Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ Congress ಅಭ್ಯರ್ಥಿಗಳ ಪಟ್ಟಿ ಫೈನಲ್!
    ರಾಜಕೀಯ

    ಬೆಂಗಳೂರಿನ Congress ಅಭ್ಯರ್ಥಿಗಳ ಪಟ್ಟಿ ಫೈನಲ್!

    vartha chakraBy vartha chakraFebruary 14, 2023Updated:February 14, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ರಾಜ್ಯದಲ್ಲಿ ಶತಾಯ ಗತಾಯ ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕೆಂದು ಪಣ ತೊಟ್ಟಿರುವ Congress ನಾಯಕರು ಚುನಾವಣಾ ವೇಳಾಪಟ್ಟಿಯ ಪ್ರಕಟಣೆಗೂ ಮುನ್ನವೇ ಅಭ್ಯರ್ಥಿಗಳ ಪಟ್ಟಿಯನ್ನು (candidates list)  ಪ್ರಕಟಿಸುವ ಮೂಲಕ ಕೊನೆಯ ಹಂತದ ಭಿನ್ನಮತಕ್ಕೆ ಕಡಿವಾಣ ಹಾಕಲು ತೀರ್ಮಾನಿಸಿದ್ದಾರೆ.

    ಈ ನಿಟ್ಟಿನಲ್ಲಿ 28‌ ಕ್ಷೇತ್ರಗಳಿರುವ ಬೆಂಗಳೂರಿನಲ್ಲಿ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು, ಯಾವುದೇ ಕಾರಣಕ್ಕೂ ಹೊಂದಾಣಿಕೆ ರಾಜಕಾರಣಕ್ಕೆ ಅವಕಾಶ ನೀಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಪ್ರತಿಬಾರಿ ಬೆಂಗಳೂರಿನಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತದೆ ಎಂಬ ವರದಿಗಳಿವೆ, ಹೀಗಾಗಿ ಇದಕ್ಕೆ ಆಸ್ಪದ ನೀಡದಂತೆ ಕೆಲಸ ಮಾಡಬೇಕೆಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೂಚಿಸಿದ್ದಾರೆಂದು ಗೊತ್ತಾಗಿದೆ.

    ಈ ಹೊಂದಾಣಿಕೆಗೆ ಕಡಿವಾಣ ಹಾಕುವ ದೃಷ್ಟಿಯಿಂದ ಈಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಣೆ ಮಾಡುವ ಮೂಲಕ ಸಮರ್ಥವಾಗಿ ಎದಿರೇಟು ನೀಡಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗದ ಉಸ್ತುವಾರಿ ಹೊಂದಿರುವ AICC ಕಾರ್ಯದರ್ಶಿ ಅಭಿಷೇಕ್‌ ದತ್ತ (Abhishek Dutt), ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ (Randeep Singh Surjewala) ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿದ್ದಾರೆ.

    ಮಹಾಲಕ್ಷ್ಮಿ ಲೇಔಟ್ (Mahalakshmi Layout), ಯಶವಂತಪುರ (Yesvantpur) ಮತ್ತು ಯಲಹಂಕ (Yelahanka) ಕ್ಷೇತ್ರದ ಆಯ್ಕೆ ಮಾತ್ರ ಬಾಕಿಯಿದ್ದು ಅದನ್ನೂ ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಿದ್ದಾರೆಂದು ಗೊತ್ತಾಗಿದೆ.

    ಗಾಂಧಿನಗರ – ದಿನೇಶ್ ಗುಂಡೂರಾವ್, ಹೆಬ್ಬಾಳ – ಬೈರತಿ ಸುರೇಶ್‌, ಬಿಟಿಎಂ ಲೇಔಟ್‌ – ರಾಮಲಿಂಗಾರೆಡ್ಡಿ, ಜಯ ನಗರ – ಸೌಮ್ಯಾರೆಡ್ಡಿ, ಶಿವಾಜಿ ನಗರ – ರಿಜ್ವಾನ್‌ ಅರ್ಷದ್‌, ಪುಲಕೇಶಿನಗರ – ಅಖಂಡ ಶ್ರೀನಿವಾಸಮೂರ್ತಿ, ಸರ್ವಜ್ಞನಗರ – ಕೆ.ಜೆ. ಜಾರ್ಜ್‌, ಶಾಂತಿನಗರ – ಎನ್‌.ಎ. ಹ್ಯಾರೀಸ್‌, ಚಾಮರಾಜ ಪೇಟೆ -ಜಮೀರ್‌ ಅಹ್ಮದ್, ಬ್ಯಾಟರಾಯನಪುರ -ಕೃಷ್ಣ ಬೈರೇಗೌಡ, ವಿಜಯ ನಗರ -ಎಂ. ಕೃಷ್ಣಪ್ಪ, ಆನೇಕಲ್‌ -ಬಿ. ಶಿವಣ್ಣ, ವಿಜಯನಗರ – ಎಂ.ಕೃಷ್ಣಪ್ಪ, ಹಾಲಿ ಶಾಸಕರಾಗಿದ್ದು ಅವರಿಗೇ ಟಿಕೆಟ್ ಖಚಿತ ವಾಗಿದೆ.

