Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    ಚುನಾವಣೆ 2024

    ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi

    vartha chakraBy vartha chakraApril 16, 20244 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದ ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ (Indira Gandhi)
    ರಾಜಕೀಯವಾಗಿ ತೀವ್ರ ಹಿನ್ನಡೆ ಅನುಭವಿಸಿದ ನಂತರ ಅವರಿಗೆ ರಾಜಕೀಯ ಮರು ಹುಟ್ಟು ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಕರ್ನಾಟಕ.
    ಕರ್ನಾಟಕದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಉದ್ದೇಶದ ಚರಿತ್ರೆಯಲ್ಲಿ ಹೊಸ ದಾಖಲೆ ನಿರ್ಮಿಸಿದ ಇಂದಿರಾ ಗಾಂಧಿಯವರ ಅಂದಿನ ಚುನಾವಣೆಯ ಕುರಿತು ಒಂದು ವರದಿ ಇಲ್ಲಿದೆ.

    ತುರ್ತು ಪರಿಸ್ಥಿತಿಯ ನಂತರ 1978ರಲ್ಲಿ ನಡೆದ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಸೋತ ಇಂದಿರಾಗಾಂಧಿ, ಉಪ ಚುನಾವಣೆಗಾಗಿ ಚಿಕ್ಕಮಗಳೂರು ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ರಾಜ್ಯದಲ್ಲಿ ಡಿ. ದೇವರಾಜ ಅರಸು ನೀಡಿದ ಆಡಳಿತವೇ ಕಾರಣ. ಇಂದಿರಾಗಾಂಧಿ ಅವರ ಜೀವನ ಚರಿತ್ರೆ ಬರೆದಿರುವ ಕಾಥೇಲಿನ್ ಫ್ರಾಂಕ್ ಅವರೇ ಇದನ್ನು ಹೇಳಿದ್ದಾರೆ.
    ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇ.50 ರಷ್ಟು ಮಹಿಳೆಯರು, ಶೇ.45 ರಷ್ಟು ಹಿಂದುಳಿದ, ದಲಿತ ಹಾಗೂ ಅಲ್ಪಸಂಖ್ಯಾತ ಮತದಾರರು ಇದ್ದರು. ಅರಸು ಅವರು ತಳವರ್ಗದ ಜನರಲ್ಲಿ ಭರವಸೆ ತುಂಬುವ ಅನೇಕ ಯೋಜನೆ ತಂದಿದ್ದರು. ಭೂ ಸುಧಾರಣಾ ಕಾಯ್ದೆ, ಜೀತ ವಿಮುಕ್ತಿ, ಮಲ ಹೊರುವ ಪದ್ದತಿ ನಿಷೇಧ ಇವೆಲ್ಲ ಈ ಕ್ಷೇತ್ರದಲ್ಲಿ ಪರಿಣಾಮ ಬೀರಿರುವ ಮಾಹಿತಿ ಇಂದಿರಾ ಸಂಗ್ರಹಿಸಿದ್ದರು.

    ತಳ ವರ್ಗದ ಜನ, ಬಡವರು ಅರಸು ಆಡಳಿತದ ಫಲಾನುಭವಿಗಳಾಗಿದ್ದಾರೆ ಎಂಬ ಆಶಾದಾಯಕ ವಿವರವೂ ಸಿಕ್ಕಿತ್ತು. ಆದ್ದರಿಂದಲೇ ಕರ್ನಾಟಕದಲ್ಲಿ ಕಾಂಗ್ರೆಸ್ 26 ಸ್ಥಾನಗಳನ್ನು ಆ ಚುನಾವಣೆಯಲ್ಲಿ
    ಗೆದ್ದಿತ್ತು. ಆದ್ದರಿಂದಲೇ ಅವರು ಈ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು.
    ರಾಯ್‌ಬರೇಲಿಯಲ್ಲಿ ಇಂದಿರಾಗಾಂಧಿ 1,22,517 ಮತಗಳನ್ನು ಪಡೆದಿದ್ದರೆ, ಅವರ ಎದುರು ಭಾರತೀಯ ಲೋಕದಳದ ಅಭ್ಯರ್ಥಿ ರಾಜನಾರಾಯಣ್ ಅವರು 1.77,719 ಮತಗಳನ್ನು ಪಡೆದು ಚುನಾಯಿತರಾಗಿದ್ದರು.
    ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಇಂದಿರಾ ನಿರ್ಧರಿಸಿದ ನಂತರ ಅಲ್ಲಿಂದ ಗೆದ್ದಿದ್ದ ಡಿ.ಬಿ. ಚಂದ್ರೇಗೌಡ ರಾಜೀನಾಮೆ ನೀಡಿದರು. ಇಂದಿರಾ ಎದುರು ಜನತಾ ಪರಿವಾರದ ಅಭ್ಯರ್ಥಿಯಾಗಿ ವೀರೇಂದ್ರ ಪಾಟೀಲ್‌ ಸ್ಪರ್ಧೆ ಮಾಡಿದರು.

    ಅಟಲ್ ಬಿಹಾರಿ ವಾಜಪೇಯಿ ಲಾಲ್ ಕೃಷ್ಣ ಅಡ್ವಾಣಿ ಜಾರ್ಜ್ ಫರ್ನಾಂಡಿಸ್ ಸೇರಿದಂತೆ ಅಂದಿನ
    ಜನತಾ ಪರಿವಾರದ ಘಟಾನುಘಟಿ ನಾಯಕರು ಇಂದಿರಾ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದರು.
    ಉಗ್ರ ಭಾಷಣಕಾರರಾಗಿದ್ದ ಜಾರ್ಜ್ ಫರ್ನಾಂಡೀಸ್ ಅವರು, ಇಂದಿರಾ ಅವರನ್ನು ಕುರಿತು ‘ಶೀ ಈಸ್ ಕೊಬ್ರಾ’ ಎಂಬ ಆರೋಪವನ್ನೇ ಮಾಡಿದ್ದರು. ಆಗ ಪ್ರಧಾನಿಯಾಗಿದ್ದ ಮೊರಾರ್ಜಿ ದೇಸಾಯಿ ಅವರಿಗೆ ಇಂದಿರಾ ಮತ್ತೆ ಸಂಸತ್‌ಗೆ ಬರುವುದು ಇಷ್ಟವಿರಲಿಲ್ಲ. ಆದ್ದರಿಂದಲೇ ಅವರನ್ನು ಸೋಲಿಸಲು ಎಲ್ಲ ಪ್ರಯತ್ನ ಮಾಡಿದ್ದರು. ಹೆಜ್ಜೆ ಹೆಜ್ಜೆಗೂ ಪ್ರಚಾರದಲ್ಲಿ ಕಿರುಕುಳ ನೀಡಿದ್ದರು.

    ಪ್ರಚಾರ ವೈಖರಿ:
    ಪ್ರಚಾರ ಹೇಗಿತ್ತು ಇಂದಿರಾ ಅವರ ಪ್ರಚಾರದಲ್ಲಿ ಬಹಳ ಭದ್ರತೆ ಇರುತ್ತಿತ್ತು. ಯಾವುದೇ ಸೌಲಭ್ಯಗಳೇ ಇಲ್ಲದ ಅತಿಥಿ ಗೃಹಗಳಲ್ಲಿ ತಂಗುತ್ತಿದ್ದರು. ಕೇಂದ್ರ ಸರ್ಕಾರ ಕಳಸದ ಬಳಿಯ ಅತಿಥಿ ಗೃಹದಲ್ಲಿ ಒಂದು ದಿನ ಕಾಯ್ದಿರಿಸಿದ್ದ ರೂಂನ್ನು ಕೊಡದಂತೆ ಆದೇಶಿಸಿತ್ತು. ಇಂದಿರಾ ಯಾವುದೇ ತಕರಾರು ಮಾಡಲಿಲ್ಲ. ಆಗ ರಾತ್ರಿ 12.30 ಆಗಿತ್ತು. ಅವರನ್ನು ಕಾರ್ಕಳದ ಬಳಿಯ ಎತ್ತರದ ಗುಡ್ಡದ ಮೇಲಿದ್ದ ಅತಿಥಿ ಗೃಹಕ್ಕೆ ಕರೆದುಕೊಂಡು ಹೋಗಲು ಮುಖಂಡರು ನಿರ್ಧರಿಸಿದರು. ಆದರೆ ಜೀಪು ಓಡಿಸಲು ಚಾಲಕರು ಹಿಂದೇಟು ಹಾಕಿದರು. ಕೊನೆಗೆ ಚಂದ್ರೇಗೌಡರೇ ಚಾಲಕರಾಗಿ ಅವರಿಗೆ ಧೈರ್ಯ ತುಂಬಿ ದೀಪು ಚಲಾಯಿಸಿಕೊಂಡು ಬಂದಿದ್ದರು.
    ಇಂದಿರಾ ಅವರಿದ್ದ ಜೀಪು ಅತಿಥಿಗೃಹದ ಬಳಿಗೆ ತಂದಾಗ ‘ಯೂ ಆರ್ ಗುಡ್ ಡ್ರೈವರ್’ ಎಂದು ಪ್ರಶಂಸೆ ಮಾಡಿದ್ದರು. ಅಲ್ಲಿ ಕಾರ್ಯಕರ್ತರ ಜತೆ ಊಟ ಮಾಡಿ ವಿಶ್ರಾಂತಿಗೆ ಹೋದರೆ, ರಾಜ್ಯದ ಮುಖಂಡರೆಲ್ಲ ಚಳಿಯಲ್ಲಿ ಕೂತು ರಾತ್ರಿ ಇಡೀ ಜಾಗರಣೆ ಮೂಲಕ ಕಾಲಕಳೆದಿದ್ದರು.

    ಪ್ರಚಾರದಲ್ಲಿ ಮೌನ:
    ಚಂದ್ರೇಗೌಡರ ಸ್ವಂತ ಊರು ದಾರದಹಳ್ಳಿಯಲ್ಲಿ ಅವರ ಅಣ್ಣನ ಮನೆಯಲ್ಲಿ ಒಮ್ಮೆ ಇಂದಿರಾ ವಾಸ್ತವ್ಯ ಮಾಡಿದ್ದರು. ಒಂದು ದಿನ ಬೆಳಗಿನ ಜಾವ ಗೌಡರ ಅಣ್ಣ ಹೃದಯಾಘಾತದಿಂದ ನಿಧನರಾದರು. ಹೆಣ್ಣು ಮಕ್ಕಳೆಲ್ಲ ಅಳಲು ಪ್ರಾರಂಭಿಸಿದ್ದರು. ಬೆಳಗ್ಗೆ ಎದ್ದು ಬಂದ ಇಂದಿರಾಗಾಂಧಿ ಅಲ್ಲಿನ ಪರಿಸ್ಥಿತಿ ನೋಡಿ ಬೇಸರ ಪಟ್ಟರು. ಶವಕ್ಕೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಹೋದರು. ಇಡೀ ದಿನ ಯಾವ ಸಭೆಯಲ್ಲೂ ಮಾತನಾಡಲಿಲ್ಲ. ಬರೀ ಕೈ ಮುಗಿದರು. ಊಟ, ತಿಂಡಿಯನ್ನು ಮಾಡಲಿಲ್ಲ. ಸಂಜೆ ಬರೀ ಒಂದೇ ಒಂದು ಸೇಬು ತಿಂದಿದ್ದರು. ಪ್ರಚಾರದ ಸಂದರ್ಭದಲ್ಲಿ ನಿದ್ದೆ, ಊಟ, ತಿಂಡಿಗೆ ಯಾವತ್ತೂ ಯೋಚಿಸಿದವರೇನು ಅಲ್ಲ.

    ಚಂದ್ರೇಗೌಡರು ಇಂದಿರಾ ಅವರಿಗೆ ಒಂದು ಲಕ್ಷ ಅಂತರದಲ್ಲಿ ಗೆಲ್ಲುತ್ತೀರಿ ಎಂಬ ಮಾತನ್ನು ಹೇಳಿದ್ದರು. ಫಲಿತಾಂಶ ಬಂದಾಗ ಇಂದಿರಾ ಅವರು 2,49,376 ಹಾಗೂ ವೀರೇಂದ್ರ ಪಾಟೀಲ್ 1,72,043 ಮತಗಳನ್ನು ಪಡೆದಿದ್ದರು. ಇಂದಿರಾ 77,333 ಮತಗಳ ಅಂತರದಿಂದ ಆಯ್ಕೆಯಾಗಿದ್ದರು. ಆಗ ಅವರು ಚಂದ್ರೇಗೌಡ ಅವರ ಬಳಿಯಲ್ಲಿ ಉಳಿದ 23 ಸಾವಿರ ಮತ ಎಲ್ಲಿ ಎಂಬ ಹಾಸ್ಯ ಚಟಾಕಿ ಹಾರಿಸಿದ್ದರು. ಮತಗಳು ಕಡಿಮೆಯಾಗಿದ್ದರ ಬಗ್ಗೆ ಮಾಹಿತಿ ಸಹ ಪಡೆದಿದ್ದರು. ಚುನಾವಣೆ ಮುಗಿಸಿ ವಾಪಾಸು ಹೋದ ನಂತರ ಸ್ವತಃ ಇಂದಿರಾ ಅವರೇ ಇಲ್ಲಿನ ಮುಖಂಡರಿಗೆ ಪತ್ರ ಬರೆದು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದರು.

    Verbattle
    Verbattle
    Verbattle
    ಉಗ್ರ ಕಾಂಗ್ರೆಸ್ Election ರಾಜಕೀಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleದೇಶದ ಮೊದಲ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ | India’s First Election
    Next Article ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    4 Comments

    1. Bnnrmoism on April 19, 2026 12:42 am

      tadalafil tablets 10 mg bluechew tadalafil review tadalafil cost walmart

      Reply
    2. 부산호빠 on April 21, 2026 4:59 pm

      부산호빠

      Reply
    3. Bbrfmoism on April 21, 2026 9:38 pm

      non prescription online pharmacy reputable canadian online pharmacies legitimate mexican pharmacy online

      Reply
    4. TOTO138 on April 22, 2026 5:50 am

      TOTO138 LOGIN

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Gidroizolyaciya podvalov_irol on ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Gidroizolyaciya podvalov_qzot on ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.