Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath
    Trending

    ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath

    vartha chakraBy vartha chakraJanuary 15, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಜ,15: ಜಾತ್ಯತೀತ ಜನತಾದಳದ ಭದ್ರಕೋಟೆ ಎನಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಈ ಬಾರಿ ಕುತೂಹಲ ಕೆರಳಿಸಿದೆ.
    ಜೆಡಿಎಸ್ ಹೊಸ ಉತ್ಸಾಹದೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮುಂದಡಿ ಇಟ್ಟಿದೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡ ಹಾಸನ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಿದ್ದಾರೆ.
    ಆದರೆ ಪ್ರಜ್ವಲ್ ರೇವಣ್ಣ ವಿರುದ್ಧ ಆಡಳಿತ ವಿರೋಧಿ ಅಲೆಯ ಜೊತೆಗೆ ಜಾತ್ಯಾತೀತ ಜನತಾದಳ ಕಾರ್ಯಕರ್ತರೇ ತೀವ್ರ ಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಾಲಿ ಶಾಸಕರು ಕೂಡ ಪ್ರಜ್ವಲ್ ಅವರ ಸ್ಪರ್ಧೆಗೆ ಒಲ್ಲದ ಮನಸ್ಸಿನಿಂದ ಸಮ್ಮತಿ ನೀಡಿದ್ದಾರೆ.

    ಇನ್ನು ಬಿಜೆಪಿ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಅವರನ್ನು ಅಭ್ಯರ್ಥಿಯಾಗಿ ಒಪ್ಪಿಕೊಳ್ಳಲು ಕಷ್ಟ ಪಡುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಹಾಸನದಿಂದ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಸ್ಪರ್ಧೆ ಮಾಡಿದರೆ ಅವರ ಗೆಲುವು ಕಠಿಣವಾಗಲಿದೆ ಎಂಬ ವರದಿಗಳಿವೆ.
    ಇದರ ಜೊತೆಗೆ, ಜೆಡಿಎಸ್ ಮತ್ತು ಬಿಜೆಪಿ ಪ್ರತ್ಯೇಕವಾಗಿ ಸಮೀಕ್ಷೆ ನಡೆಸಿದ್ದು ಎಲ್ಲದರಲ್ಲೂ ಪ್ರಜ್ವಲ್ ರೇವಣ್ಣ ಬರುತ್ತವೆ ವರದಿಗಳು ಬಂದಿದೆ ಹೀಗಾಗಿ ಬಿಜೆಪಿ ನಾಯಕರು ಇದೀಗ ಹಾಸನ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಜನತಾದಳದ ನಾಯಕರ ಮೇಲೆ ಒತ್ತಡ ಹೇರ ತೊಡಗಿದ್ದಾರೆ.

    ಹಾಲಿ ಸಂಸದ ಪ್ರಜ್ಬಲ್ ರೇವಣ್ಣ ಸ್ಪರ್ಧೆಗೆ ಜೆಡಿಎಸ್ ಹಿರಿಯ ನಾಯಕರಿಂದಲೂ ಅಪಸ್ವರ ವ್ಯಕ್ತವಾಗಿದೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದು, ದೇವೇಗೌಡರೇ ಸ್ಪರ್ಧೆ ಮಾಡಲಿ ಅನ್ನೋದು ಹಾಸನ ನಾಯಕರ ಒತ್ತಡ. ವಯಸ್ಸು ಮತ್ತು ಆರೋಗ್ಯದ ದೃಷ್ಠಿಯಿಂದ ದೇವೇಗೌಡರು ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ.
    ಹೀಗಾಗಿ ಜೆಡಿಎಸ್ ಪಾಳಯದಲ್ಲಿ ಪರ್ಯಾಯ ನಾಯಕನಿಗಾಗಿ ಹುಡುಕಾಟ ಆರಂಭವಾಗಿದೆ.
    ಇದರ ಬೆನ್ನಲ್ಲೇ ಬಿಜೆಪಿಯ ಕೆಲ ನಾಯಕರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಸಂಪರ್ಕಿಸಿ ಹಾಸನ ಲೋಕಸಭಾ ಕ್ಷೇತ್ರ ತಮ್ಮ ಕುಟುಂಬದ ಭದ್ರಕೋಟೆಯಾಗಿದೆ ಹೀಗಾಗಿ ತಮ್ಮ ಕುಟುಂಬಕ್ಕೆ ಸೇರಿದವರೇ ಇಲ್ಲಿಂದ ಸ್ಪರ್ಧೆ ಮಾಡುವುದು ಸೂಕ್ತ.

    ಈ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ನಿವೃತ್ತರಾಗುತ್ತಿರುವ ಡಾ. ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವಂತೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
    ಕೇಂದ್ರದಲ್ಲಿ ಎನ್ ಡಿಎ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತ ಆಗೊಂದು ವೇಳೆ ಸರ್ಕಾರ ರಚನೆಯಾದಲ್ಲಿ ಡಾ. ಮಂಜುನಾಥ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗಲಿದೆ ವೈದ್ಯರಾಗಿ ಹಾಗೂ ಆಡಳಿತ ನಿಪುಣರಾಗಿ ಕೂಡ ಉತ್ತಮ ಸಾಧನೆ ಮಾಡಿರುವ ಡಾಕ್ಟರ್ ಮಂಜುನಾಥ್ ಅವರ ಸೇವೆಯನ್ನು ಬಿಜೆಪಿ ಸೂಕ್ತವಾಗಿ ಬಳಸಿಕೊಳ್ಳಲಿದೆ.
    ಈ ಹಿನ್ನೆಲೆಯಲ್ಲಿ ಅವರನ್ನು ಲೋಕಸಭಾ ಚುನಾವಣೆಯ ಕಣಕ್ಕಿಳಿಸಬೇಕು ಎಂದು ಆಗ್ರಹ ಮಾಡತೊಡಗಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

    ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿರುವ ಡಾ. ಮಂಜುನಾಥ್ ಅವರ ಆಡಳಿತ ಅವಧಿ ಪೂರ್ಣಗೊಂಡಿದ್ದು ಅವರ ಸೇವೆಯನ್ನು ವಿಸ್ತರಣೆ ಮಾಡುವ ಯಾವುದೇ ಲಕ್ಷಣಗಳು ಸರ್ಕಾರದ ಮಟ್ಟದಲ್ಲಿ ಕಾಣುತ್ತಿಲ್ಲ . ನೂತನ ನಿರ್ದೇಶಕರ ಆಯ್ಕೆಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಿದ್ದು ಆಯ್ಕೆ ಸಮಿತಿ ಕೂಡ ರಚನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಮಂಜುನಾಥ್ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತಂದು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದರೆ ಜೆಡಿಎಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳಲಿದೆ.
    ಹಾಗೆಯೇ ಕೇಂದ್ರ ಸಂಪುಟದಲ್ಲೂ ಕೂಡ ಸ್ಥಾನ ಪಡೆದುಕೊಳ್ಳಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ವಿಷಯದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ನಿರ್ಧಾರಕ್ಕೆ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Dr Manjunath Government Karnataka m Manju News Politics Trending Varthachakra ಆರೋಗ್ಯ Election ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಡೆನ್ಮಾರ್ಕ್ ದೇಶಕ್ಕೊಬ್ಬ ಹೊಸ ರಾಜ | Denmark
    Next Article ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Kmpgok on February 13, 2026 11:35 am

      betmgm Ohio betmgm WA betmgm MT

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • LeonardReawn on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • LarryCax on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.