    ಇನ್ನು‌ ಕಳೆದ Electionಯಲ್ಲಿ ಕಡಿಮೆ‌ ಅಂತರದಿಂದ ಸೋತಿದ್ದವರಿಗೂ ಟಿಕೆಟ್ ಖಾಯಂ ಆಗಿದ್ದು ಗೋವಿಂದರಾಜ ನಗರ – ಪ್ರಿಯಾಕೃಷ್ಣ, ಆರ್‌.ಆರ್‌. ನಗರ – ಕುಸುಮಾ ಎಚ್‌, ಮಹಾದೇವಪುರ – ಎಚ್.ನಾಗೇಶ್, ಚಿಕ್ಕಪೇಟೆ – ಆರ್.ವಿ.ದೇವರಾಜ್,  ಗಂಗಾಂಬಿಕೆ ಮಲ್ಲಿಕಾರ್ಜುನ, ಮಲ್ಲೇಶ್ವರಂ – ಅನೂಪ್ ಅಯ್ಯಂಗಾರ್, ರಶ್ಮಿ ರವಿಕಿರಣ್‌, ರಾಜಾಜಿನಗರ – ರಘುವೀರ್‌ ಎಸ್‌. ಗೌಡ, ಜಿ. ಪದ್ಮಾವತಿ, ಕೆ.ಆರ್‌.ಪುರ – ಎಂ.ನಾರಾಯಣಸ್ವಾಮಿ, ಡಿ.ಕೆ. ಮೋಹನ್‌, ಸಿ.ವಿ. ರಾಮನ್‌ ನಗರ – ಆನಂದ್‌ಕುಮಾರ್‌, ಸಂಪತ್‌ರಾಜ್‌, ದಾಸರಹಳ್ಳಿ- ಧನಂಜಯ, ಎಚ್‌.ಎಂ. ರೇವಣ್ಣ, ನಾಗಲಕ್ಷ್ಮಿ ಚೌಧರಿ, ಪದ್ಮನಾಭನಗರ – ರಘುನಾಥ ನಾಯ್ಡು, ಗುರುವಪ್ಪ ನಾಯ್ಡು, ಬೊಮ್ಮನಹಳ್ಳಿ – ಉಮಾಪತಿ ಶ್ರೀನಿವಾಸಗೌಡ ಮತ್ತು ಕವಿತಾ ರೆಡ್ಡಿ ಅವರುಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಕೆಲವು ಕ್ಷೇತ್ರಗಳಿಗೆ ಇಬ್ಬರ ಹೆಸರು ಗಳನ್ನು ಅಂತಿಮಗೊಳಿಸಿದ್ದು, ಈ ಬಗ್ಗೆ ಖರ್ಗೆ ಅವರೊಂದಿಗೆ KPCC ಅಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರು ಸಭೆ ನಡೆಸಿ ಒಂದು ಹೆಸರು ಅಂತಿಮಗೊಳಿಸಲಿದ್ದಾರೆಂದು ಗೊತ್ತಾಗಿದೆ.

    #Congress AICC Bangalore candidates list Congress Elections 2023 Government KPCC m Mahalakshmi Layout Mallikarjun Kharge mi Politics yelahanka ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous ArticleChe Guevara , ಸಮಾನತೆಯ ಕನಸು ಕಂಡ ಕ್ರಾಂತಿಕಾರಿ
    Next Article Real ಪೊಲೀಸ್ ಗೆ ಸಿಕ್ಕಿಬಿದ್ದ Fake ಪೊಲೀಸ್
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • can i order cheap pioglitazone on ಕುಂಭಮೇಳದಲ್ಲಿ ಕಿನ್ನರ ಕಲರವ
    • DrapVob on Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?
    • https://cs.Transy.edu on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe