Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar
    ಸುದ್ದಿ

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    vartha chakraBy vartha chakraDecember 9, 202330 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ. 9: ಹಣವನ್ನು ಪೆಟ್ಟಿಗೆಯಲ್ಲಿ ಕೂಡಿಟ್ಟರೆ ಐಟಿ ದಾಳಿ ಸೇರಿದಂತೆ ನಾನಾ ತೊಂದರೆಗಳು ಬರುತ್ತವೆ. ಅದೇ ರೀತಿ ರಕ್ತವನ್ನು ದೇಹದಲ್ಲಿ ಕೂಡಿಟ್ಟರೂ ತೊಂದರೆ. ಹೀಗಾಗಿ ಎರಡನ್ನೂ ಆಗಾಗ್ಗೆ ದಾನ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಕಿವಿಮಾತು ಹೇಳಿದ್ದಾರೆ
    ಬೆಂಗಳೂರಿನಲ್ಲಿ ಎಚ್.ಡಿ.ಎಫ್. ಸಿ.ಬ್ಯಾಂಕ್ ಏರ್ಪಡಿಸಿದದ್ದ 15 ನೇ ವರ್ಷದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು,ಹಣಕೊಟ್ಟು ಜೀವ ಪಡೆಯಲು ಆಗುವುದಿಲ್ಲ. ಆದ ಕಾರಣ ಜೀವ ಉಳಿಸುವ ರಕ್ತವನ್ನು ಸ್ವಯಂಪ್ರೇರಿತರಾಗಿ ದಾನ ಮಾಡಬೇಕು ಎಂದರು.

    ದೇಹದಲ್ಲಿ ರಕ್ತ ಕೂಡಿಟ್ಟುಕೊಂಡರೆ ಮಧುಮೇಹ, ಹೃದಯಾಘಾತ ಸೇರಿದಂತೆ ಅನೇಕ ರೋಗಗಳು ಬರುತ್ತವೆ. ಬಡ ರೋಗಿಗಳಿಗೆ, ಅವಶ್ಯಕತೆ ಇರುವವರಿಗೆ ರಕ್ತದಾನ ಮಾಡುವ ಮೂಲಕ ಅವರ ಆರೋಗ್ಯಕ್ಕೆ ನೆರವಾಗಬೇಕು, ರಕ್ತ ಮತ್ತು ಹಣ ಎರಡೂ ಸಮಾಜದಲ್ಲಿ ಸಮಪ್ರಮಾಣದಲ್ಲಿ‌ ಬಳಕೆಯಾಗಬೇಕು. ಆಗ ಮಾತ್ರ ನಮ್ಮ ಸಮಾಜ ಆರೋಗ್ಯವಾಗಿರುತ್ತದೆ ಎಂದು ಹೇಳಿದರು.
    ಬ್ಯಾಂಕಿನವರು ಸಹ ಹಣವನ್ನು ಕೂಡಿಟ್ಟುಕೊಳ್ಳದೆ, ಜನರ ನಡುವೆ ಹಂಚಬೇಕು. ಹಣದ ಹರಿವು ಹೆಚ್ಚಾದಷ್ಟು ಲಾಭ, ಇಲ್ಲದಿದ್ದರೆ ತೊಂದರೆಗಳು ಬರುತ್ತವೆ ಎಂದರು.

    ರಾಜ್ಯದ 2 ಸಾವಿರ ಗ್ರಾಮೀಣ ಶಾಲೆಗಳನ್ನ ಸಿಎಸ್ಆರ್ ಅನುದಾನದ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುವುದು. ಈ ಬಗ್ಗೆ ಖಾಸಗಿ ಕಂಪೆನಿಗಳ ಆಡಳಿತ ಮಂಡಳಿಗಳ‌ ಜೊತೆ ಮಾತುಕತೆ ಸಡೆಸಲಾಗಿದೆ.ಕರ್ನಾಟಕದ ಶಾಲೆಗಳಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. ಈಗಾಗಲೆ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಮಾತುಕತೆ ನಡೆಸಿ ಗ್ರಾಮೀಣ ಭಾಗದ ಒಂದೊಂದು ಶಾಲೆಗಳ ನಿರ್ವಹಣೆ ಮಾಡುವುದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ವಿವರಿಸಿದರು.
    ಸರ್ಕಾರದಿಂದ ಒಂದು ಸಮಿತಿ ರಚನೆ ಮಾಡಿ ಕಾರ್ಪೊರೇಟ್ ವಲಯದಿಂದ 2 ಸಾವಿರ ಶಾಲೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಯೋಜನೆ ರೂಪಿಸಲಾಗಿದೆ‌. ಕಂಪೆನಿಗಳು ಅವರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಶಾಲೆಗಳ ಉಸ್ತುವಾರಿ ನೋಡಿಕೊಳ್ಳಬಹುದು. ಸರ್ಕಾರ ಸಮಾಜಮುಖಿ ಕೆಲಸಗಳಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ನೀವು ಆಯ್ಕೆ ಮಾಡಿಕೊಂಡ ಶಾಲೆಗಳ ಮುಂದೆ ಎಚ್.ಡಿ.ಎಫ್. ಸಿ. ಬ್ಯಾಂಕ್ ಅಭಿವೃದ್ದಿ ಪಡಿಸಿದ ಶಾಲೆ ಎಂದು ಹೆಸರಿಸಿಕೊಳ್ಳಬಹುದು. ಈ ಕಾರ್ಯಕ್ರಮವನ್ನು ತೆಲಂಗಾಣದ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೂ‌ ಉಲ್ಲೇಖಿಸಲಾಗಿದೆ ಎಂದು ವಿವರಿಸಿದರು.

    ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಿಎಸ್ಆರ್ ಅನುದಾನ ಬಳಸಿ ಎಂದು ಕರೆ‌ ನೀಡಿದಾಗ ಎಚ್ಡಿಎಫ್ಸಿ ಬ್ಯಾಂಕ್ ಮುಂದೆ ಬಂತು. ಇದು‌ ಕರ್ನಾಟಕದ ಮತ್ತು ಕಾಂಗ್ರೆಸ್ ಸರ್ಕಾರದ ಅತ್ಯಮೂಲ್ಯವಾದ ಯೋಜನೆ. ಗ್ರಾಮೀಣ ಪ್ರದೇಶದ ಜನರು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ‌ ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಬೇಕು. ನಗರ ಪ್ರದೇಶದ ಮೇಲಿನ ಒತ್ತಡ ಕಡಿಮೆ ಮಾಡಬೇಕು. ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

     

    LATEST KANNADA NEWS

    ಪೊಲೀಸರಿಗೆ ಕೊಟ್ಟ ದೂರನ್ನೇ ಬದಲಾಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | Lakshmi Hebbalkar

    Verbattle
    Verbattle
    Verbattle
    #kannada art dk shivakumar kannada news Karnataka m mi News Politics shiva Trending Varthachakra ಆರೋಗ್ಯ ಕಾಂಗ್ರೆಸ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress
    Next Article ಪೊಲೀಸರಿಗೆ ಮಾನವ ಹಕ್ಕು ಆಯೋಗದ ಶಾಕ್ | Human Rights
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreymaf on ಕೆಲಸ ಆರಂಭಿಸಿದ ಟಿ.ಬಿ.ಜಯಚಂದ್ರ | TB Jayachandra
    • Daviddek on ಯಾರೇ.. ಕೂಗಾಡಲಿ…
    • Daviddek on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.