Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 11 ಮದುವೆಯಾದ ಧೀರ : ಒಟ್ಟಿಗೆ ಇಬ್ಬರು ಪತ್ನಿಯರು ಪ್ರತ್ಯಕ್ಷ!!
    Viral

    11 ಮದುವೆಯಾದ ಧೀರ : ಒಟ್ಟಿಗೆ ಇಬ್ಬರು ಪತ್ನಿಯರು ಪ್ರತ್ಯಕ್ಷ!!

    vartha chakraBy vartha chakraJuly 14, 2022Updated:July 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹೈದರಾಬಾದ್ (ತೆಲಂಗಾಣ),ಜು.14- ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ಭೂಪನೊಬ್ಬ ಇದುವರೆಗೆ 11 ಮಂದಿ ಮಹಿಳೆಯರನ್ನು ಮದುವೆಯಾಗಿ ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ.
    ಖದೀಮನು‌ ಸಚಿವರೊಬ್ಬರ ಸಂಬಂಧಿಯೂ ಆಗಿದ್ದು, ಇದೇ ಈತನ ಬಂಡ ಧೈರ್ಯದ ಕಾರಣ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಗುಂಟೂರು ಜಿಲ್ಲೆಯ ಬೇತಂಪುಡಿಯ ಅಡಪ ಶಿವಶಂಕರ್ ಎನ್ನುವ ಖದೀಮನೇ 11ಮಂದಿ ಮಹಿಳೆಯರ ಮದುವೆಯಾಗಿ ವಂಚಿಸಿದ್ದಾನೆ. ವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದ ಈತ, ಮದುವೆ ಪರಿಚಯ ವೇದಿಕೆಗಳ ಮೂಲಕ ಮಹಿಳೆಯರನ್ನು ಕಂಡುಕೊಳ್ಳುತ್ತಿದ್ದ. ಹೀಗೆ ಒಬ್ಬರಿಗೆ ಗೊತ್ತಿಲ್ಲದೇ ಮತ್ತೊಬ್ಬರನ್ನು ಮದುವೆಯಾಗಿದ್ದಾನೆ.
    ಅಚ್ಚರಿ ಎಂದರೆ ಈತನಿಂದ ವಂಚನೆಗೆ ಒಳಗಾದವರೆಲ್ಲರೂ ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ.
    ಒಟ್ಟಿಗೆ ಇಬ್ಬರು ಪತ್ನಿಯರು ಪ್ರತ್ಯಕ್ಷ: ಶಿವಶಂಕರ್​ನ ಮೋಸಕ್ಕೆ ಬಲಿಯಾದ 11 ಮಂದಿಯ ಪೈಕಿ ಇಬ್ಬರು ಮಹಿಳೆಯರು ಒಟ್ಟಿಗೆ ಪ್ರತ್ಯಕ್ಷವಾದಾಗ ಈತನ ಬಂಡವಾಳ ಬಯಲಿಗೆ ಹಾಕಿದ್ದಾರೆ.
    ಹೈದರಾಬಾದ್​ ಪ್ರೆಸ್​ಕ್ಲಬ್​ನಲ್ಲಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ ಈ ಇಬ್ಬರು, ನಮ್ಮಂತೆ ಶಿವಶಂಕರ್ ಈಗಾಗಲೇ ಹಲವರಿಗೆ ವಂಚನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೇ, ಮದುವೆ ಹೆಸರಲ್ಲಿ ಮೋಸ ಮಾಡಿ ಸುಮಾರು 60 ಲಕ್ಷ ನಗದು ಹಾಗು ಚಿನ್ನಾಭರಣ ನೀಡಿದ್ದಾನೆ ಎಂದು ಅಳಲು ತೋಡಿಕೊಂಡರು.
    ದೊಡ್ಡ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದರಿಂದ ಪರಿಚಯ ಮಾಡಿಕೊಂಡು ಶಿವಶಂಕರ್​ ಮದುವೆಯಾಗುತ್ತಾನೆ. ಅದೊಂದು ದೊಡ್ಡ ಕೆಲಸ, ಯಾವಾಗ ಬೇಕಾದರೂ ಹೋಗಬೇಕಾಗುತ್ತದೆ ಎಂದು ಹೇಳುತ್ತಾನೆ. ಆದರೆ, ನಿಜವಾಗಿಯೂ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಕೆಲಸ ಇಲ್ಲದ ಶಿವಶಂಕರ್, ‘ಗ್ರಾಹಕರ’ ಬಳಿ ಹೋಗುವುದಾಗಿ ಹೇಳಿ ಬೇರೆ ಪತ್ನಿಯರ ಬಳಿ ಹೋಗುತ್ತಿದ್ದ ಎಂದು ಸಂತ್ರಸ್ತ ಪತ್ನಿಯರು ಹೇಳಿಕೊಂಡಿದ್ದಾರೆ.
    ಅಲ್ಲದೇ, ವಂಚನೆಗೊಳಗಾದ 11 ಮಂದಿ ಮಹಿಳೆಯರಲ್ಲಿ ಏಳು ಮಂದಿ ಕೊಂಡಾಪುರ ಪ್ರದೇಶದವರೇ ಆಗಿದ್ದಾರೆ. ಮುಂದೆ ಬೇರೆ ಯಾವ ಮಹಿಳೆಯರು ಕೂಡ ಶಿವಶಂಕರ್​ನಿಂದ ಮೋಸ ಹೋಗಬಾರದು ಎಂಬ ಉದ್ದೇಶದಿಂದ ಮಾಧ್ಯಮಗಳ ಮುಂದೆ ಬಂದಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಶಿವಶಂಕರ್ ವಿರುದ್ಧ ಈಗಾಗಲೇ ಹಲವು ಠಾಣೆಗಳಲ್ಲಿ ಪ್ರಕರಣಗಳಿದ್ದರೂ, ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ. ಈಗಲಾದರೂ, ಶಿವಶಂಕರ್​ಗೆ ಕಠಿಣ ಶಿಕ್ಷೆ ವಿಧಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಂತ್ರಸ್ತ ಮಹಿಳೆಯರು ಆಗ್ರಹಿಸಿದ್ದಾರೆ.

    hyderabad marriage telangana Trending viral ಮದುವೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleKick Boxing ನಿಂದ ಬಾಕ್ಸರ್ ಅಂತ್ಯ
    Next Article ಕಳ್ಳರ ಕುಟುಂಬ..!
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • m04iy on ಮುಜುಗರಕ್ಕೀಡಾದ ಸಚಿವ ಕೆ.ಜೆ.ಜಾರ್ಜ್.
    • pe6d3 on ಕೋಚಿಂಗ್ ಸೆಂಟರ್ ಗಳಿಗೆ ಬೀಳಲಿದೆ ಬ್ರೇಕ್ | Coaching Centers
    • zbirp on ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe