Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದ ಈ ಸಾಧನೆ ನೋಡಿ.
    ಡಿ.ಕೆ.ಶಿವಕುಮಾರ್

    ಕರ್ನಾಟಕದ ಈ ಸಾಧನೆ ನೋಡಿ.

    vartha chakraBy vartha chakraOctober 21, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.21:
    ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ.
    ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ ಎಂದು ವಿವರಿಸಿದೆ
    ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.
    ರಾಷ್ಟ್ರೀಯ ಅಂಕಿಅಂಶ ಕೋಶ ವರ್ಷದ ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ ದರ ಶೇ.13.1 ರಷ್ಟಾಗಿದ್ದು, ಎನ್‌ಎಸ್‌ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಸ್ಪಷ್ಟವಾಗಿದೆ.
    ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿಲ್ಲ. ಕರ್ನಾಟಕದ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್‌ ವಲಯದ ಪಾಲು ಶೇ.28ರಷ್ಟಿದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ. ಭಾರತದ ಐಟಿ ವಲಯ 2022ರ ಹಣಕಾಸು ಸಾಲಿನಲ್ಲಿ ಶೇ.15.5 ರಷ್ಟು ಪ್ರಗತಿ ಕಂಡದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ. ಆದರೆ ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ ಎಂದು ವಿವರಿಸಲಾಗಿದೆ
    2024-25ನೇ ಹಣಕಾಸು ಸಾಲಿಗೆ ಎನ್‌ಎಸ್ ಸಿ ಕರ್ನಾಟಕ ರಾಜ್ಯಕ್ಕೆ ಶೇ.9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇ.10.5ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಆದರೆ ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿರಿಸಿ ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14ರಷ್ಟು ಅಂದಾಜಿಸಿದೆ. 2024ರ ಸೆಪ್ಟಂಬರ್‌ ಅವಧಿಯಲ್ಲಿ ಕರ್ನಾಟಕ ವರ್ಷದಿಂದ ವರ್ಷಕ್ಕೆ ಜಿಎಸ್‌ಟಿ ಸಂಗ್ರಹದಲ್ಲಿ ಶೇ.10ರಷ್ಟು ಹಾಗೂ ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಶೇ.24ರಷ್ಟು ಹೆಚ್ಚಳ ದಾಖಲಿಸಿದ್ದು, ಉತ್ತಮ ಆರ್ಥಿಕತೆಯನ್ನು ತೋರಿಸುತ್ತಿದೆ.
    ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ.
    ಐಟಿ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೊಂದಿರುವುದು ದೇಶದ ಡಿಜಿಟಲ್‌ ಮತ್ತು ಆರ್ಥಿಕ ರಂಗದಲ್ಲಿ ಪ್ರಮುಖ ಪಾತ್ರ ವಹಿಸಲು ಕಾರಣವಾಗಿದೆ ಎಂದು ಉದ್ಯಮ ರಂಗದ ತಜ್ಞರ ಅಭಿಪ್ರಾಯವಾಗಿದೆ.

    Verbattle
    Verbattle
    Verbattle
    Congress Government GSDP Karnataka News Politics ಕರ್ನಾಟಕ ಕಾಂಗ್ರೆಸ್ Bengaluru ರಾಜಕೀಯ ವ್ಯವಹಾರ Business ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.
    Next Article ಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Tfwlbx on February 11, 2026 6:38 pm

      betmgm РњРђ online casino betmgm play bet mgm $200

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredovax on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • DarrellBrize on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.