Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲೆಟ್ ಕಳೆಕೊಂಡಿದ್ದರಿಂದ ಏನಾಯ್ತು ಗೊತ್ತಾ | Spicejet
    ಸುದ್ದಿ

    ವಾಲೆಟ್ ಕಳೆಕೊಂಡಿದ್ದರಿಂದ ಏನಾಯ್ತು ಗೊತ್ತಾ | Spicejet

    vartha chakraBy vartha chakraDecember 28, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.28- ಸ್ಪೈಸ್‌ಜೆಟ್‌ ವಿಮಾನದಲ್ಲಿ (Spicejet) ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ತಮ್ಮ ವಾಲೆಟ್ ಕಳೆದುಕೊಂಡಿದ್ದರು.
    ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ಕರೆ ಮಾಡಿ ದೂರು ನೀಡಲು ಮುಂದಾದರು. ಆದರೆ ಕಾಲ್ ಸೆಂಟರ್ ಸಿಬ್ಬಂದಿ ಇವರ ಕರೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಇದರಿಂದ ಆಕ್ರೋಶಗೊಂಡ ಪ್ರಯಾಣಿಕ, ತನ್ನ ವಾಲೆಟ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿ ಪೊಲೀಸ್ ವಿಚಾರಣೆಗೆ ಹಾಜರಾಗುವಂತಾದ ವಿಚಿತ್ರ ಘಟನೆ ನಡೆದಿದೆ.

    ಶ್ರೇಯಾಂಶ್ ಚಮಾರಿಯಾ ಅವರು ಕಳೆದ ಡಿಸೆಂಬರ್ 26 ರಂದು ಬೆಳಗ್ಗೆ 9.20 ಕ್ಕೆ ಎಸ್‌ಜಿ 8536 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ತಮ್ಮ ವಾಲೆಟ್ ಕಾಣೆಯಾಗಿದೆ ಎಂದು ಅರಿತ ಅವರು ಗುರುಗ್ರಾಮ್‌ನಲ್ಲಿರುವ ಸ್ಪೈಸ್‌ಜೆಟ್ ಕಾಲ್ ಸೆಂಟರ್‌ಗೆ ಬೆಳಗ್ಗೆ 10.16ಕ್ಕೆ ಕರೆ ಮಾಡಿದ್ದಾರೆ. “ಕರೆಗೆ ಉತ್ತರಿಸಿದ ವ್ಯಕ್ತಿ ಅವರಿಗೆ ಎಂದಿನಂತೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಮತ್ತು ಕಾಲ್ ಅನ್ನು ಹೊಲ್ಡ್ ಮಾಡಿದ್ದಾರೆ.
    ಕಾಲ್ ಸೆಂಟರ್ ಸಿಬ್ಬಂದಿಯ ಕಿರಿಕಿರಿಯ ಪ್ರಶ್ನೆ ಹಾಗೂ ಈತ ತನ್ನ ಕರೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ತಾಳ್ಮೆ ಕಳೆದುಕೊಂಡ ಅವರು ಈತನ ವರ್ತನೆಯಿಂದ ನನಗೆ ನನ್ನ ವಾಲೆಟ್ ಮರಳಿ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಭಾವಿಸಿ, ನನ್ನ ವಾಲೆಟ್ ಕಳೆದಿದೆ ಅಷ್ಟೇ ಅಲ್ಲ, ಅದರಲ್ಲಿ ಬಾಂಬ್ ಇದೆ ಮತ್ತು ಅದನ್ನು ತಕ್ಷಣವೇ ಪತ್ತೆ ಮಾಡುವಂತೆ ಹೇಳಿದ್ದಾರೆ.

    ಇದರಿಂದ ಆತಂಕಗೊಂಡ ಕಾಲ್ ಸೆಂಟರ್ ಸಿಬ್ಬಂದಿ ಬಾಂಬ್ ಇರುವ ಸ್ಥಳವನ್ನು ಕೇಳಿದ್ದಾರೆ, ಪ್ರಯಾಣಿಕ ಚಮಾರಿಯಾ, ಹಿಂದಿಯಲ್ಲಿ ಉತ್ತರಿಸಿ, “ನಾನು ನಿಮಗೆ ಹೇಳುವುದಿಲ್ಲ. ಅದು ಯಾವಾಗ ಬೇಕಾದಾರೂ ಸ್ಫೋಟವಾಗಬಹುದು” ಎಂದಿದ್ದಾರೆ . ತಕ್ಷಣ ಸ್ಪೈಸ್ ಜೆಟ್ ಅಧಿಕಾರಿಗಳು ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
    ಈ ನಡುವೆ, ಸ್ಪೈಸ್ ಜೆಟ್ ಸಿಬ್ಬಂದಿ ಬೆಳಗ್ಗೆ 10.59 ಕ್ಕೆ ವಿಮಾನದೊಳಗೆ ವಾಲೆಟ್ ಅನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಾಹಿತಿ ನೀಡಿದ್ದು, ಅವರು ವಿಶೇಷ ಬಾಂಬ್ ಪತ್ತೆ ತಂಡವನ್ನು ಕರೆಯಿಸಿ ಪರಿಶೀಲಿಸಿದಾಗ ಅದೊಂದು, ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ.
    ಇದಾದ ನಂತರ ವಾಲೆಟ್ ಕಳೆದುಕೊಂಡ ಪ್ರಯಾಣಿಕನನ್ನು ಸ್ಪೈಸ್‌ಜೆಟ್ ಕೌಂಟರ್ ಬಳಿ ಬರುವಂತೆ ಸೂಚಿಸಿದ್ದಾರೆ. ಅದರಂತೆ ವಾಲೆಟ್ ಪಡೆಯಲು ಬಂದ ಆತನನ್ನು ಬಂಧಿಸಿ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ

    crime Karnataka News Spicejet Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    Next Article ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.

    May 28, 2025

    1500 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು.

    May 28, 2025

    2 Comments

    1. Vivod iz zapoya v Almati _zlPn on September 17, 2024 5:13 am

      Вывод из запоя в Алматы на дому Вывод из запоя в Алматы на дому .

      Reply
    2. Biznes idei_gyOl on September 18, 2024 1:11 pm

      бизнес идея бизнес идея .

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vfunwlzko on ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • https://femaleinvestorsmagazine.com/inscription-betclic-comment-ouvrir-votre-compte-51/ on ಕುಂಭಮೇಳದಲ್ಲಿ ಕಿನ್ನರ ಕಲರವ
    • ngggalsvs on ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe