Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂದಿನ ವರ್ಷ ಪೀಣ್ಯ Fly over ನಲ್ಲಿ ಭಾರಿ ವಾಹನ ಸಂಚಾರ | Peenya Flyover
    Bengaluru

    ಮುಂದಿನ ವರ್ಷ ಪೀಣ್ಯ Fly over ನಲ್ಲಿ ಭಾರಿ ವಾಹನ ಸಂಚಾರ | Peenya Flyover

    vartha chakraBy vartha chakraJuly 25, 2023Updated:July 25, 202330 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.23- ನಗರವನ್ನು ಹಲವು ಜಿಲ್ಲೆಗಳೊಂದಿಗೆ ಬೆಸೆಯುವ ಪೀಣ್ಯ ಫ್ಲೈ ಓವರ್‌ (Peenya Flyover) (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ನಲ್ಲಿ ಕೇಬಲ್ ಅಳವಡಿಕೆ ಕಾರ್ಯ ಆರಂಭವಾಗಿದ್ದು,ಭಾರೀ ವಾಹನಗಳ ಸಂಚಾರ ಇನ್ನೂ 6 ತಿಂಗಳು ವಿಳಂಬವಾಗಲಿದೆ.
    ಕಾಮಗಾರಿ ಡಿಸೆಂಬರ್ ಕೊನೆಯವರೆಗೆ ಮುಂದುವರೆಯಲಿದ್ದು ಆನಂತರ ಪರೀಕ್ಷಾರ್ಥ ಸಂಚಾರ ನಡೆಸಿ ಬಳಿಕವೇ ಬಸ್‌, ಟ್ರಕ್‌ ಇನ್ನಿತರ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಿದ್ದು ಇದರಿಂದ ಮುಂದಿನ ವರ್ಷದ ಜನವರಿಯಲ್ಲಿ ಭಾರೀ ವಾಹನಗಳ ಸಂಚಾರವು ಆರಂಭಗೊಳ್ಳಲಿದೆ.

    ಫ್ಲೈ ಓವರ್‌ ಸದೃಢತೆ ಹಾಗೂ ವಾಹನ ಸಂಚಾರ ಕುರಿತು ತೀರ್ಮಾನ ಕೈಗೊಳ್ಳಲು ನೇಮಿಸಿರುವ ಪರಿಣಿತರ ಸಮಿತಿ ಸದಸ್ಯರು ಪಾಲ್ಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.
    ಬೆಂಗಳೂರು-ತುಮಕೂರು ಫ್ಲೈಓವರ್ ಭಾರೀ ಗಾತ್ರದ ವಾಹನಗಳಿಗೆ ಮುಂದಿನ ವರ್ಷವೇ ಮುಕ್ತವಾಗಲಿದೆ. ಕೇಬಲ್ ಅಳವಡಿಕೆ ಕಾರ್ಯ ಆರಂಭ ಆಗಿದ್ದು,ಪೂರ್ಣ ಗೊಳ್ಳಲು ಇನ್ನೂ ಐದಾರು ತಿಂಗಳು ಬೇಕಾಗಬಹುದು.
    ಬೆಂಗಳೂರು- ತುಮಕೂರು ಫ್ಲೈಓವರ್‍ನಲ್ಲಿ ಭಾರೀ ವಾಹನಗಳ ಓಡಾಟಕ್ಕೆ ಪ್ರವೇಶ ನಿರ್ಬಂಧ ಮುಂದುವರಿಯಲಿದ್ದು, ಮುಂದಿನ ವರ್ಷ ಜನವರಿಗೆ ಮುಕ್ತವಾಗುವ ಸಾಧ್ಯತೆಗಳಿವೆ. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ನ ತಾಂತ್ರಿಕ ತಜ್ಞರ ತಂಡದ ಶಿಫಾರಸ್ಸಿನ ಮೇರೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ವ್ಯಾಪ್ತಿಯಲ್ಲಿರುವ ಹಳೆಯ ಕೇಬಲ್‍ಗಳನ್ನು ಹೊಸ ಪ್ರಿಸ್ಟ್ರೇಸ್ಡ್ ಕೇಬಲ್‍ಗಳೊಂದಿಗೆ ಬದಲಾಯಿಸಲು ಪ್ರಾರಂಭಿಸಿದೆ.
    ಆದರೆ ಕಾಮಗಾರಿ ಮುಗಿಯಲು ಇನ್ನೂ 5-6 ತಿಂಗಳು ಬೇಕಾಗಬಹುದು. 4 ಕಿ.ಮೀ ಉದ್ದದ ಮೇಲ್ಸೇತುವೆಯ ಉದ್ದಕ್ಕೂ ಹಳೆಯ ಕೇಬಲ್‍ಗಳು ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ನಡೆಸಲು 30 ಕೋಟಿ ವೆಚ್ಚ ತಗುಲಬಹುದೆಂದು ಅಂದಾಜಿಸಲಾಗಿದೆ.

    ಕೇಬಲ್ ಅಳವಡಿಕೆ ಕಾರ್ಯ ಕಳೆದ 4-5 ತಿಂಗಳಿನಿಂದ ನಡೆದರೂ ಕಾಮಗಾರಿ ಪ್ರಾಪರ್ ಆಗಿ ನಡೆದಿಲ್ಲ. ಹಳೆಯ ಕೇಬಲ್‍ಗಳಿಗೆ ಅತ್ಯಾಧುನಿಕ ಕೇಬಲ್ ಅಳವಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
    ಈ ಮೇಲ್ಸೇತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಈ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು 2021ರ ಡಿಸೆಂಬರ್ 25ರಿಂದ ನಿರ್ಬಂಧಿಸಲಾಗಿದೆ.
    ಕೇಬಲ್ ಸಮಸ್ಯೆ ಬಗ್ಗೆ ತಜ್ಞರ ಪ್ರಕಾರ, ಒಂದು ಕಂಬದಿಂದ ಇನ್ನೊಂದು ಕಂಬದ ನಡುವೆ ಜೋಡಿಸುವ ಸೆಗ್ಮೆಂಟ್‍ನಲ್ಲಿ ರಂದ್ರ ಕೊರೆದು ಕೇಬಲ್ ತೂರಿಸಿ ಎಳೆದು ಬೋಲ್ಟ್ ಹಾಕಲಾಗುತ್ತದೆ. ಕೇಬಲ್‍ಗಳನ್ನು ಎಳೆದು ಕಟ್ಟಿದ ಜಾಗವನ್ನು ಕಾಂಕ್ರೀಟ್‍ನಿಂದ ತುಂಬಿ ಗಟ್ಟಿಗೊಳಿಸಲಾಗುತ್ತದೆ. ತುಮಕೂರು ರಸ್ತೆ ಮೇಲ್ಸೇತುವೆಯಲ್ಲಿ ಅಳವಡಿಸಿದ ನಾಲ್ಕೈದು ಕೇಬಲ್‍ಗಳಲ್ಲಿ ಕೆಲವು ಶಿಥಿಲವಾಗಿರುವ ಸಾಧ್ಯತೆ ಇದೆ
    ರಾಜ್ಯದ ಅರ್ಧ ಜಿಲ್ಲೆಗಳು, ಹೊರ ರಾಜ್ಯಗಳಿಗೆ ಇದೇ ಫ್ಲೈಓವರ್ ಮೂಲಕವಾಗಿಯೇ ಭಾರೀ ಗಾತ್ರದ ವಾಹನಗಳು ಸಂಚರಿಸಬೇಕು. ಆದರೆ ಪೀಕ್ ಹವರ್ ನಲ್ಲಿ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಗಾತ್ರದ ವಾಹನ ಸವಾರರು ನಿತ್ಯ ಪರದಾಡುತ್ತಿದ್ದು, ಈ ಪರದಾಟ ಮುಂದಿನ ವರ್ಷದ ತನಕವೂ ಇರಲಿದೆ.

    Verbattle
    Verbattle
    Verbattle
    #bangalore Bengaluru Peenya Flyover ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಶೋಭಾ, ಬೊಮ್ಮಾಯಿ, ಮಲ್ಕಾಪುರೆ ಗೆ ಬಂಪರ್ | BJP Karnataka
    Next Article ಶುರುವಾಯಿತು ರಾಜ್ಯಪಾಲರು ಮತ್ತು ಸರ್ಕಾರದ ಸಂಘರ್ಷ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reklamnii kreativ_mvOi on ಕುಂಭಮೇಳದಲ್ಲಿ ಕಿನ್ನರ ಕಲರವ
    • Daviddek on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Daviddek on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.