Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IPL ಟಿಕೆಟ್ ಗಾಗಿ ಮೂರು ಲಕ್ಷ ರೂಪಾಯಿ ಕಳಕೊಂಡ.
    ಅಪರಾಧ

    IPL ಟಿಕೆಟ್ ಗಾಗಿ ಮೂರು ಲಕ್ಷ ರೂಪಾಯಿ ಕಳಕೊಂಡ.

    vartha chakraBy vartha chakraMay 17, 202445 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.17-
    ಚುಟುಕು ಕ್ರಿಕೆಟ್ ‌ಐಪಿಎಲ್ ಪಂದ್ಯಾವಳಿಗಳು ಕ್ರಿಕೆಟ್ ಪ್ರೇಮಿಗಳಿಗೆ ಹಿಡಿಸಿರುವ ಹುಚ್ಚು ಅಂತಿಂತದ್ದಲ್ಲ.ಈ ಮ್ಯಾಚ್ ಗಳನ್ನು ಮೈದಾನದಲ್ಲಿ ನೋಡಲು ಅಭಿಮಾನಿಗಳು ಹಾತೊರೆಯುತ್ತಾರೆ.
    ಇಂತಹ ಅಭಿಮಾನವನ್ನು ಲಾಭವಾಗಿಸಿಕೊಂಡ ವಂಚಕರು ಕ್ರೀಡಾಭಿಮಾನಿಗಳಿಗೆ ಪಂಗನಾಮ ಹಾಕುತ್ತಿದ್ದಾರೆ.
    ಇಂತಹ ವಂಚನೆಯ ಸ್ಟೋರಿ ಇದು.ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ಹಾಗೂ ಆರ್ಸಿಬಿ ಪಂದ್ಯದ ಟಿಕೆಟ್ ಖರೀದಿಸಲು ಹೋದ ನಗರದ ಅಭಿಮಾನಿಯೊಬ್ಬ ಬರೋಬ್ಬರಿ 3 ಲಕ್ಷ ರೂ. ಕಳೆದುಕೊಂಡಿದ್ದಾರೆ.
    ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿರುವ ಈ ಎರಡೂ ತಂಡಗಳು ಪ್ಲೇ ಆಫ್  ಹಂತಕ್ಕೇರಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯ ಮಹತ್ವದ ಪಂದ್ಯವಾಗಿರುವ ಕಾರಣ ಈ ಪಂದ್ಯದ ಕಾವು ಹೆಚ್ಚಾಗಿದೆ. ಹೀಗಾಗಿ ಈ ಪಂದ್ಯ ನೋಡಲು ಅಭಿಮಾನಿಗಳು ಕಾಳಸಂತೆಯಲ್ಲಿ ದುಬಾರಿ ಬೆಲೆ ಕೊಟ್ಟು ಟಿಕೆಟ್ ಖರೀದಿ ಮಾಡುತ್ತಿದ್ದಾರೆ.
    ಇದನ್ನು ಗಮನಿಸಿದ ವಂಚಕ ಪದ್ಮ ಸಿನ್ಹಾ ವಿಜಯ್‌ ಕುಮಾರ್‌  ಐಪಿಎಲ್_2024 ಟಿಕೆಟ್ಸ್_24 ಎಂಬ ಖಾತೆಯ ಮೂಲಕ ಪಂದ್ಯಗಳ ಟಿಕೆಟ್ ಬುಕ್ಕಿಂಗ್ ಮಾಡಿಕೊಡಲಾಗುವುದು ಎಂದು ಹೇಳಿ ತನ್ನ ಮೊಬೈಲ್‌ ಸಂಖ್ಯೆ ಮತ್ತು ಆಧಾರ್‌ ಮಾಹಿತಿ ಎಲ್ಲವನ್ನೂ ಹಂಚಿಕೊಂಡು ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾನೆ.
     ಪ್ರತಿ ಟಿಕೆಟ್‌ಗೆ 2,300 ರೂ. ದರದಂತೆ 3 ಟಿಕೆಟ್‌ಗೆ 7,900 ರೂ. ನಿಗದಿ ಪಡಿಸಿದ್ದ. ಈ ಮೂಲಕ ಟಿಕೆಟ್‌ ಖರೀದಿಸಲು ಬರುವವರ ವಿಶ್ವಾಸ ಸಂಪಾದಿಸಿದ್ದ. ಇದನ್ನು ನಂಬಿದ ಬೆಂಗಳೂರು ಮೂಲದ 28 ವರ್ಷದ ಅಭಿಮಾನಿಯೊಬ್ಬ ಟಿಕೆಟ್ ಖರೀದಿಸಲು ಮುಂದಾಗಿ ತನ್ನ ಖಾತೆಯಲ್ಲಿದ್ದ 3 ಲಕ್ಷ ಕಳೆದುಕೊಂಡಿದ್ದಾನೆ.
    ವಿಜಯ್‌ ಕುಮಾರ್‌ ಆನ್‌ಲೈನ್‌ ಪಾವತಿ ಭರವಸೆ ನೀಡಿದ್ದಂತೆ ಈ ಅಭಿಮಾನಿಗೆ 3 ಇ-ಟಿಕೆಟ್‌ಗಳನ್ನು ವರ್ಗಾಯಿಸಿದ್ದಾನೆ. ಆದರೆ, ಹಣ ಪಾವತಿ ನಿಲ್ಲದೆ ಆಗಾಗ ಈ ಅಭಿಮಾನಿಯ ಖಾತೆಯಿಂದ 7,900 ರೂ.ಗಳಂತೆ ಹಣ ವರ್ಗಾವಣೆ ಆಗಿ 3 ಲಕ್ಷ ರೂ,ಗಳಿಗೂ ಅಧಿಕ ಮೊತ್ತ ವಂಚಕನ ಖಾತೆಗೆ ಸೇರಿದೆ. ಈ ವೇಳೆ ಅಭಿಮಾನಿ ವಿಜಯ್‌ ಕುಮಾರ್‌ಗೆ ಕರೆ ಮಾಡಿ ವಿಚಾರಿಸಿದಾಗ ತಾಂತ್ರಿಕ ದೋಷ ಕಾರಣ ಹೀಗಾಗಿದ್ದು, ಹಣವನ್ನು ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾನೆ.
    ಆ ಬಳಿಕವೂ ಕೂಡ ಹಣ ವರ್ಗಾವಣೆ ನಡೆದ ಕಾರಣ ಅನುಮಾನಗೊಂಡ ಅಭಿಮಾನಿ ಪೊಲೀಸರಿಗೆ ದೂರು ನೀಡಿದ್ದಾನೆ. ಹಣ ಪಾವತಿಯನ್ನು ತಡೆಯುವ ಹೊತ್ತಿಗಾಗಲೇ 3 ಲಕ್ಷ ರೂ. ಗಳಿಗೂ ಅಧಿಕ ಮೊತ್ತವನ್ನು ಕಳೆದುಕೊಂಡಿದ್ದು, ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?
    Next Article ರಾಜ್ಯದಲ್ಲಿ ಕೊಲೆ ಭಾಗ್ಯ ಯೋಜನೆ ಜಾರಿಯಲ್ಲಿದೆ.
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Angelicaasync on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • db bet казино on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • TimothyNug on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe