Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK Shivakumar ಗೆ ಕೋಪ ಬಂದಿದೆಯಂತೆ!
    Bengaluru

    DK Shivakumar ಗೆ ಕೋಪ ಬಂದಿದೆಯಂತೆ!

    vartha chakraBy vartha chakraMay 21, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 21- ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ದಿನ ಕಳೆಯುವುದರೊಳಗೆ ಇಬ್ಬರು ನಾಯಕರ ನಡುವೆ ಅಸಮಾಧಾನದ ಹೊಗೆ ಏಳತೊಡಗಿದೆ.
    Electionಗೂ ಮುನ್ನ ಕಾಂಗ್ರೆಸ್ ಪಕ್ಷ ಮತದಾರರಿಗೆ ನೀಡಿದ ಗ್ಯಾರಂಟಿಗಳ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಬಳಿಕ ಮಾಧ್ಯಮಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಜಾಹಿರಾತು ನೀಡಲಾಗಿದೆ.
    ಈ ಜಾಹಿರಾತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ಮಾತ್ರ ಹಾಕಲಾಗಿದ್ದು ಇದು ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಬೇಸರ ತರಿಸಿದೆ ಎನ್ನಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ನಡೆದಿರುವ ಈ ಪ್ರಚೋದನಾತ್ಮಕ ನಡೆಯಿಂದ ಸಹಜವಾಗಿ ಶಿವಕುಮಾರ್ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು ಹಲವರು ಈ ಬಗ್ಗೆ ಅವರ ಬಳಿ ತಮ್ಮ ಅಸಮಾಧಾನ ಹೇಳಿಕೊಳ್ಳಲು ಬಂದಾಗ ಸಿಟ್ಟು ಹೊರಹಾಕಿದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ಪತ್ರಿಕೆಗಳಲ್ಲಿ ಬಂದ ಜಾಹೀರಾತು ನೋಡಿದ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಆಪ್ತರು ತಮ್ಮ ನಾಯಕನಿಗೆ ವಿಷಯದ ಮಾಹಿತಿ ನೀಡಿದ್ದಾರೆ ಆ ವೇಳೆ ತಮಗೆಲ್ಲ ಗೊತ್ತಿದೆ ಇನ್ನು ಮುಂದೆ ಇಂಥವುದನ್ನು ಹೇಳಬೇಡಿ ಎಂದು ಅವರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ..
    ಚಾಡಿ ಹೇಳಬೇಡಿ-
    ಈ ಎಲ್ಲಾ ಘಟನಾವಳಿಗಳ ನಂತರ,ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಅವರ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮುಖ್ಯಮಂತ್ರಿ ಸೇರಿದಂತೆ ಯಾರ ವಿರುದ್ಧವೂ ದೂರಿನೊಂದಿಗೆ ನನ್ನ ಬಳಿ ಚಾಡಿ ಹೇಳಲು ಬರಬೇಡಿ. ನಾನು ಯಾರ ಮಾತನ್ನೂ ಕೇಳುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
    ನನಗೂ 30 ವರ್ಷಗಳ ರಾಜಕೀಯ ಅನುಭವ ಇದೆ. ನನ್ನದೇ ಆದ ವಿಚಾರಗಳಲ್ಲಿ ನಾನು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.
    ಸಿದ್ದರಾಮಯ್ಯ ಹಾಗೆ ಹೇಳಿದರು, ಎಂ.ಬಿ.ಪಾಟೀಲ್ ಹೀಗೆ ಹೇಳಿದರು ಎಂದೆಲ್ಲ ಚಾಡಿ ಹೇಳಲು ಬರಬೇಡಿ. ನಾನು ಯಾರ ಮಾತನ್ನೂ ಕೇಳುವುದಿಲ್ಲ. ಪ್ರಮುಖವಾಗಿ ಅಧಿಕಾರಕ್ಕಾಗಿ ಯಾರೇ ಆದರೂ ನಾಯಕರನ್ನು ಭೇಟಿ ಮಾಡಿ ಲಾಬಿ ನಡೆಸುವುದು ಸರಿಯಲ್ಲ. ಯಾರಿಗೆ ಅವಕಾಶ ಕೊಡಬೇಕು, ಯಾವ ಅವಕಾಶ ನೀಡಬೇಕು ಎಂಬುದು ನಮಗೆ ಗೊತ್ತಿದೆ. ಕಾರ್ಯಕರ್ತರು, ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಆದರೆ ಅದನ್ನು ಮುಖಂಡರ ಮುಂದೆ ತೋರಿಸುವುದಲ್ಲ. ಸ್ಥಳೀಯವಾಗಿ ಪಕ್ಷ ಸಂಘಟಿಸಬೇಕು ಎಂದು ಹೇಳಿದರು.
    ನಮಗೆ ಲೋಕಸಭೆ ಚುನಾವಣೆ ಬಹಳ ಮುಖ್ಯವಾಗಿದೆ. ಅದಕ್ಕಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ನೀವು ಸ್ಥಳೀಯ ಮಟ್ಟದಲ್ಲಿ ಪಕ್ಷವನ್ನು ಹೆಚ್ಚು ಸದೃಢಗೊಳಿಸಬೇಕು. ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿದ್ದೇವೆ. ಆದರೆ, ಸಂಸತ್ ಚುನಾವಣೆ ಭಿನ್ನವಾಗಿರುತ್ತದೆ. ಈ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    DK. Shivakumar m shiva ಕಾಂಗ್ರೆಸ್ Election ರಾಜಕೀಯ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹಮದ್ ಖಾನ್ ಕನ್ನಡ ವಿರೋಧಿನಾ?
    Next Article ಮೋದಿ ಸಮಸ್ಯೆ ಒಡ್ಡುತ್ತಿದ್ದಾರೆ ಎಂದ ಬೈಡೆನ್
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GordonRog on ಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    • Jeffreytup on ಕಾಡು ಕಡಿದವರನ್ನು ಹುಡುಕಿ | Uttara Kannada
    • wikis.ece.iastate.edu on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe