Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕದನ ಕೌತುಕ ಕಣ – CM ಸೋಲಿಸಿದವರ ಮಣಿಸಲು ಪಣ
    ಚುನಾವಣೆ 2024

    ಕದನ ಕೌತುಕ ಕಣ – CM ಸೋಲಿಸಿದವರ ಮಣಿಸಲು ಪಣ

    vartha chakraBy vartha chakraFebruary 16, 20232 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು.

    ರಾಜ್ಯದಲ್ಲಿನ ಕೆಲವು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಪೈಕಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರವೂ (Chamundeshwari Assembly Constituency, Mysore) ಒಂದು. ಚಾಮುಂಡೇಶ್ವರಿ ಕ್ಷೇತ್ರ ರಾಜ್ಯದ ಪ್ರಭಾವಿ ರಾಜಕಾರಣಿ, ಮಾಜಿ ಸಿಎಂ ಹಾಗೂ ಹಾಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ರಾಜಕೀಯ ಕರ್ಮಭೂಮಿ. ಅವರಿಗೆ ರಾಜಕೀಯ ಶಕ್ತಿ ನೀಡಿದ ಚುನಾವಣಾ ಅಖಾಡ. ಇಲ್ಲಿಯವರೆಗೆ ನಡೆದ 13 ಚುನಾವಣೆಗಳ ಪೈಕಿ ಸಿದ್ದರಾಮಯ್ಯ ಈ ಕ್ಷೇತ್ರದಿಂದ 5 ಬಾರಿ ಜಯ ಕಂಡಿದ್ದರು. JDS ನಿಂದ  ಹೊರಬಂದ ಬಳಿಕ ನಡೆದ 2006ರ ಉಪಚುನಾವಣೆಯಲ್ಲೂ ಇದೇ ಕ್ಷೇತ್ರದಿಂದ Congress ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೇವಲ 257 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಜಕೀಯವಾಗಿ ಮರುಜನ್ಮ ಪಡೆದದ್ದು ಇತಿಹಾಸ.

    ಆದರೆ, ಸುದೀರ್ಘ ಕಾಲ ಕೈಹಿಡಿದಿದ್ದ ಈ ಕ್ಷೇತ್ರ ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಕೈಬಿಟ್ಟಿತು. ಒಂದು ಕಾಲದ ಆಪ್ತ ಸ್ನೇಹಿತರಾಗಿದ್ದ ಜಿ.ಟಿ.ದೇವೇಗೌಡ (G T Devegowda ), ಅಂದು ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು  ಸೋಲಿಸಿದರು. ಇದೇ ಕಾರಣದಿಂದ GTD ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದು ಪ್ರಸಿದ್ಧರಾದರು. ಕಳೆದ ಬಾರಿ ಮುಖ್ಯಮಂತ್ರಿಯನ್ನೇ ಪರಾಭವಗೊಳಿಸಿ, ರಾಜ್ಯದ ಗಮನ ಸೆಳೆದಿದ್ದ ಜಿ.ಟಿ.ದೇವೇಗೌಡ ಅವರು ಮತ್ತೆ ಇಲ್ಲಿ JDS ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಚುನಾವಣೆಗೂ ಮುನ್ನ ಜಿ.ಟಿ.ದೇವೇಗೌಡ ಅವರನ್ನು ತಮ್ಮತ್ತ ಸೆಳೆಯಲು Congress, BJP ಸಾಕಷ್ಟು ಬೆವರು ಹರಿಸಿದ್ದವು.

    ವಿಧಾನಸಭೆಗೆ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ಸೇರಿದಂತೆ ಹಲವು ವಿಷಯದಲ್ಲಿ JDS ಜೊತೆ ತೀವ್ರ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದ GTD ಒಂದು ಹಂತದಲ್ಲಿ ಪಕ್ಷದಿಂದ ತಮ್ಮ ಕಾಲುಗಳನ್ನು ಹೊರಗಿಟ್ಟಿದ್ದರು. ತಮ್ಮ ಒಂದು ಕಾಲದ ರಾಜಕೀಯ ಗುರು, ಸ್ನೇಹಿತರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಹೆಚ್ಚಿನ ಒಡನಾಟ ಹೊಂದಿದ್ದ GTD ಇನ್ನೇನು ಕಾಂಗ್ರೆಸ್ ಸೇರಿದರು ಎನ್ನುವಾಗ JDS ಪರಮೋಚ್ಚ ನಾಯಕ ದೇವೇಗೌಡ (H.D. Deve Gowda) ರಂಗಪ್ರವೇಶ ಮಾಡಿ ಬಿಕ್ಕಟ್ಟು ಶಮನಗೊಳಿಸಿದ್ದರು. ಇದೀಗ ತಮ್ಮ ಪುತ್ರನಿಗೂ JDS ಟಿಕೆಟ್ ಖಾತ್ರಿಮಾಡಿಕೊಂಡ GTD ಚಾಮುಂಡೇಶ್ವರಿ ಕ್ಷೇತ್ರದ JDS ಹುರಿಯಾಳು.

    ಇವರನ್ನು ಈ ಬಾರಿ ಸೋಲಿಸಲೇಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಣ ತೊಟ್ಟಿವೆ. ಅದರಂತೆ, ಉಭಯ ಪಕ್ಷಗಳೂ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕ್ಷೇತ್ರದಲ್ಲಿ ಜಿದ್ದಾಜಿದ್ದಿಯ ಪೈಪೋಟಿ ಎದುರಾಗಲಿದೆ. ಇದೀಗ ಹ್ಯಾಟ್ರಿಕ್ ಜಯದ ಕನಸಿನೊಂದಿಗೆ ಜಿ.ಟಿ.ದೇವೇಗೌಡ ಮುಂದಿನ ಚುನಾವಣೆ ಎದುರಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿಯ ಚುನಾವಣೆ ಅವರಿಗೆ ಅಗ್ನಿಪರೀಕ್ಷೆಯೇ ಸರಿ. ಯಾಕೆಂದರೆ ಜೆಡಿಎಸ್ ತೊರೆಯುವುದಾಗಿ ಹೇಳಿ, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಜೊತೆ ಪಕ್ಷ ಸೇರ್ಪಡೆ ಮಾತುಕತೆ ನಡೆಸಿದ್ದ ಜಿಟಿಡಿ ಇದೀಗ ಜೆಡಿಎಸ್ ನಲ್ಲೇ ಉಳಿದಿರುವ ಅವರ ನಿಲುವು ಉಭಯ ಪಕ್ಷಗಳಿಗೂ ಸಿಟ್ಟು ತರಿಸಿದ್ದು, ಅದೇ ಕಾರಣದಿಂದ ಈ ಬಾರಿ ಹೇಗಾದರೂ ಮಾಡಿ GTD ಸೋಲಿಸಬೇಕೆಂಬ ಹಠಕ್ಕೆ ಬಿದ್ದಿವೆ. ಆದರೆ, GTD ಸೋಲಿಸುವಂತಹ ಪ್ರಬಲ ಅಭ್ಯರ್ಥಿಗಳು ಸದ್ಯಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಕಾಣುತ್ತಿಲ್ಲ. ಆಕಾಂಕ್ಷಿಗಳ ಪೈಕಿ ವೈಯಕ್ತಿಕ ವರ್ಚಸ್ಸು, ಜನಬೆಂಬಲ ಹೊಂದಿರುವವರು ಯಾರೂ ಇಲ್ಲ. ಆದ್ದರಿಂದ ಉಭಯ ಪಕ್ಷಗಳಲ್ಲೂ ಗೆಲ್ಲುವ ಕುದುರೆಗಾಗಿ ಹುಡುಕಾಟ ನಡೆದಿದ್ದು, ಅವರು ಯಾರಾಗಬಹುದು ಎಂಬುದು ಸದ್ಯಕ್ಕೆ ಕೌತುಕ.

    ಕ್ಷೇತ್ರದ ಮೇಲೆ ಬಲವಾದ ಹಿಡಿತ ಹೊಂದಿರುವ GTD ಜನಾನುರಾಗಿ, ಕ್ಷೇತ್ರದ ಮತದಾರರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವ ಅವರ ಗುಣ ಎದುರಾಳಿಗಳನ್ನು ಇಲ್ಲದಂತೆ ಮಾಡಿದೆ. ಹೀಗಾಗಿಯೇ ಇವರನ್ನು ತಮ್ಮತ್ತ ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಪ್ರಯತ್ನ ಮಾಡಿದ್ದು. ಸದ್ಯ ಜಿ.ಟಿ.ದೇವೇಗೌಡರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಡುತ್ತಿದೆ. ಆದ್ದರಿಂದ ಸಿನಿಮಾ ನಟರನ್ನು ಕರೆತರುವ ಕುರಿತು ಚಿಂತನೆ ನಡೆದಿದೆ.

    ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ (Shashi Kumar) ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಾಲ್ಮೀಕಿ ಸಮುದಾಯದ ಮತದಾರರಿದ್ದಾರೆ. ಹಾಗೆಯೇ ಲಿಂಗಾಯತರೂ ಕೂಡ ಸಾಕಷ್ಟು ಸಂಖ್ಯೆಯಲ್ಲಿದ್ದು ಶಶಿಕುಮಾರ್ ಕಣಕ್ಕಿಳಿದರೆ GTD ಅವರನ್ನು ಮಣಿಸಬಹುದೆನ್ನುವುದು ಕಮಲ ಪಾಳಯದ ಲೆಕ್ಕಾಚಾರ. ಕಾಂಗ್ರೆಸ್ ನಲ್ಲಂತೂ ಸ್ಪರ್ಧೆಗೆ ದೊಡ್ಡ ಪೈಪೋಟಿಯೇ ಇದೆ. ಟಿಕೆಟ್ ಬಯಸಿ 8 ಆಕಾಂಕ್ಷಿಗಳು KPCC ಗೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಮಾಜಿ ಶಾಸಕ ಸತ್ಯನಾರಾಯಣ ಅವರ ಪುತ್ರ, ಜಿಲ್ಲಾ ಪಂಚಾಯತ  ಮಾಜಿ ಸದಸ್ಯ ಅರುಣ್ ಕುಮಾರ್, ಜಿಪಂ ಮಾಜಿ ಸದಸ್ಯರಾದ ಕೂರ್ಗಳ್ಳಿ ಮಹದೇವ, ಲೇಖಾ ವೆಂಕಟೇಶ್, ಮುಖಂಡ ರಾಕೇಶ್ ಪಾಪಣ್ಣ, ಸ್ಟೀಲ್ ಉದ್ಯಮಿ ಕೃಷ್ಣಕುಮಾರ್ ಸಾಗರ್ ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ನಿರ್ದೇಶಕ ಮಲ್ಲಹಳ್ಳಿ ಮಹದೇವಸ್ವಾಮಿ ಕೈ ಟಿಕೆಟ್ ಕೋರಿದ್ದಾರೆ.

    ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಜಿ.ಟಿ.ದೇವೇಗೌಡ ಗೆಲ್ಲುವ ಕುದುರೆ. ಇದರ ನಾಗಾಲೋಟಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಸಾಧ್ಯವೇ ಎನ್ನುವುದಷ್ಟೇ ಪ್ರಶ್ನೆ.

    Verbattle
    Verbattle
    Verbattle
    #BJP #Congress #JDS #siddaramaiah BJP Chamundeshwari Assembly Constituency Congress Elections 2023 Government GT Devegowda GTD JDS Karnataka KPCC m mysor Mysore Politics shashi kumar war ಕಾಂಗ್ರೆಸ್ Election ರಾಜಕೀಯ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಠದ ಕೆಲಸದ ಹೆಸರಲ್ಲಿ‌ ಟೋಪಿ ಹಾಕಿದ‌ ವಂಚಕರು
    Next Article ಚುನಾವಣಾ ಅಖಾಡಕ್ಕೆ IAS ಅಧಿಕಾರಿ ಲಕ್ಷ್ಮೀನಾರಾಯಣ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Jeffreyessen on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Jamesnab on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.