ಬೆಂಗಳೂರು,ಏ.23-ಯುಟ್ಯೂಬ್ ಚಾನಲ್ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚನೆಗೊಳಗಾಗಿರುವ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ ಅಕುರಾತಿ ನೀಡಿದ ದೂರಿನ ನೀಡಿದ ಮೇರೆಗೆ ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಮಿಳುನಾಡಿನ ಮಧುರೈ ಸುಂಗುಡಿ ಕಾಟನ್ ಸೀರೆ ಮಾರಾಟದ ಬಗ್ಗೆ ನಗರದ ಪೂರ್ಣಿಮಾ ಕಲೆಕ್ಷನ್ ವತಿಯಿಂದ ಮಾಡಲಾಗಿದ್ದ ವಿಡಿಯೋವನ್ನು ಪಲ್ಲವಿ ನೋಡಿದ್ದರು. ಬಳಿಕ ಸೀರೆ ಆಯ್ಕೆ ಮಾಡಿ, ಅದರ ಸ್ಕ್ರೀನ್ ಶಾಟ್ ಜೊತೆಗೆ ಆನ್ಲೈನ್ ಮೂಲಕ ಮಾರ್ಚ್ 10ರಂದು ಗೂಗಲ್ ಪೇ ಮೂಲಕ 850 ರೂಪಾಯಿ ಪಾವತಿಸಿದ್ದರು. ಆದರೆ ಹಲವು ದಿನಗಳು ಕಳೆದರೂ ಮಾರಾಟಗಾರರು ಸೀರೆ ಮನೆ ವಿಳಾಸಕ್ಕೆ ಕಳುಹಿಸಲಿರಲಿಲ್ಲ. ಅಲ್ಲದೆ, ಹಣವನ್ನು ರಿಫಂಡ್ ಮಾಡಿರಲಿಲ್ಲ. ಕರೆ ಹಾಗೂ ಮೇಸೆಜ್ ಮಾಡಿದರೂ ಸ್ಪಂದಿಸದೆ ತನಗೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ಧಾರೆ.
ವಿಡಿಯೋದಲ್ಲಿ ಬಂದ ಜಾಹೀರಾತಿನಿಂದ ತನಗೆ ಮಾತ್ರವಲ್ಲದೆ, ಹಲವರಿಗೂ ಮೋಸ ಮಾಡಿರುವ ಶಂಕೆಯಿದೆ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮಹಿಳಾ ಅಧಿಕಾರಿ ಆಗ್ರಹಿಸಿದ್ಧಾರೆ.
Previous Articleಐಸ್ ಕ್ರೀಮ್ ನಿಂದ ಜೀವ ಉಳಿಯಿತು
Next Article ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