವಿಲ್ಲ.
    ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ನನ್ನನ್ನು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಿಸಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಡಿಕೆ ಶಿವಕುಮಾರ್‌ ಜನತೆಗೆ ಮನವಿ ಮಾಡಿದರು.

    ನನ್ನ ವಿರುದ್ಧ ಯಾರು ನಿಲ್ಲುತ್ತಾರೆ ಎಂಬುದು ಮುಖ್ಯವಲ್ಲ. ನಮ್ಮ ನಿಮ್ಮ ನಡುವಣ ಸಂಬಂಧ ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ. ನಿಮ್ಮ ಹಾಗೂ ಈ ತಾಯಿಯ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸುತ್ತಿದ್ದೇನೆ. ನಾನು ನಿಮ್ಮ ಭಾವನೆ ಅರ್ಥ ಮಾಡಿಕೊಂಡಿದ್ದೇನೆ. ನಾನು ಇಡೀ ರಾಜ್ಯ ಪ್ರವಾಸ ಮಾಡಬೇಕು. ಹೀಗಾಗಿ ಚುನಾವಣೆಗೂ ಮುನ್ನ ಒಂದು ದಿನ ಬಂದು ಪ್ರಚಾರ ಮಾಡುತ್ತೇನೆ ನನ್ನನ್ನು ಆಶೀರ್ವದಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

    Congress DK. Shivakumar m shiva ಇಡಿ ಕಾಂಗ್ರೆಸ್ ಚಿನ್ನ Election ಡಿ.ಕೆ ಶಿವಕುಮಾರ್ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous ArticleShettar ಗೆ Congress B-Form | Jagadish Shettar
    Next Article ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    4 Comments

    1. pills like cialis on June 10, 2025 5:52 am

      Palatable blog you possess here.. It’s obdurate to find great quality writing like yours these days. I truly respect individuals like you! Go through guardianship!!

      Reply
    2. can you take tylenol with cipro and flagyl on June 12, 2025 12:15 am

      I couldn’t hold back commenting. Adequately written!

      Reply
    3. 6hlg3 on June 22, 2025 8:58 am

      buy amoxil pills for sale – combivent over the counter order combivent 100mcg pill

      Reply
    4. rwvnt on June 24, 2025 11:59 am

      buy zithromax 500mg pill – order tinidazole 300mg sale bystolic 5mg for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 70ab5 on ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    • Maxinemoict on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Bobbyglupe on ಹೊಸ ಕಾನೂನಿನ ಅನ್ವಯ ಮೊದಲ FIR ಯಾರ ಮೇಲೆ ಗೊತ್ತಾ.?
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe