Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಜರಾತ್ ನಲ್ಲಿ ಡ್ರಗ್ಸ್ Factory ಪತ್ತೆ..
    ಸುದ್ದಿ

    ಗುಜರಾತ್ ನಲ್ಲಿ ಡ್ರಗ್ಸ್ Factory ಪತ್ತೆ..

    vartha chakraBy vartha chakraAugust 17, 2022Updated:August 17, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅಹಮದಾಬಾದ್ (ಗುಜರಾತ್‌),ಆ.17- ವಡೋದರಾ ಹಾಗು ಅಂಕಲೇಶ್ವರದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿ ಬರೋಬರಿ 2 ಸಾವಿರ ಕೋಟಿ ಮೌಲ್ಯದ 713 ಕೆಜಿ ಡ್ರಗ್ ವಶಪಡಿಸಿಕೊಳ್ಳಲಾಗಿದೆ.
    ರಾಜ್ಯದ ಮಾದಕ ದ್ರವ್ಯ ನಿಗ್ರಹ ದಳ(ಎಟಿಎಸ್) ವಡೋದರಾದಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಮುಂಬೈ ಪೊಲೀಸರ ಆ್ಯಂಟಿ ನಾರ್ಕೋಟಿಕ್ಸ್ ಸೆಲ್ ಭರೂಚ್‌ನ ಅಂಕಲೇಶ್ವರದಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ.
    ವಡೋದರಾದ ಕಾರ್ಖಾನೆಯೊಂದರಲ್ಲಿ ಎಂಡಿಎಂಎ ಡ್ರಗ್ಸ್​ ಅನ್ನು ಅಕ್ರಮವಾಗಿ ತಯಾರಿಸಲಾಗುತ್ತಿತ್ತು. ಮೋಕ್ಸಿ ಗ್ರಾಮದ ಈ ಕಾರ್ಖಾನೆಯಿಂದ ವಶಪಡಿಸಿಕೊಂಡ 200 ಕೆಜಿ ಡ್ರಗ್ಸ್​ನ ಮೌಲ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 1,000 ಕೋಟಿ ರೂಗಳಾಗಿದೆ ಎಂದು ಅಂದಾಜಿಸಲಾಗಿದೆ. ವಶಪಡಿಸಿಕೊಂಡ ಡ್ರಗ್ಸ್ ಅನ್ನು ಸುಮಾರು 6 ತಿಂಗಳ ಹಿಂದೆಯೇ ಸಿದ್ಧಪಡಿಸಲಾಗಿತ್ತು ಎಂದು ಎಟಿಎಸ್ ಡಿಐಜಿ ದೀಪೇನ್ ಭದ್ರನ್ ಹೇಳಿದ್ದಾರೆ. ದೇಶದ ವಿವಿಧ ಭಾಗಗಳಿಗೆ ಸರಬರಾಜಾಗುವ ಎಲ್ಲಾ ರೀತಿಯ ಡ್ರಗ್ಸ್​​ಗಳನ್ನು ಒಂದೇ ಬಾರಿಗೆ ಸಿದ್ಧಪಡಿಸಿರುವ ಸಾಧ್ಯತೆಗಳಿವೆ.
    ಮುಂಬೈ ಪೊಲೀಸರು ಭರೂಚ್‌ನಿಂದ 513 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಮುಂಬೈ ಪೊಲೀಸರ ಆ್ಯಂಟಿ ನಾರ್ಕೋಟಿಕ್ಸ್ ಸೆಲ್ ಗುಜರಾತ್‌ನ ಭರೂಚ್ ಜಿಲ್ಲೆಯ ಅಂಕಲೇಶ್ವರದಲ್ಲಿ 513 ಕೆಜಿ ಎಂಡಿ ಡ್ರಗ್ ಅನ್ನು ವಶಪಡಿಸಿಕೊಂಡಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ 7 ಮಂದಿಯನ್ನು ನಾರ್ಕೋಟಿಕ್ ಸೆಲ್ ನ ವರ್ಲಿ ಶಾಖೆ ಬಂಧಿಸಿದೆ. ವಶಪಡಿಸಿಕೊಂಡ ಮಾದಕ ದ್ರವ್ಯದ ಮೌಲ್ಯ 1,260 ಕೋಟಿ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
    ವಡೋದರಾದಲ್ಲಿ ಕೆಮಿಕಲ್ ನೆಪದಲ್ಲಿ ಡ್ರಗ್ ತಯಾರಿಸಲಾಗುತ್ತಿತ್ತು ಎಂದು ಗುಜರಾತ್ ಎಟಿಎಸ್‌ನ ಡಿಐಜಿ ದೀಪೇನ್ ಭದ್ರನ್ ಹೇಳಿದ್ದಾರೆ. ವಡೋದರಾದ ಸಾವ್ಲಿ ತಹಸಿಲ್ ಬಳಿ ಮಾದಕ ವಸ್ತುಗಳ ರವಾನೆಯಾಗುತ್ತಿದೆ ಎಂಬ ರಹಸ್ಯ ಮಾಹಿತಿ ಲಭಿಸಿದ್ದರಿಂದ ಸೋಮವಾರ ಮೋಕ್ಷಿ ಗ್ರಾಮದ ಈ ಕಾರ್ಖಾನೆ ಮೇಲೆ ಎಟಿಎಸ್ ದಾಳಿ ನಡೆಸಿತ್ತು. ಅಲ್ಲಿ ಡ್ರಗ್ಸ್ ಸಂಗ್ರಹ ಪತ್ತೆಯಾಗಿದ್ದು ಮಾತ್ರವಲ್ಲದೇ ರಾಸಾಯನಿಕಗಳನ್ನು ತಯಾರಿಸುವ ನೆಪದಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಕೆಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತನಿಖೆಯ ನಂತರವಷ್ಟೇ ಸಂಪೂರ್ಣ ಮಾಹಿತಿ ಹೊರಬೀಳಲಿದೆ ಎಂದು ಅವರು ತಿಳಿಸಿದ್ದಾರೆ.
    ಪ್ರಾಥಮಿಕ ತನಿಖೆಯಲ್ಲಿ ಗೋವಾ ಮತ್ತು ಮುಂಬೈಗೆ ಡ್ರಗ್ಸ್ ಪೂರೈಕೆಯಾಗುತ್ತಿರುವುದು ಪತ್ತೆಯಾಗಿದೆ ಎಂದು ದೀಪೇನ್ ಭದ್ರನ್ ಹೇಳಿದ್ದಾರೆ. ಇಲ್ಲಿಂದ ದೇಶದ ಇತರ ಭಾಗಗಳಿಗೂ ಡ್ರಗ್ಸ್ ರವಾನೆಯಾಗಿರುವ ಬಗ್ಗೆ ಎಟಿಎಸ್ ಶಂಕೆ ವ್ಯಕ್ತಪಡಿಸಿದೆ. ಈ ದಂಧೆಯಲ್ಲಿ ಭಾಗಿಯಾಗಿರುವವರನ್ನೂ ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    News ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಮುಸ್ಲಿಂ ಗೂಂಡಾಗಳೇ ಎಚ್ಚರ…!!
    Next Article Goods ಟ್ರೈನ್ ಗೆ ಡಿಕ್ಕಿಯಾದ Passenger ಟ್ರೈನ್
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn on ಸತ್ತವನು ಎದ್ದು‌ ಬಂದಾಗ
    • TommyKit on ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • TommyKit on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe