Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇತಿಹಾಸ ಸೃಷ್ಟಿಸಿದ ಕನ್ನಡಿಗ ಖರ್ಗೆ
    ರಾಜ್ಯ

    ಇತಿಹಾಸ ಸೃಷ್ಟಿಸಿದ ಕನ್ನಡಿಗ ಖರ್ಗೆ

    vartha chakraBy vartha chakraOctober 20, 2022Updated:March 20, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.19-
    ನೆಹರು, ಗಾಂಧಿ ಕುಟುಂಬದ ಹೊರತಾಗಿ ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕೆ ಚುನಾವಣೆ ನಡೆದಿದ್ದು ರಾಜ್ಯದ ಮುತ್ಸದ್ಧಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
    ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ರಾಜ್ಯದ ಎರಡನೆ ಹಾಗೂ ದೇಶದ ಎರಡನೇ ದಲಿತ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ರಾಜ್ಯದ ದಿವಂಗತ ಎಸ್. ನಿಜಲಿಂಗಪ್ಪ ಮತ್ತು ದಲಿತ ನಾಯಕ ದಿವಂಗತ ಬಾಬು ಜಗಜೀವನ್ ರಾಮ್ ಈ ಹುದ್ದೆ ಅಲಂಕರಿಸಿದ್ದರು
    ಎಐಸಿಸಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಿದ್ದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು.
    ನಿರೀಕ್ಷೆಯಂತೆ ಮಲ್ಲಿಕಾರ್ಜುನ ಖರ್ಗೆ ಆರಂಭಿಕ ಹಂತದಲ್ಲೇ 7897 ಮತಗಳನ್ನು ಪಡೆದಿದ್ದರು. ಇದರಲ್ಲಿ ಶಶಿತರೂರ್ 1072 ಮತಗಳನ್ನು ಪಡೆದರು. 416 ಮತಗಳನ್ನು ಅಸಿಂಧುಗೊಳಿಸಲಾಯಿತು
    ಈ ಮೂಲಕ ಅತಿ ಹೆಚ್ಚು ಮತಗಳಿಸಿ ಕಾಂಗ್ರೆಸ್‍ನ 18ನೇ ಅಧ್ಯಕ್ಷರಾಗಿ ಖರ್ಗೆ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು.
    ಒಟ್ಟು ಮತದಾನದಲ್ಲಿ ಖರ್ಗೆ ಶೇ.88ರಷ್ಟು ಬೆಂಬಲ ಪಡೆದರೆ, ಶಶಿತರೂರ್ ಶೇ.12ರಷ್ಟು ಮತ ಪಡೆದಿದ್ದಾರೆ. ಖರ್ಗೆ ಸುಮಾರು 7ಸಾವಿರ ಮತಗಳ ಅಂತರದಿಂದ ಜಯ ಸಾಧಿ ಸಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಕರ್ನಾಟಕ, ದೆಹಲಿ ಸೇರಿದಂತೆ ಹಲವು ಭಾಗಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
    ಮತ ಎಣಿಕೆ ಅರ್ಧದಷ್ಟು ಮುಗಿದು ಖರ್ಗೆ ಅವರು 4ಸಾವಿರಕ್ಕೂ ಹೆಚ್ಚು ಮತ ಪಡೆಯುತ್ತಿದ್ದಂತೆ ಕೈ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಖರ್ಗೆ ಆಯ್ಕೆ ಖಚಿತ ಎಂದು ಸ್ಪಷ್ಟವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಕೂಡ ಅಭಿನಂದನೆಗಳ ಸಂದೇಶಗಳ ಸುರಿಮಳೆಗೈದರು.
    1998ರಿಂದ ಸೋನಿಯಾಗಾಂಧಿ ನಿರಂತರವಾಗಿ ಪಕ್ಷದ ಅಧ್ಯಕ್ಷರಾಗಿದ್ದು, 2017ರಿಂದ 19ರವರೆಗೆ ಎರಡು ವರ್ಷಗಳ ಕಾಲ ಮಾತ್ರ ರಾಹುಲ್‍ಗಾಂಧಿ ಪಕ್ಷದ ಜವಾಬ್ದಾರಿ ನಿಭಾಯಿಸಿದ್ದರು. ಸರಿಸುಮಾರು 24 ವರ್ಷಗಳ ಕಾಲ ಗಾಂಧಿ ಕುಟುಂಬದ ಹಿಡಿತದಲ್ಲಿದ್ದ ಪಕ್ಷ ಈ ಬಾರಿ ಗಾಂಧಿಯೇತರ ಕುಟುಂಬದ ಹಿಡಿತಕ್ಕೆ ಸಿಕ್ಕಿದೆ.
    ಕಾಂಗ್ರೆಸ್ ವಂಶಪಾರಂಪರ್ಯ ರಾಜಕಾರಣ ಅನುಸರಿಸುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬರುತ್ತಿದ್ದವು. ಅದನ್ನು ತೊಡೆದು ಹಾಕಲು ಗಾಂಧಿ ಕುಟುಂಬ ಈ ಬಾರಿ ಚುನಾವಣೆಯಲ್ಲಿ ಸ್ರ್ಪಧಿಸದೆ ಹಿಂದೆ ಸರಿದಿತ್ತು.
    ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂಬ ನಿರ್ಧಾರದ ಬಳಿಕ ಚುನಾವಣೆ ಸ್ವರೂಪವೇ ಬದಲಾಯಿತು.
    ಅಬ್ಬರ, ಆಡಂಬರವಿಲ್ಲದೆ ಪ್ರಚಾರ ನಡೆದಿತ್ತು.

    Verbattle
    Verbattle
    Verbattle
    ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದಲ್ಲಿ ಹೊಸ ರೀತಿಯ ISIS
    Next Article UK ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ಅಶೋಕ್ ಬಾಣ ಗುರಿಮುಟ್ಟಲಿದೆಯಾ..
    • винлаб промокод на скидку on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.