Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಗನಾಮ Expert ಅಭಿನವ ಹಾಲಶ್ರೀ | Abhinava Halashree
    Trending

    ಪಂಗನಾಮ Expert ಅಭಿನವ ಹಾಲಶ್ರೀ | Abhinava Halashree

    vartha chakraBy vartha chakraSeptember 26, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.23- ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ಬಿಜೆಪಿ ಟಿಕೆಟ್‌  ಕೊಡಿಸುವ ಕೋಟ್ಯಾಂತರ ವಂಚನೆ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಇನ್ನೊಂದು ವಂಚನೆ ಕೃತ್ಯ ಬಯಲಾಗಿದೆ.
    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಯೊಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್‌ ಚಡವಾಳ ಅವರಿಗೆ ಹಾಲಶ್ರೀ ವಂಚನೆ ಮಾಡಿದ್ದಾರೆ‌ ಎಂಬ ಆರೋಪ ಕೇಳಿಬಂದಿದೆ.

    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ್‌ ಅವರು ಹಾಲಶ್ರೀ ಅವರ ಜನಪ್ರಿಯತೆ, ಬಿಜೆಪಿ ನಾಯಕರ ಒಡನಾಟ ಕಂಡು ಅವರ ಮೂಲಕ ಟಿಕೆಟ್‌ ಪಡೆಯಬಹುದು ಎಂದು ನಂಬಿ ಮಾತುಕತೆ ನಡೆಸಿದ ವೇಳೆ ಒಂದು ಕೋಟಿ ರೂ.ಗೆ ಡೀಲ್‌ ಆಗಿತ್ತು. ಸಂಜಯ್‌ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು.
    ಆದರೆ, ಶಿರಹಟ್ಟಿ ಟಿಕೆಟ್‌ ಕೊಡಿಸುವಲ್ಲಿ ಹಾಲಶ್ರೀ ವಿಫಲರಾಗಿದ್ದರು. ಅದಾದ ಬಳಿಕ ಸಂಜಯ್‌  ಹಣ ವಾಪಸ್‌ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದು ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಬೆಳಕಿಗೆ ಬಂದಿತ್ತು. ಸೆಪ್ಟೆಂಬರ್‌ 8ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಾಲಶ್ರೀ ತಮ್ಮ ಇನ್ನಷ್ಟು ಅಕ್ರಮಗಳು ಬಯಲಿಗೆ ಬರುವುದು ಬೇಡ ಎಂದು ಸಂಜಯ್‌ ಅವರಿಗೆ ಕರೆ ಮಾಡಿ ಹಣ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದರು.
    ಸಂಜಯ್‌ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು. ಈ ವೇಳೆ ಸಂಜಯ್‌ ಅವರು ಹಾಲಶ್ರೀ ಚಾಲಕನ ಸಂಪರ್ಕ ಮಾಡಿದ್ದರು ಆಗ ಚಾಲಕ ಹಿರೇಹಡಗಲಿ‌ ಮಠದಿಂದ ಮೈಸೂರಿನತ್ತ ತೆರಳಿ ಆಗಿತ್ತು.

    ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್‌ ನಡೆದಿರುವ ಮಾತುಕತೆ, ಫೋನ್‌ ಕಾಲ್‌ ಬೆನ್ನು ಹತ್ತಿ ಪಿಡಿಒ ಸಂಜಯ್‌ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ. ಸಿಸಿಬಿ ವಿಚಾರಣೆಯ ಬಳಿಕ ಸಂಜಯ್‌ ಈಗ ಮುಂಡರಗಿ ಠಾಣೆಗೆ ದೂರು ನೀಡಿದ್ದಾರೆ.
    ಸಂಜಯ್ ಚವಡಾಳ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು. ಎಸ್ ಸಿ (ಮಾದಿಗ) ಸಮುದಾಯಕ್ಕೆ ಸೇರಿದವರು. ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಂಜಯ್ ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ‌ ಸೇವೆ ಮಾಡುತ್ತಿದ್ದು ಕರ್ತವ್ಯ ಲೋಪದಲ್ಲಿ ಅಮಾನತುಗೊಂಡಿದ್ದಾರೆ.

    ಸೆಪ್ಟೆಂಬರ್ 19ರಂದು ಮಧ್ಯರಾತ್ರಿ ಠಾಣೆ ಬಂದು ಸಂಜಯ್‌ ದೂರು ನೀಡಿದ್ದು ಅದರಲ್ಲಿ ಚುನಾವಣೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನು ಶ್ರೀಗಳಿಗೆ ನೀಡಿದ್ದಾಗಿ ಹೇಳಿದ್ದಾರೆ. ಮೂರು ಕಂತುಗಳಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ‌ ತಿಳಿಸಿದ್ದಾರೆ. ಆದರೆ, ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಎನ್ ಸಿಆರ್‌ ದಾಖಲಿಸಿ ಕಳುಹಿಸಿರುವ ಮುಂಡರಗಿ ಪೊಲೀಸರು, ದಾಖಲೆ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ.
    ಹಾಲಶ್ರೀಯಿಂದ ತನಗೂ ಕೋಟಿ ರೂ ವಂಚನೆ ಆಗಿರುವ ಬಗ್ಗೆ ಸಿಸಿಬಿ ವಿಚಾರಣೆಯಲ್ಲಿ ಹೇಳಿಕೊಂಡಿರುವ ಸಂಜಯ್‌ ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಜನರ ಮುಂದೆ ಬಿಂಬಿಸಿಕೊಂಡಿದ್ದರು. ಟಿಕೆಟ್‌ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೊಂಡಿದ್ದರು.

    Verbattle
    Verbattle
    Verbattle
    Abhinava Halashree crime Government HAL Halashree Karnataka News ಕಾರು Election
    Share. Facebook Twitter Pinterest LinkedIn Tumblr Email WhatsApp
    Previous ArticleNDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS
    Next Article JDS-BJP ಮೈತ್ರಿ-ದಳ ತೊರೆದ ಮುಸ್ಲಿಂ ನಾಯಕರು
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Hvutcr on February 12, 2026 12:12 pm

      betmgm NJ https://betmgm-play.com/ betmgm California

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Glennhof on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LeonardReawn on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.