Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar
    ಸುದ್ದಿ

    ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar

    vartha chakraBy vartha chakraJanuary 16, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.16- ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಜಾರಿಗೊಳಿಸಿರುವ ಆಸ್ತಿ ತೆರಿಗೆ ಪದ್ಧತಿ ನಾಗರಿಕರಿಗೆ ಹೊರೆಯಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ.ಹೀಗಾಗಿ ಇದನ್ನು ಜನಸ್ನೇಹಿ ಹಾಗೂ ಸರಳವಾಗಿ ಪರಿಷ್ಕರಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
    ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2020 ರಲ್ಲಿ ಬಿಜೆಪಿ ಸರ್ಕಾರ ರಚಿಸಿದ ಬಿಬಿಎಂಪಿ ಕಾಯ್ದೆಯಿಂದ ಆಸ್ತಿ ತೆರಿಗೆ ಮತ್ತು ದಂಡದ ಪ್ರಮಾಣ ದುಬಾರಿಯಾಗಿದೆ ಎಂಬ ಆರೋಪಗಳಿವೆ. ಹಲವು ಕ್ಷೇತ್ರಗಳಲ್ಲಿ ಜನಸ್ಪಂದನ ನಡೆಸಿದಾಗ ಈ ಸಮಸ್ಯೆ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

    ಬೆಂಗಳೂರಿನ ಜನರು ಸಮರ್ಪಕವಾದ ಆಸ್ತಿ ತೆರಿಗೆ ಪಾವತಿಸಬೇಕು. ಇದರಿಂದ ಮಾತ್ರ ಅಭಿವೃದ್ಧಿಪಡಿಸಲು ಸಾಧ್ಯ. 3 ಅಂತಸ್ತಿನ ಮನೆ ಕಟ್ಟಿ, 1 ಅಂತಸ್ತಿಗೆ ಮಾತ್ರ ತೆರಿಗೆ ಕಟ್ಟಿದರೆ ಅದು ಸರಿಯಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ದುಬಾರಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದೇ ರೀತಿ ಬಿಬಿಎಂಪಿ ನೂತನ ಕಾಯ್ದೆಯಲ್ಲಿನ ದುಬಾರಿ ತೆರಿಗೆ ವ್ಯವಸ್ಥೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರು ಪತ್ರ ಬರೆದಿದ್ದಾರೆ. ಇದರ ಪರಿಷ್ಕರಣೆ ಮಾಡುವ ಅಗತ್ಯವಿದೆ. 30-40 ಚದರ ಅಡಿ ವಿಸ್ತೀರ್ಣದ ನಿವೇಶನದ ಮನೆಗಳಿಗೆ, ಶೆಡ್‍ಗಳಿಗೆ ಸೂಚನೆ ಮಾಡಲಾಗಿದೆ. ಕಂದಾಯ ಮನ್ನಾ ಮಾಡಿ ಬಡವರಿಗೆ ಸಹಾಯವಾಗುವ ತೆರಿಗೆ ಪದ್ಧತಿಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು. ಮೂರ್ನಾಲ್ಕು ದಿನದಲ್ಲೇ ತೆರಿಗೆ ಕಟ್ಟಿ ಎಂದು ಒತ್ತಡ ಹೇರುವುದನ್ನು ತಪ್ಪಿಸಲಾಗುವುದು ಎಂದರು.
    ಎಲ್ಲರನ್ನೂ ತೆರಿಗೆ ವ್ಯಾಪ್ತಿಗೊಳಪಡಿಸಲಾಗುವುದು. ಮನೆಬಾಗಿಲಿಗೆ ಸಮರ್ಪಕ ಆಸ್ತಿ ದಾಖಲೆಗಳನ್ನು ತಲುಪಿಸಲಾಗುವುದು ಎಂದು ಹೇಳಿದರು.

