Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್
    ಅಪರಾಧ

    ಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್

    vartha chakraBy vartha chakraApril 12, 202426 Comments2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1019,j:2176789160201324077,t:24041213
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.12- ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸುತ್ತಾ ಮೊಬೈಲ್ ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಆಂಧ್ರದ ಗೋಕಾರಂ ಗ್ಯಾಂಗ್ ಬಂಧಿಸಿರುವ ವೈಟ್‍ಪೀಲ್ಡ್ ಪೊಲೀಸರು 30 ಲಕ್ಷ ಮೌಲ್ಯದ 107 ಮೊಬೈಲ್ ಗಳನ್ನು ಜಪ್ತಿ ಮಾಡಿದ್ದಾರೆ.
    ಆಂಧ್ರಪ್ರದೇಶದ ಗೋಕಾರಂ ಗ್ಯಾಂಗ್ ನ ವೆಂಕಟೇಶ್, ರವಿತೇಜ್,ಪೆದ್ದಪ್ಪ, ಬಾಲರಾಜ್,ರಮೇಶ್, ಹಾಗೂ ಸಾಯಿಕುಮಾರ್ ಸೇರಿ 6 ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದರು.

    ಬಂಧಿತ ಗ್ಯಾಂಗ್ ನಿಂದ 30 ಲಕ್ಷ ಮೌಲ್ಯದ 107 ಮೊಬೈಲ್ ಗಳನ್ನು ಜಪ್ತಿ ಮಾಡಿದ್ದು ಅವುಗಳಲ್ಲಿ ಓರ್ವ ವಾರಸುದಾರ ಪತ್ತೆಯಾಗಿದ್ದು, ಉಳಿದ ಮೊಬೈಲ್ ಗಳ ವಾರಸುದಾರರು ವೈಟ್‌ಫೀಲ್ಡ್‌‌ ಪೊಲೀಸರನ್ನು ಸಂಪರ್ಕಿಸಲು ಅವರು ಮನವಿ ಮಾಡಿದರು.
    ಕಳೆದ ಎ.4 ರಂದು ಬಸ್ಸಿನಲ್ಲಿ ಪ್ರಯಾಣ ಸುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕಳವು ಪ್ರಕರಣವನ್ನು ದಾಖಲಿಸಿ ಕಾರ್ಯಾಚರಣೆ ಕೈಗೊಂಡ ವೈಟ್‍ಪೀಲ್ಡ್ ಪೊಲೀಸರು ಖಚಿತವಾದ ಮಾಹಿತಿಯನ್ನು ಆಧರಿಸಿ ಗ್ಯಾಂಗ್ ನ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

    ಅರೋಪಿಗಳು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚೆನ್ನಸಂದ್ರದಲ್ಲಿ ಒಂದು ಬಾಡಿಗೆ ರೂಮ್‍ನ್ನು ಮಾಡಿದ್ದು, ಈ ರೂಮ್‍ನ್ನು ಪರಿಶೀಲಿಸಲಾಗಿ 80 ವಿವಿಧ ಕಂಪನಿಯ ಕಳ್ಳತನ ಮಾಡಿರುವ ಮೊಬೈಲ್ ಗಳನ್ನು ಶೇಖರಿಸಿಟ್ಟಿರುವುದು ಕಂಡುಬಂದಿದ್ದು ಅವುಗಳನ್ನು ಜಪ್ತಿ ಮಾಡಲಾಗಿದೆ ‌
    ಅಲ್ಲದೆ ಈ ಆರೋಪಿಗಳು ಅವಲಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮತ್ತೊಂದು ಬಾಡಿಗೆ ರೂಮ್‍ನ್ನು ಹೊಂದಿದ್ದು, ಆ ರೂಮ್‍ನ್ನೂ ಸಹ ಪರಿಶೀಲಿಸಲಾಗಿ ಅಲ್ಲಿ 24 ವಿವಿಧ ಕಂಪನಿಯ ಕಳ್ಳತನ ಮಾಡಿರುವ ಮೊಬೈಲ್ ಫೋನ್‍ಗಳನ್ನು ಶೇಖರಿಸಿಟ್ಟಿರುವುದು ಕಂಡುಬಂದಿರುತ್ತದೆ. ಈ ಎಲ್ಲಾ 107 ಮೊಬೈಲ್ ಫೋನ್‍ಗಳನ್ನು ವಶ ಪಡಿಸಿಕೊಳ್ಳಲಾಯಿತು.

    ಆರೋಪಿಗಳು ಜನಸಂದಣಿ ಇರುವ ಬಿ.ಎಂ.ಟಿ.ಸಿ.ಬಸ್‍ಗಳನ್ನು ಗುರಿಯಾಗಿಸಿಕೊಂಡು ಸಾರ್ವಜನಿಕರ ಮೊಬೈಲ್ ಫೋನ್‍ಗಳನ್ನು ಸಾರ್ವಜನಿಕರ ಅರಿವಿಗೆ ಬಾರದಂತೆ ಪಿಕ್ ಪಾಕೆಟಿಂಗ್/ಕಳ್ಳತನ ಮಾಡಿಕೊಂಡು, ನಂತರ ಕದ್ದ ಮಾಲುಗಳನ್ನು ಒಂದು ಕಡೆ ಶೇಖರಿಸಿ, ಅವುಗಳನ್ನು ಅಂತರ ರಾಜ್ಯ ಬಸ್‍ಗಳ ಮುಖಾಂತರ ಹೊರರಾಜ್ಯಕ್ಕೆ ತೆಗೆದುಕೊಂಡು ಹೋಗಿ, ಮಾರಾಟ ಮಾಡುತ್ತಿರುತ್ತಾರೆ ಎಂಬ ಮಾಹಿತಿಯು ತನಿಖೆಯಿಂದ ತಿಳಿದು ಬಂದಿರುತ್ತದೆ.
    ಕಾರ್ಯಾಚರಣೆಯನ್ನು ವೈಟ್‍ಫೀಲ್ಡ್ ಡಿಸಿಪಿ ಡಾ. ಶಿವಕುಮಾರ್,ಎಸಿಪಿ ಕವಿತಾ.ಎಂ.ಸಿ, ನೇತೃತ್ವದಲ್ಲಿ ವೈಟ್‍ಫೀಲ್ಡ್ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ನಡೆಸಿದ್ದಾರೆ ಎಂದರು.

    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    Next Article ಮುನಿಸು ಮರೆತು ಒಂದಾದ ದೋಸ್ತಿಗಳು..
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyPah on ಅಗಲಿದ “ಕಲಾ ತಪಸ್ವಿ”
    • JeremyPah on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • https://timpapa.com/ on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe