Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭರ್ಜರಿ ಬೇಟೆ
    ಸುದ್ದಿ

    ಭರ್ಜರಿ ಬೇಟೆ

    vartha chakraBy vartha chakraSeptember 13, 2022Updated:September 13, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.13- ಮಾದಕವಸ್ತು ಮಾರಾಟ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ರೈಲಿನ ಮೂಲಕ ಗಾಂಜಾ ಕಳ್ಳ ಸಾಗಾಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿ 5 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
    ಕೆಂಪೇಗೌಡ ನಗರ ಪೊಲೀಸರು ಮಹಿಳೆ ಸೇರಿ ಐವರು ಆರೋಪಿಗಳನ್ನು ಬಂಧಿಸಿ 2 ಕೋಟಿ ಮೌಲ್ಯದ 506 ಕೆಜಿ ಗಾಂಜಾ ವಶಪಡಿಸಿಕೊಂಡರೆ, ಜಯನಗರ ಪೊಲೀಸರು 3 ಕೋಟಿ ರೂ. ಮೌಲ್ಯದ 50 ಕೆಜಿ ಗಾಂಜಾ, 6 ಕೆಜಿ ಆಶಿಶ್ ಆಯಿಲ್‍ನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್‍ರೆಡ್ಡಿ ಅವರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಕೆಂಪೇಗೌಡ ನಗರ ಪೊಲೀಸರು ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ನವಾಜ್‍ಪಾಶ, ನೂರ್ ಅಹ್ಮದ್, ಶ್ರೀಮತಿ ಮುಬಾರಕ್, ಇಮ್ರಾನ್‍ಪಾಷ, ಕಿರಣ್ ಅಲಿಯಾಸ್ ಬಂಗಾರಪ್ಪನನ್ನು ಬಂಧಿಸಿದ್ದಾರೆ.
    ಬಂಧಿತ ಆರೋಪಿಗಳು ಕೆಂಪಾಂಬುದಿ ಕೆರೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಕೆಂಪೇಗೌಡ ನಗರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆರೋಪಿಗಳು ಒರಿಸ್ಸಾದ ಮಲ್ಕಾನ್‍ಗಿರಿಯಿಂದ ಗಾಂಜಾವನ್ನು ಕಳ್ಳಸಾಗಾಣಿಕೆ ಮಾಡಿಕೊಂಡು ಬಂದು ಕೆಂಗೇರಿಯ ಮನೆಯೊಂದರಲ್ಲಿ ಶೇಖರಿಸಿಟ್ಟಿದ್ದರು.
    ಮನೆಯ ಮೇಲೆ ದಾಳಿ ನಡೆಸಿ 500 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಆರೋಪಿಗಳು 10 ರಿಂದ 25 ಕೆಜಿ ತೂಕದ ಲಗೇಜ್ ಬ್ಯಾಗ್‍ನಲ್ಲಿ ಗಾಂಜಾವನ್ನು ಸುಗಂದದ್ರವ್ಯ ಬಳಸಿ, ವಾಸನೆ ಗೊತ್ತಾಗದಂತೆ ತುಂಬಿಕೊಂಡು ರೈಲಿನ ಸೀಟುಗಳಡಿ ಇಟ್ಟುಕೊಂಡು ಸಾಗಾಣೆ ಮಾಡುತ್ತಿದ್ದರು.
    ಬಂಧಿತ ಆರೋಪಿಗಳು ಹಲವು ದಿನಗಳಿಂದ ಗಾಂಜಾವನ್ನು ಭುವನೇಶ್ವರದಿಂದ ಕಳ್ಳಸಾಗಾಣಿಕೆ ಮಾಡಿಕೊಂಡು ಬಂದು ಮಾರಾಟ ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ ಎಂದು ಹೇಳಿದರು.
    ಜಯನಗರ ಪೊಲೀಸರು ಅಶೀಶ್ ಅಯಿಲ ಹಾಗೂ ಗಾಂಜಾ ಮಾರಾಟಮಾಡುತ್ತಿದ್ದ ನಯಾಜ್‍ಪಾಷ, ಸಾಗರ್‍ತಾಹೊ ಹಾಗೂ ಶೇಷಗಿರಿ ಸೇರಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 20 ಲಕ್ಷ ಮೌಲ್ಯದ 50 ಕೆಜಿ ಗಾಂಜಾ, 2.80 ಲಕ್ಷ ಮೌಲ್ಯದ 6 ಕೆಜಿ ಆಶಿಶ್ ಆಯಿಲ್‍ನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
    ಗಾಂಜಾ ಪ್ರಕರಣದಲ್ಲಿ ಹಿಂದೆ ಬಂಧಿತನಾಗಿದ್ದ ಆರೋಪಿ ನಯಾಜ್‍ಪಾಷ ನೀಡಿದ ಮಾಹಿತಿಯಾಧರಿಸಿ ಆಂಧ್ರಪ್ರದೇಶದ ಶ್ರೀಕಾಕೊಳಂಗೆ ತೆರಳಿದ್ದ ಜಯನಗರ ಮಂಜುನಾತ್ ಅವರ ತಂಡ ಇನ್ನಿಬ್ಬರನ್ನು ಬಂಧಿಸಿ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿಸಿದರು.
    ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರ ನೇತೃತ್ವದಲ್ಲಿ ಜಯನಗರ ಹಾಗೂ ಕೆಂಪೇಗೌಡ ನಗರ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ಕೈಗೊಂಡು ಬೃಹತ್ ಪ್ರಮಾಣದ ಮಾದಕವಸ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
    ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್‍ಪಾಟೀಲ್, ಡಿಸಿಪಿ ಕೃಷ್ಣಕಾಂತ್ ಅವರಿದ್ದರು

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
    Next Article ಅಜ್ಜಿ ತನ್ನ ಗಂಡನ ವಿರುದ್ಧ ಕೊಟ್ಟ ದೂರು ಎನು ಗೊತ್ತಾ?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Atyjfy on ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    • LinwoodGah on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.