    ಬೆಂಗಳೂರಿನಲ್ಲಿ ವಸತಿ ಸಮಸ್ಯೆ ಬಗೆಹರಿಸಿ ಆದ್ಯತೆ ನೀಡಲಾಗುವುದು. ಎಲ್ಲವನ್ನೂ ಉಚಿತವಾಗಿ ಕೊಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳ ವಂತಿಗೆಗೂ ಅವಕಾಶ ಕಲ್ಪಿಸಲಾಗಿದೆ.ಹಿಂದೆ 1 ಲಕ್ಷ ಮನೆ ಘೋಷಣೆ ಮಾಡಲಾಗಿತ್ತು. ಆದರೆ ಒಂದು ಮನೆಯನ್ನೂ ಕೊಟ್ಟಿಲ್ಲ. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಪರಿಶೀಲಿಸಿ ವಸತಿ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು ಎಂದು ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫುಟ್‍ಪಾತ್ Businessಿಗಳಿಗೆ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ರಸ್ತೆ ಮಧ್ಯೆ ಖಾಯಂ ಅಂಗಡಿ ತೆರೆಯುವುದರ ಬದಲಾಗಿ ತಳ್ಳುವ ಗಾಡಿಯಲ್ಲಿ ರಸ್ತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರೆ ಆಕ್ಷೇಪಣೆಗಳಿಲ್ಲ. ಫುಟ್‍ಪಾತ್ ತೆರವಿಗೆ ಸಂಬಂಧಪಟ್ಟಂತೆ ಹೈಕೋರ್ಟ್‍ನ ಆದೇಶವಿದೆ. ಒತ್ತುವರಿ ತೆರವುಗೊಳಿಸದೇ ಇದ್ದರೆ ಬಿಬಿಎಂಪಿ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದರು.

    ಬೆಂಗಳೂರಿನಲ್ಲಿ ಶೀಘ್ರವೇ ನೂತನ ಜಾಹಿರಾತು ನೀತಿಯನ್ನು ಜಾರಿಗೆ ತರಲಾಗುವುದು. ಈಗಾಗಲೇ ಫ್ಲೆಕ್ಸ್, ಬ್ಯಾನರ್‍ಗಳನ್ನು ನಿಷೇಸಲಾಗಿದೆ. ನಿಯಮ ಉಲ್ಲಂಘಿಸಿ ಯಾರೇ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಿದರೂ, ಅದರಲ್ಲಿ ನನ್ನ ಫೋಟೋ ಹಾಕಿದ್ದರೂ ಕೂಡ ಕೇಸು ದಾಖಲಿಸಿ, ದಂಡ ವಿಸಿ ಎಂದು ಹೇಳಿದರು. ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಇನ್ನು ಕಸ ವಿಲೇವಾರಿಯಲ್ಲಂತೂ ದೊಡ್ಡ ಗ್ಯಾಂಗೇ ಇದೆ. ಈ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದರು.

    DK. Shivakumar m shiva Business
    Share. Facebook Twitter Pinterest LinkedIn Tumblr Email WhatsApp
    Previous Articleಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    Next Article ಬ್ಯಾಗ್ ಕದ್ದು ಸಿಕ್ಕಿಹಾಕಿಕೊಂಡ ನ್ಯೂಝೀಲ್ಯಾನ್ಡ್ ಸಂಸದೆ! | New Zealand
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    4 Comments

    1. upba0 on June 8, 2025 1:39 pm

      get clomid without rx clomiphene one fallopian tube where to get cheap clomiphene order cheap clomid without prescription how can i get clomiphene tablets clomid generic cost order generic clomiphene for sale

      Reply
    2. what happens if you drink alcohol with flagyl on June 11, 2025 2:29 am

      More posts like this would make the blogosphere more useful.

      Reply
    3. gqq3t on June 18, 2025 10:24 am

      purchase inderal online – inderal medication methotrexate 10mg cheap

      Reply
    4. nsofy on June 23, 2025 11:14 am

      zithromax price – tindamax 500mg pill buy generic nebivolol

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ml0eq on ಮೋದಿಯವರ ಹವ್ಯಾಸಗಳೇನು ಗೊತ್ತಾ?
    • Bobbyglupe on ಏನಿದು..? ನಂಬಿಕೆ ನಕ್ಷೆ !
    • 6dhyq on ಅಚ್ಚರಿ ಮೂಡಿಸಿದ ಪರಮೇಶ್ವರ್ ನಡೆ | G Parameshwara
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe