ನವದೆಹಲಿ : ರಾಷ್ಟ್ರ ರಾಜಕೀಯದಲ್ಲಿ ಆಪರೇಷನ್ ಕಮಲ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿದೆ ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕರನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನ ನಡೆಸಿದ್ದು ಇದಕ್ಕಾಗಿ 800 ಕೋಟಿ ರೂಪಾಯಿ ವೆಚ್ಚ ಮಾಡಲು ಯೋಜನೆ ಸಿದ್ದವಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ತಮ್ಮ 40 ಶಾಸಕರಿಗೆ ಬಿಜೆಪಿ ತಲಾ ₹20 ಕೋಟಿ ಆಮಿಷ ಒಡ್ಡಿದೆ ಎಂದು ಗಂಭೀರ ಆರೋಪವನ್ನು ಮಾಡಲಾಯಿತು. ಕೆಲವೇ ನಿಮಿಷಗಳಲ್ಲಿ ಈ ಸಭೆ ಮುಕ್ತಾಯಗೊಂಡಿದ್ದು, ಕೇಜ್ರಿವಾಲ್ ಸೇರಿದಂತೆ ಒಟ್ಟು 53 ಶಾಸಕರು ಉಪಸ್ಥಿತರಿದ್ದರು. ಸಚಿವ ಸತ್ಯೇಂದ್ರ ಜೈನ್ ಜೈಲಿನಲ್ಲಿರುವುದರಿಂದ ಸಭೆಗೆ ಗೈರಾಗಿದ್ದರು. ಉಳಿದಂತೆ 7 ಶಾಸಕರು ಸಭೆಯಿಂದ ಹೊರಗೆ ಉಳಿದಿದ್ದರು. ಈ ಪೈಕಿ ಓಕ್ಲಾ ಶಾಸಕ ಅಮಾನತುಲ್ಲಾ ಖಾನ್ ಅವರು ದೂರವಾಣಿ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು
ಸಭೆ ಬಳಿಕ ಎಎಪಿಯ ಎಲ್ಲ ಶಾಸಕರು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ, ಬಿಜೆಪಿಯ ‘ಆಪರೇಷನ್ ಕಮಲ’ ವಿಫಲಗೊಳ್ಳಲು ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ತಮ್ಮ ಪಕ್ಷದ 40 ಶಾಸಕರಿಗೆ ತಲಾ 20 ಕೋಟಿಯಂತೆ 800 ಕೋಟಿ ಆಮಿಷ ಒಡ್ಡಲು ದುಡ್ಡು ಎಲ್ಲಿಂದ ಬಂದಿದೆ ಎಂಬುದನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ಪಕ್ಷದ ವಕ್ತಾರ ಭಾರದ್ವಾಜ್ ಒತ್ತಾಯಿಸಿದರು.
Previous Articleವಿಜಯಪುರಕ್ಕೆ ಬಹು ಗ್ರಾಮ ಕುಡಿಯುವ ನೀರು
Next Article ಕಮೀಷನ್ ಬೆನ್ನಲ್ಲೇ ಕೋವಿಡ್ ಕರ್ಮಕಾಂಡ