Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IAS ಅಧಿಕಾರಿ ಸೋಗಿನಲ್ಲಿ ವಂಚನೆ
    ಅಪರಾಧ

    IAS ಅಧಿಕಾರಿ ಸೋಗಿನಲ್ಲಿ ವಂಚನೆ

    vartha chakraBy vartha chakraDecember 20, 2022Updated:December 20, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಡಿ.20-ಓದಿದ್ದು 8ನೇ ತರಗತಿ, ಆದರೂ ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 12ಕ್ಕೂ ಹೆಚ್ಚು ಮಹಿಳೆಯರಿಗೆ ಖತರ್ನಾಕ್ ಖದೀಮನೊಬ್ಬ ವಂಚನೆ ನಡೆಸಿ ಲಕ್ಷಾಂತರ ಕೊಳ್ಳೆ ಹೊಡೆದ ಘಟನೆ ನಡೆದಿದೆ.
    ವಿಕಾಸ್ ಗೌತಮ್ ಬಂಧಿತ ಆರೋಪಿಯಾಗಿದ್ದು, ಟ್ವಿಟ್ಟರ್, ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್‍ನಲ್ಲಿ ನಕಲಿ ಖಾತೆಯನ್ನು ರಚಿಸಿ ಐಪಿಎಸ್ ವಿಕಾಸ್‌ ಯಾದವ್‌ ಎಂದು ಹೆಸರನ್ನು ಬರೆದುಕೊಂಡಿದ್ದಾನೆ.
    ಅಷ್ಟೇ ಅಲ್ಲದೇ ಖಾತೆಯನ್ನು ಅಧಿಕೃತ ಎಂದು ತೊರಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದ. ತಾನು ಸರ್ಕಾರಿ ಅಧಿಕಾರಿ ಎಂದು ಹೇಳಲು ಸರ್ಕಾರಿ ಕಾರಿನ ಮುಂದೆ ನಿಂತು ಪೋಸ್ ನೀಡಿ ನಟಿಸಿ ಮಹಿಳೆಯರಿಂದ ಹಣ ಲೂಟಿ ಮಾಡಿ ವಂಚನೆ ನಡೆಸಿ‌ ಕೊನೆಗೂ‌ ಪೊಲೀಸರ ಅತಿಥಿಯಾಗಿದ್ದಾನೆ.
    ಸಾಮಾಜಿಕ ಜಾಲತಾಣದಲ್ಲಿ ಐಪಿಎಸ್‌ ವಿಕಾಸ್‌ ಯಾದವ್‌ಎಂದು ಹೆಸರನ್ನು ಪ್ರೊಫೈಲ್‌ ನಲ್ಲಿ ಹಾಕಿದ್ದಾನೆ. ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುವುದು ಹಾಗೂ ಅವರಿಂದ ಹಣ ಪಡೆದುಕೊಂಡು ವಂಚಿಸುವುದು ಈತನ ಕೆಲಸ. ಪೊಲೀಸ್‌ ಅಧಿಕಾರಿಯಂತೆ ನಟಿಸುವುದು ಮಾತ್ರವಲ್ಲದೆ, ಪೊಲೀಸ್‌ ವಾಹನದ ಮುಂದೆ ನಿಂತು ಫೋಟೋ ತೆಗೆದುಕೊಂಡ ಫೋಟೋಗಳನ್ನು ಕೂಡ ಈತ ಸೋಶಿಯಲ್‌ ಮೀಡಿಯಾದಲ್ಲಿ ಆಪ್ಲೋಡ್‌ ಮಾಡುತ್ತಿದ್ದ.
    ಸಿಕ್ಕಿಬಿದ್ದದ್ದು ಹೇಗೆ:
    ಇತ್ತೀಚೆಗೆ ವಿಕಾಸ್‌ ದಿಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ವೈದ್ಯೆ ಒಬ್ಬರ ಪರಿಚಯವನ್ನು ಮಾಡಿಕೊಂಡು ಆನ್‌ಲೈನ್‌ ನಲ್ಲಿ ಚಾಟಿಂಗ್‌ ಮಾಡುತ್ತಾ ಇಬ್ಬರು ಆತ್ಮೀಯವಾಗಿದ್ದರು. ವಿಕಾಸ್‌ ಒಬ್ಬ ಪೊಲೀಸ್‌ ಎಂದೇ ನಂಬಿಕೊಂಡಿದ್ದ ವೈದ್ಯೆ ನಂಬಿಕೆಯಿಂದ ಆತನ ಬಳಿ ಎಲ್ಲವನ್ನು ಹಂಚಿಕೊಂಡಿದ್ದರು. ವಿಕಾಸ್‌ ಇದನ್ನೇ ಆಧಾರವಾಗಿಟ್ಟುಕೊಂಡು ಮಹಿಳೆಯ ಖಾತೆಯಿಂದ 25 ಸಾವಿರ ರೂ.ವನ್ನು ವಿಥ್‌ ಡ್ರಾ ಮಾಡಿಕೊಂಡಿದ್ದ. ಒಂದು ದಿನ ವೈದ್ಯೆಗೆ ವಿಕಾಸ್‌ ವಂಚಕವೆಂದು ತಿಳಿಯುತ್ತದೆ. ಕೂಡಲೇ ಆಕೆ ಪೊಲೀಸ್‌ ಠಾಣೆಗೆ ದೂರು ನೀಡುತ್ತಾರೆ. ಈ ವೇಳೆ ವಿಕಾಸ್‌ ತನಗೆ ರಾಜಕಾರಣಿಗಳ ಪರಿಚಯವಿದೆ ಎಂದು ಬೆದರಿಕೆ ಹಾಕುತ್ತಿದ್ದ.
    ಪೊಲೀಸರು ದೂರಿನ ಆಧಾರದ ಮೇಲೆ ವಿಕಾಸ್‌ ಗೌತಮ್‌ ಅಲಿಯಾಸ್ ವಿಕಾಸ್‌ ಯಾದವ್‌ ನನ್ನು ಬಂಧಿಸುತ್ತಾರೆ.
    ವಿಕಾಸ್ ಗೌತಮ್ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿಯಾಗಿದ್ದು, ಆರೋಪಿ 8 ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೆಲವು ಸಮಯ ವೆಲ್ಡಿಂಗ್ ಕೋರ್ಸ್ ಮಾಡಿದ್ದಾನೆ ಎಂದು ದೆಹಲಿ ಪೊಲೀಸ್ ಅಧಿಕಾರಿ ಹರಿಂದರ್ ಸಿಂಗ್ ಹೇಳಿದ್ದಾರೆ.
    ಕ್ರಿಮಿನಲ್ ಹಿನ್ನೆಲೆ:
    ವಿಕಾಸ್ ಗೌತಮ್ ನಾಗರಿಕ ಸೇವಾ ಪರೀಕ್ಷಾ ಕೋಚಿಂಗ್ ಕೇಂದ್ರಗಳ ಕೇಂದ್ರವಾದ ಉತ್ತರ ದೆಹಲಿಯ ಮುಖರ್ಜಿ ನಗರದ ರೆಸ್ಟೋರೆಂಟ್‌ನಲ್ಲಿಯೂ ಕೆಲಸ ಮಾಡುತ್ತಿದ್ದ. ಆತ ಆ ಪ್ರದೇಶದಲ್ಲಿ ನಾಗರಿಕ ಸೇವೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನೋಡುತ್ತಿದ್ದ ಮತ್ತು ಅಲ್ಲಿಂದ ಐಪಿಎಸ್ ಅಧಿಕಾರಿಯಂತೆ ನಟಿಸಲು ಆರಂಭಿಸಿದ್ದ. ಇದುವರೆಗೆ ಅನೇಕ ಮಹಿಳೆಯರಿಗೆ ಈ ರೀತಿ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
    ಇಷ್ಟು ಮಾತ್ರವಲ್ಲದೆ ವಿಕಾಸ್‌ ಒಬ್ಬ ಕ್ರಿಮಿನಲ್‌ ಹಿನ್ನೆಲೆವುಳ್ಳ ವ್ಯಕ್ತಿ. ಉತ್ತರ ಪ್ರದೇಶ ಮತ್ತು ಗ್ವಾಲಿಯರ್‌ನಲ್ಲಿ ವಂಚನೆ ಆರೋಪದ ಮೇಲೆ ಈತ ಜೈಲಿನಲ್ಲಿದ್ದ ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ

    ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿದ್ದರು LTTE ಉಗ್ರರು
    Next Article Elon Musk ಗೆ ತಕ್ಷಣವೇ ಮೂರ್ಖನೊಬ್ಬ ಬೇಕಂತೆ!
    vartha chakra
    • Website

    Related Posts

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    June 17, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • a1nx7 on ನೀರು ತರಲು ಹೋದವರು ಬರಲೇ ಇಲ್ಲ | Raichur
    • nktll on ಎರಡು ಜಡೆ ಹಾಕಿಲ್ಲ ಅಂದ್ರೆ ಹೀಗಾ ಮಾಡೋದು.?
    • wlmeh on ಕಣಕ್ಕಿಳಿದ ನಿಖಿಲ್ ಕುಮಾರಸ್ವಾಮಿ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe