ಬೆಂಗಳೂರು,ಮಾ.9- ಮುಂಬರುವ ವಿಧಾನಸಭೆ Electionಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆಯಲ್ಲಿ ತೊಡಗಿರುವ ಬೆನ್ನಲ್ಲೇ ಚುನಾವಣಾ ಆಯೋಗ
ರಾಜ್ಯದಲ್ಲಿ ಯಾವಾಗ ಚುನಾವಣೆಗಳನ್ನು ನಡೆಸಬೇಕು, ಚುನಾವಣೆಗೆ ಯಾವ ದಿನಾಂಕ ಸೂಕ್ತ ಎಂಬ ಬಗ್ಗೆ ಪರಿಶೀಲನೆ ಆರಂಭಿಸಿದೆ.
ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರನ್ನೊಳಗೊಂಡ ತಂಡ ಕರ್ನಾಟಕಕ್ಕೆ ಭೇಟಿ ನೀಡಿದ್ದು ಮೂರು ದಿನಗಳ ಕಾಲ ಸಭೆ ನಡೆಸಲಿದೆ.
ರಾಜಧಾನಿ ತಲುಪಿದ ತಂಡವು ಇಂದು ವಿಕಾಸ ಸೌಧದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿತು.ನಂತರ
ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರ ಸಲಹೆ, ಅಭಿಪ್ರಾಯ ಮತ್ತು ದೂರುಗಳನ್ನು ಸ್ವೀಕರಿಸಿತು.
ಈ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸುಗಮ ಚುನಾವಣೆ ದೃಷ್ಟಿಯಿಂದ ಎರಡು ಹಂತದಲ್ಲಿ ಚುನಾವಣೆ ನಡೆಸುವ ಅಭಿಪ್ರಾಯ ವ್ಯಕ್ತವಾಗಿದೆ. ಅಲ್ಲದೆ ಚುನಾವಣೆ ವೇಳಾಪಟ್ಟಿ ಪ್ರಕಟಣೆಗೂ ಮುನ್ನ ಸಂಭವನೀಯ ಅಭ್ಯರ್ಥಿಗಳು ಮತದಾರರಿಗೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ.
ನಾಳೆ ಈ ತಂಡವು ಎಲ್ಲರನ್ನು ‘ಒಳಗೊಳ್ಳುವ ಚುನಾವಣೆಗಳು ಮತ್ತು ಚುನಾವಣಾ ಸಮಗ್ರತೆ’ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿದೆ. ಇದರಲ್ಲಿ ವಿವಿಧ ಪ್ರಜಾಪ್ರಭುತ್ವ ರಾಷ್ಟ್ರಗಳ ಚುನಾವಣಾ ಆಯುಕ್ತರು ಭಾಗವಹಿಸಲಿದ್ದಾರೆ.
ಇದಾದ ನಂತರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಚುನಾವಣೆಯ ತಯಾರಿ ಕುರಿತು ವೀಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದೆ ಶನಿವಾರ ಮತದಾರರ ಜಾಗೃತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸುದ್ದಿಗೋಷ್ಠಿ ನಡೆಸಿ ನಂತರ ಈ ತಂಡ ದೆಹಲಿಗೆ ವಾಪಸ್ಸಾಗಲಿದೆ.
6 Comments
generic clomid without prescription clomiphene for sale uk buy cheap clomiphene without prescription clomiphene price walmart how to get cheap clomiphene clomiphene pills at dischem price can you get generic clomiphene without insurance
Greetings! Utter gainful suggestion within this article! It’s the little changes which choice espy the largest changes. Thanks a portion in the direction of sharing!
The depth in this serving is exceptional.
buy inderal 20mg – generic clopidogrel 75mg methotrexate 10mg pill
where to buy zithromax without a prescription – buy bystolic 20mg for sale order bystolic 20mg for sale
augmentin 625mg drug – https://atbioinfo.com/ buy ampicillin without a prescription