Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    ಸುದ್ದಿ

    ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane

    vartha chakraBy vartha chakraDecember 13, 2023Updated:December 13, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.13- ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ (Sugarcane) ತೂಕದಲ್ಲಿ ರೈತರಿಗೆ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದ್ದು, ಇದನ್ನು ಅಳವಡಿಸಲು ಕಾರ್ಖಾನೆಗಳಿಗೆ ಹದಿನೈದು ದಿನಗಳ ಗಡುವು ನೀಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
    ಈ ಕುರಿತಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ಜನಪ್ರತಿನಿಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

    ಪ್ರಸಕ್ತ ಹಂಗಾಮಿನಲ್ಲಿ 78 ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುತ್ತಿದ್ದು, 24 ಕಾರ್ಖಾನೆಗಳು ಮಾತ್ರ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿಕೊಂಡಿವೆ. ಉಳಿದ 54 ಕಾರ್ಖಾನೆಗಳು ಮುಂದಿನ ಹದಿನೈದು ದಿನಗಳಲ್ಲಿ ಡಿಜಿಟಲ್‍ಗೆ ಪರಿವರ್ತನೆ ಆಗಬೇಕು ಎಂದರು.
    ರೈತರು, ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಯಾವುದೇ ಕಾರಣಕ್ಕೂ ಮೋಸ ಆಗಬಾರದು. ರೈತರ ಗದ್ದೆಗಳಿಂದ ಲಾರಿಯಲ್ಲಿ ಎಷ್ಟು ಕಬ್ಬು ಬಂದಿರುತ್ತದೆಯೋ ಅಷ್ಟೇ ತೂಕದ ಕಬ್ಬು ಕಾರ್ಖಾನೆಗಳಲ್ಲಿ ತೂಕ ಮಾಡಿದಾಗಲೂ ಬರಬೇಕು. ಸರಿಯಾಗಿ ತೂಕ ಮಾಡದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಎಚ್ಚರಿಸಿದರು.
    ಡಿಜಿಟಲ್ ತೂಕ ಯಂತ್ರಗಳ ಅಳವಡಿಕೆಗೆ ಸಂಬಂಸಿದಂತೆ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಮಾಪನಶಾಸ್ತ್ರ ಇಲಾಖೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ನಿಯಂತ್ರಕರು ಸೇರಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

    ಬರ ಪರಿಹಾರ ವಿಷಯದಲ್ಲಿ ಕೇಂದ್ರದ ನೆರವಿಗೆ ಕಾಯದೆ ಸರ್ಕಾರ ಪರಿಹಾರ ನೀಡುವ ನಿರೀಕ್ಷೆ ನಮ್ಮದಾಗಿತ್ತು,ಆದರೆ ದುರಾದೃಷ್ಟವಶಾತ್ ಸರ್ಕಾರ ಕಣ್ಣಿದ್ದು ಕುರಡನಂತೆ , ಕಿವಿಯಿದ್ದು ಕಿವುಡನಂತೆ ವರ್ತಿಸುತ್ತಿದೆ. ಬರಗಾಲದ ಸಂದರ್ಭದಲ್ಲಿ ರಾಜ್ಯ ಸರ್ಕಾರ‌ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಪಶು ಆಹಾರದ ಬೆಲೆ ಹೆಚ್ಚಿಸಿದೆ, ಒಂದು ಕಡೆ ಸಾಲದ ಸುಳಿಗೆ‌ ಸಿಲುಕಿ ರೈತರು ಗುಳೆ ಹೋಗುತ್ತಿದ್ದರೆ, ಸುಮಾರು 450 ರೈತರು ಆತ್ಮಹತೆ ಮಾಡಿಕೊಂಡಿದ್ದಾರೆ ಎಂದು ಸದನದ ಗಮನ ಸೆಳೆದರು.
    ಸರ್ಕಾರ ರೈತರಿಗೆ 3 ಫೇಸ್ ವಿದ್ಯುತ್ ನ್ನು ದಿನಕ್ಕೆ 7 ಗಂಟೆ ನೀಡಲಿದೆ ಎಂದು ಭಾವಿಸಿದ್ದೇವು ಅದು ಹುಸಿಯಾಗಿದೆ.ರಾಜ್ಯಕ್ಕೆ ಸುಮಾರು 16 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಈಗ 10 ರಿಂದ 11 ಸಾವಿರ ಮೆಗಾ ವಾಟ್ ಮಾತ್ರ ಉತ್ಪಾದನೆ ಆಗುತ್ತಿದೆ. ಇಂದು 4 ಸಾವಿರ ಮೆಗಾ ವ್ಯಾಟ್ ಕೊರತೆ ಇದೆ. ಇದನ್ನು ಭರಿಸಲು ಆ ರಾಜ್ಯದಿಂದ ಖರೀದಿ ಮಾಡುತ್ತೇವೆ ಈ ರಾಜ್ಯದಿಂದ ಖರೀದಿ ಮಾಡುತ್ತೇವೆ ಕಳೆದ ಮೂರು ತಿಂಗಳಿನಿಂದ ಹೇಳಲಾಗುತ್ತಿದೆ‌. ಆದರೆ, ಖರೀದಿ ಮಾತ್ರ ಆಗಿಲ್ಲ, ಅದಕ್ಕೆ ಕಾರಣ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ದೂರಿದರು.
    ರೈತರ ಮೇಲೆ ಕಾಳಜಿಯಿಲ್ಲದ ಸರ್ಕಾರ ಒಂದು ಕಡೆ ಬೆಲೆ ಏರಿಕೆ ಮತ್ತು ವಿದ್ಯುತ್ತು ಪೂರೈಕೆ ಕೊರತೆ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.ಇಂತಹ ಸಂದರ್ಭದಲ್ಲಿ ರೈತರ ಸಹಾಯಕೆ ಬರಬೇಕಿದ್ದ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಅಲ್ಲಿಂದ ಪರಿಹಾರ ಬಂದಿಲ್ಲ ಎಂದು ಹೇಳುತಿದೆ. ಅಗಾದರೆ ರಾಜ್ಯ ಸರ್ಕಾರಕ್ಕೆ ಜವಾದ್ದಾರಿ ಇಲ್ಲವೇ ಎಂದು ಪ್ರಶ್ನಿಸಿದರು.
    ಬರ ಪರಸ್ಥಿಯನ್ನು ಸರಿದೂಗಿಸಲು ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ಬಳಸಿಕೊಳ್ಳಬಹುದಿತ್ತು, ಆದರೆ ಸರ್ಕಾರದ ಬಳಿ ರಾಜ್ಯದ ಪಾಲು ತುಂಬಲು ಹಣವಿಲ್ಲದೆ ಎಲ್ಲ ಯೋಜನೆಗಳನ್ನು ಕೈ ಬಿಟ್ಟಿದೆ. ಕೇಂದ್ರದ ಹೊಸ ನೀತಿ ಪ್ರಕಾರ ರಾಜ್ಯದ ಪಾಲು ತುಂಬಿದ ನಂತರವೇ ಕೇಂದ್ರದ ಪಾಲು ಬಿಡುಗಡೆಯಾಗುತ್ತದೆ.ಅದರಿಂದ ಆ ಯೋಜನೆಗಳನ್ನು ಸರ್ಕಾರ ಕೈ ಬಿಟ್ಟಿದೆ ಎಂದು ಆಪಾದಿಸಿದರು.
    ಕಬ್ಬು ಬೆಳೆಗಾರರಿಗೆ ವಿಶೇಷ ಬೆಂಬಲ ಬೆಲೆ ಘೋಷಣೆ ಮಾಡಬೇಕು, ಒಂದು ಎಕರೆ ಕಬ್ಬು ಬೆಳೆಗೆ 25 ರಿಂದ 30 ಸಾವಿರ, ದ್ರಾಕ್ಷಿ ಬೆಳೆಗಾರರಿಗೆ 45 ರಿಂದ 50 ಸಾವಿರ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು

    Verbattle
    Verbattle
    Verbattle
    Karnataka News Politics sugar Sugarcane ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಜನವರಿಯಿಂದ ಯುವನಿಧಿ ಆರಂಭ | Yuvanidhi
    Next Article ಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    2 Comments

    1. vyezdnoj-shinomontazh-77sal on February 15, 2026 10:45 pm

      выездной шиномонтаж 24 часа

      Reply
    2. ShumoizolyaciyaAroknub on February 15, 2026 11:16 pm

      шумоизоляция арок авто

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LinwoodGah on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Tracymix on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.