Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಲ್ಡೋಜರ್ ಓಡೋಕೆ ಬಿಡೋಲ್ಲಾ.. !!
    ಸುದ್ದಿ

    ಬುಲ್ಡೋಜರ್ ಓಡೋಕೆ ಬಿಡೋಲ್ಲಾ.. !!

    vartha chakraBy vartha chakraJune 15, 2022Updated:June 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,- ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಸರ್ ಕಾನೂನನ್ನು ಜಾರಿಗೆ ತರಲು ಅವಕಾಶ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
    ಉತ್ತರ ಪ್ರದೇಶದಂತೆ ರಾಜ್ಯದಲ್ಲೂ ಬುಲ್ಡೋಸರ್ ಮಾದರಿ ಕಾನೂನು ಜಾರಿ ಮಾಡಿ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲು ಮುಂದಾದರೆ ಬುಲ್ಡೋಸರ್ ಕೆಳಗೆ ಮಲಗುತ್ತವೆ. ಬುಲ್ಡೋಸರ್ ನಮ್ಮ ಮೇಲೆ ಹತ್ತಿಸಲಿ ಎಂದರು.
    ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಹೆದರಿಸಬೇಕು ಎಂದು ಸುಮ್ಮನೆ ಕಿರುಕುಳ ಕೊಡುತ್ತಿದ್ದಾರೆ. ಬುಲ್ಡೋಸರ್ ಕಾನೂನು ರಾಜ್ಯದಲ್ಲಿ ನಡೆಯಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
    ಚಿಕ್ಕಮಗಳೂರಿನಲ್ಲಿ ಅಕ್ರಮ ಕಟ್ಟಡಗಳ ಮೇಲೆ ಉತ್ತರ ಪ್ರದೇಶ ಮಾದರಿಯಲ್ಲಿ ಬುಲ್ಡೋಸರ್ ಪ್ರಯೋಗ ನಡೆಸಿರುವುದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದರು.
    ರಾಷ್ಟ್ರ ಮಟ್ಟದಲ್ಲಿ ನಮ್ಮ ನಾಯಕರುಗಳು ಏನೂ ತಪ್ಪು ಮಾಡಿಲ್ಲ. ಅವರ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಜೈಲಿಗೆ ಹಾಕಲಿ ನಾವು ಹೆದರಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಕಾಂಗ್ರೆಸ್ ಎಂದರು.
    ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನೆಹರೂ ಕಾಲದಿಂದಲೂ ಮುಂದುವರೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೆಲ್ಲಾ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ದುಡ್ಡು ಕೊಟ್ಟಿದ್ದಾರೆ. ಅದನ್ನು ಕಾಂಗ್ರೆಸ್ ಪಕ್ಷ ಮುಂದುವರೆಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಡೆಸುವುದಕ್ಕೆ ಒಂದು ಟ್ರಸ್ಟ್ ಮಡಾಲಾಗಿತ್ತು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆ ಟ್ರಸ್ಟ್ ವಾರಸುದಾರಿಕೆಯನ್ನು ನಮ್ಮ ನಾಯಕರು ಹೊಂದಿದ್ದಾರೆ. ಟ್ರಸ್ಟ್ ಅಧ್ಯಕ್ಷರಾದ ತಕ್ಷಣ ಟ್ರಸ್ಟ್ ಆಸ್ತಿಯನ್ನು ನಮ್ಮದೆಂದು ಘೋಷಿಸಲು ಸಾಧ್ಯವಿಲ್ಲ. ಸೋನಿಯಾಗಾಂಧಿ ಆಗಲಿ, ರಾಹುಲ್‌ಗಾಂಧಿ ಅವರಾಗಲಿ ಚುನಾವಣಾ ಪ್ರಮಾಣ ಪತ್ರ ಸಲ್ಲಿಕೆ ಸಂದರ್ಭದಲ್ಲೂ ಈ ಬಗ್ಗೆ ಹೇಳಿಲ್ಲ. ಕೇಂದ್ರ ಸರ್ಕಾರ ಮಾಡುತ್ತಿರುವುದು ತಪ್ಪು ಎಂದರು.
    ಪ್ರಜಾಪ್ರಭುತ್ವದಲ್ಲಿ ಹೋರಾಟ ನಡೆಸುವುದು ನಮ್ಮ ಹಕ್ಕು. ಅದನ್ನು ದಮನ ಮಾಡಲಾಗುತ್ತಿದೆ. ಇದು ತುರ್ತು ಪರಿಸ್ಥಿತಿಗಿಂತ ದೊಡ್ಡದು. ಇದಕ್ಕೆ ಬೇರೆ ಒಂದು ಹೆಸರು ನಾಮಕರಣ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರರಿಗಾಗಿ ಹುಡುಕಾಟ..!
    Next Article 11ನೇ‌ ಮಹಡಿಯಿಂದ ಜಿಗಿದು ವಿಕ್ಟೋರಿಯಾ ಆಸ್ಪತ್ರೆ ಯುವ ವೈದ್ಯ ಸಾವು
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • 1win suretli qeydiyyat on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe