Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕದನ ಕೌತುಕ ಕಣ – CM ಸೋಲಿಸಿದವರ ಮಣಿಸಲು ಪಣ
    ಚುನಾವಣೆ 2024

    ಕದನ ಕೌತುಕ ಕಣ – CM ಸೋಲಿಸಿದವರ ಮಣಿಸಲು ಪಣ

    vartha chakraBy vartha chakraFebruary 16, 202384 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು.

    ರಾಜ್ಯದಲ್ಲಿನ ಕೆಲವು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಪೈಕಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರವೂ (Chamundeshwari Assembly Constituency, Mysore) ಒಂದು. ಚಾಮುಂಡೇಶ್ವರಿ ಕ್ಷೇತ್ರ ರಾಜ್ಯದ ಪ್ರಭಾವಿ ರಾಜಕಾರಣಿ, ಮಾಜಿ ಸಿಎಂ ಹಾಗೂ ಹಾಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ರಾಜಕೀಯ ಕರ್ಮಭೂಮಿ. ಅವರಿಗೆ ರಾಜಕೀಯ ಶಕ್ತಿ ನೀಡಿದ ಚುನಾವಣಾ ಅಖಾಡ. ಇಲ್ಲಿಯವರೆಗೆ ನಡೆದ 13 ಚುನಾವಣೆಗಳ ಪೈಕಿ ಸಿದ್ದರಾಮಯ್ಯ ಈ ಕ್ಷೇತ್ರದಿಂದ 5 ಬಾರಿ ಜಯ ಕಂಡಿದ್ದರು. JDS ನಿಂದ  ಹೊರಬಂದ ಬಳಿಕ ನಡೆದ 2006ರ ಉಪಚುನಾವಣೆಯಲ್ಲೂ ಇದೇ ಕ್ಷೇತ್ರದಿಂದ Congress ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೇವಲ 257 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಜಕೀಯವಾಗಿ ಮರುಜನ್ಮ ಪಡೆದದ್ದು ಇತಿಹಾಸ.

    ಆದರೆ, ಸುದೀರ್ಘ ಕಾಲ ಕೈಹಿಡಿದಿದ್ದ ಈ ಕ್ಷೇತ್ರ ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಕೈಬಿಟ್ಟಿತು. ಒಂದು ಕಾಲದ ಆಪ್ತ ಸ್ನೇಹಿತರಾಗಿದ್ದ ಜಿ.ಟಿ.ದೇವೇಗೌಡ (G T Devegowda ), ಅಂದು ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು  ಸೋಲಿಸಿದರು. ಇದೇ ಕಾರಣದಿಂದ GTD ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದು ಪ್ರಸಿದ್ಧರಾದರು. ಕಳೆದ ಬಾರಿ ಮುಖ್ಯಮಂತ್ರಿಯನ್ನೇ ಪರಾಭವಗೊಳಿಸಿ, ರಾಜ್ಯದ ಗಮನ ಸೆಳೆದಿದ್ದ ಜಿ.ಟಿ.ದೇವೇಗೌಡ ಅವರು ಮತ್ತೆ ಇಲ್ಲಿ JDS ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಚುನಾವಣೆಗೂ ಮುನ್ನ ಜಿ.ಟಿ.ದೇವೇಗೌಡ ಅವರನ್ನು ತಮ್ಮತ್ತ ಸೆಳೆಯಲು Congress, BJP ಸಾಕಷ್ಟು ಬೆವರು ಹರಿಸಿದ್ದವು.

    ವಿಧಾನಸಭೆಗೆ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ಸೇರಿದಂತೆ ಹಲವು ವಿಷಯದಲ್ಲಿ JDS ಜೊತೆ ತೀವ್ರ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದ GTD ಒಂದು ಹಂತದಲ್ಲಿ ಪಕ್ಷದಿಂದ ತಮ್ಮ ಕಾಲುಗಳನ್ನು ಹೊರಗಿಟ್ಟಿದ್ದರು. ತಮ್ಮ ಒಂದು ಕಾಲದ ರಾಜಕೀಯ ಗುರು, ಸ್ನೇಹಿತರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಹೆಚ್ಚಿನ ಒಡನಾಟ ಹೊಂದಿದ್ದ GTD ಇನ್ನೇನು ಕಾಂಗ್ರೆಸ್ ಸೇರಿದರು ಎನ್ನುವಾಗ JDS ಪರಮೋಚ್ಚ ನಾಯಕ ದೇವೇಗೌಡ (H.D. Deve Gowda) ರಂಗಪ್ರವೇಶ ಮಾಡಿ ಬಿಕ್ಕಟ್ಟು ಶಮನಗೊಳಿಸಿದ್ದರು. ಇದೀಗ ತಮ್ಮ ಪುತ್ರನಿಗೂ JDS ಟಿಕೆಟ್ ಖಾತ್ರಿಮಾಡಿಕೊಂಡ GTD ಚಾಮುಂಡೇಶ್ವರಿ ಕ್ಷೇತ್ರದ JDS ಹುರಿಯಾಳು.

    ಇವರನ್ನು ಈ ಬಾರಿ ಸೋಲಿಸಲೇಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಣ ತೊಟ್ಟಿವೆ. ಅದರಂತೆ, ಉಭಯ ಪಕ್ಷಗಳೂ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕ್ಷೇತ್ರದಲ್ಲಿ ಜಿದ್ದಾಜಿದ್ದಿಯ ಪೈಪೋಟಿ ಎದುರಾಗಲಿದೆ. ಇದೀಗ ಹ್ಯಾಟ್ರಿಕ್ ಜಯದ ಕನಸಿನೊಂದಿಗೆ ಜಿ.ಟಿ.ದೇವೇಗೌಡ ಮುಂದಿನ ಚುನಾವಣೆ ಎದುರಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿಯ ಚುನಾವಣೆ ಅವರಿಗೆ ಅಗ್ನಿಪರೀಕ್ಷೆಯೇ ಸರಿ. ಯಾಕೆಂದರೆ ಜೆಡಿಎಸ್ ತೊರೆಯುವುದಾಗಿ ಹೇಳಿ, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಜೊತೆ ಪಕ್ಷ ಸೇರ್ಪಡೆ ಮಾತುಕತೆ ನಡೆಸಿದ್ದ ಜಿಟಿಡಿ ಇದೀಗ ಜೆಡಿಎಸ್ ನಲ್ಲೇ ಉಳಿದಿರುವ ಅವರ ನಿಲುವು ಉಭಯ ಪಕ್ಷಗಳಿಗೂ ಸಿಟ್ಟು ತರಿಸಿದ್ದು, ಅದೇ ಕಾರಣದಿಂದ ಈ ಬಾರಿ ಹೇಗಾದರೂ ಮಾಡಿ GTD ಸೋಲಿಸಬೇಕೆಂಬ ಹಠಕ್ಕೆ ಬಿದ್ದಿವೆ. ಆದರೆ, GTD ಸೋಲಿಸುವಂತಹ ಪ್ರಬಲ ಅಭ್ಯರ್ಥಿಗಳು ಸದ್ಯಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಕಾಣುತ್ತಿಲ್ಲ. ಆಕಾಂಕ್ಷಿಗಳ ಪೈಕಿ ವೈಯಕ್ತಿಕ ವರ್ಚಸ್ಸು, ಜನಬೆಂಬಲ ಹೊಂದಿರುವವರು ಯಾರೂ ಇಲ್ಲ. ಆದ್ದರಿಂದ ಉಭಯ ಪಕ್ಷಗಳಲ್ಲೂ ಗೆಲ್ಲುವ ಕುದುರೆಗಾಗಿ ಹುಡುಕಾಟ ನಡೆದಿದ್ದು, ಅವರು ಯಾರಾಗಬಹುದು ಎಂಬುದು ಸದ್ಯಕ್ಕೆ ಕೌತುಕ.

    ಕ್ಷೇತ್ರದ ಮೇಲೆ ಬಲವಾದ ಹಿಡಿತ ಹೊಂದಿರುವ GTD ಜನಾನುರಾಗಿ, ಕ್ಷೇತ್ರದ ಮತದಾರರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವ ಅವರ ಗುಣ ಎದುರಾಳಿಗಳನ್ನು ಇಲ್ಲದಂತೆ ಮಾಡಿದೆ. ಹೀಗಾಗಿಯೇ ಇವರನ್ನು ತಮ್ಮತ್ತ ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಪ್ರಯತ್ನ ಮಾಡಿದ್ದು. ಸದ್ಯ ಜಿ.ಟಿ.ದೇವೇಗೌಡರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಡುತ್ತಿದೆ. ಆದ್ದರಿಂದ ಸಿನಿಮಾ ನಟರನ್ನು ಕರೆತರುವ ಕುರಿತು ಚಿಂತನೆ ನಡೆದಿದೆ.

    ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ (Shashi Kumar) ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಾಲ್ಮೀಕಿ ಸಮುದಾಯದ ಮತದಾರರಿದ್ದಾರೆ. ಹಾಗೆಯೇ ಲಿಂಗಾಯತರೂ ಕೂಡ ಸಾಕಷ್ಟು ಸಂಖ್ಯೆಯಲ್ಲಿದ್ದು ಶಶಿಕುಮಾರ್ ಕಣಕ್ಕಿಳಿದರೆ GTD ಅವರನ್ನು ಮಣಿಸಬಹುದೆನ್ನುವುದು ಕಮಲ ಪಾಳಯದ ಲೆಕ್ಕಾಚಾರ. ಕಾಂಗ್ರೆಸ್ ನಲ್ಲಂತೂ ಸ್ಪರ್ಧೆಗೆ ದೊಡ್ಡ ಪೈಪೋಟಿಯೇ ಇದೆ. ಟಿಕೆಟ್ ಬಯಸಿ 8 ಆಕಾಂಕ್ಷಿಗಳು KPCC ಗೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಮಾಜಿ ಶಾಸಕ ಸತ್ಯನಾರಾಯಣ ಅವರ ಪುತ್ರ, ಜಿಲ್ಲಾ ಪಂಚಾಯತ  ಮಾಜಿ ಸದಸ್ಯ ಅರುಣ್ ಕುಮಾರ್, ಜಿಪಂ ಮಾಜಿ ಸದಸ್ಯರಾದ ಕೂರ್ಗಳ್ಳಿ ಮಹದೇವ, ಲೇಖಾ ವೆಂಕಟೇಶ್, ಮುಖಂಡ ರಾಕೇಶ್ ಪಾಪಣ್ಣ, ಸ್ಟೀಲ್ ಉದ್ಯಮಿ ಕೃಷ್ಣಕುಮಾರ್ ಸಾಗರ್ ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ನಿರ್ದೇಶಕ ಮಲ್ಲಹಳ್ಳಿ ಮಹದೇವಸ್ವಾಮಿ ಕೈ ಟಿಕೆಟ್ ಕೋರಿದ್ದಾರೆ.

    ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಜಿ.ಟಿ.ದೇವೇಗೌಡ ಗೆಲ್ಲುವ ಕುದುರೆ. ಇದರ ನಾಗಾಲೋಟಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಸಾಧ್ಯವೇ ಎನ್ನುವುದಷ್ಟೇ ಪ್ರಶ್ನೆ.

    #BJP #Congress #JDS #siddaramaiah BJP Chamundeshwari Assembly Constituency Congress Elections 2023 Government GT Devegowda GTD JDS Karnataka KPCC m mysor Mysore Politics shashi kumar war ಕಾಂಗ್ರೆಸ್ Election ರಾಜಕೀಯ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಠದ ಕೆಲಸದ ಹೆಸರಲ್ಲಿ‌ ಟೋಪಿ ಹಾಕಿದ‌ ವಂಚಕರು
    Next Article ಚುನಾವಣಾ ಅಖಾಡಕ್ಕೆ IAS ಅಧಿಕಾರಿ ಲಕ್ಷ್ಮೀನಾರಾಯಣ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://sknewstroy.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://sofiaposada.com.co/review-completa-de-balloon-juego-de-smartsoft-para-13/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • fishezdpa on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe